ದಾವಣಗೆರೆ ಜಿಲ್ಲಾ ಉಪ ವಿಭಾಗಾಧಿಕಾರಿಗಳ ಕಚೇರಿ ಎದುರು ಅನೈರ್ಮಲ್ಯ; ಕುಡುಕರ ತಾಣವಾಗಿ ಬದಲಾದ ಅಂಗಳ

Date:

ದಾವಣಗೆರೆ ರೈಲು ನಿಲ್ದಾಣದ ಪಕ್ಕದಲ್ಲಿರುವ ಜಿಲ್ಲಾ ಉಪವಿಭಾಗಾಧಿಕಾರಿಗಳ ಕಚೇರಿಯು ಸ್ವಚ್ಛತೆ ಮತ್ತು ಸುರಕ್ಷತೆ ಇಲ್ಲದೆ ಕಸದ ಮೈದಾನ ಮತ್ತು ಕುಡುಕರ ಅಡ್ಡೆಯಾಗಿ ಬದಲಾಗಿದ್ದು, ಸರ್ಕಾರಿ ಕಚೇರಿಗಳು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆ ಮೂಡಿದೆ.

ಪ್ರಸ್ತುತ ಹಳೆಯ ಕಟ್ಟಡದಲ್ಲಿಯೇ ಕಾರ್ಯ ನಿರ್ವಹಿಸುತ್ತಿರುವ ಉಪವಿಭಾಗಾಧಿಕಾರಿ ಮತ್ತು ಉಪ ವಿಭಾಗೀಯ ದಂಡಾಧಿಕಾರಿಗಳ ಕಚೇರಿ ಪ್ರೌಢಶಾಲಾ ಮೈದಾನದ ಎದುರಿನ ರಸ್ತೆಗೆ ಹೊಂದಿಕೊಂಡಂತಿದ್ದು, ಮೂರು ದಿಕ್ಕುಗಳಿಂದ ರೈಲು ನಿಲ್ದಾಣದಿಂದ ಸುತ್ತುವರಿದಿದೆ. ಇಂತಹ ಕಚೇರಿಗೆ ನಾಲ್ಕು ದಿಕ್ಕಿನಿಂದಲೂ ರಕ್ಷಣೆ ಇಲ್ಲದಾಗಿದ್ದು, ಸಂಜೆಯ ಆಫೀಸ್ ವೇಳೆ ನಂತರ ಸೂಕ್ತ ಬಂದೋಬಸ್ತ್, ಕಾವಲು ಇಲ್ಲದೆ ಕುಡುಕರ ತಾಣವಾಗಿ ಬದಲಾಗಿದೆಯೇ ಎನ್ನುವಂತಾಗಿದೆ.

ನಗರದ ಮಧ್ಯಭಾಗವಾದ ಜನಜಂಗುಳಿಯಿಂದ ಕೂಡಿರುವಂತಹ ಸ್ಥಳದಲ್ಲಿಯೂ ಕೂಡ ಸೂಕ್ತ ರಕ್ಷಣೆ ಇಲ್ಲದಿರುವುದು ಹಾಗೂ ಕಚೇರಿ ಆವರಣ ಕೂಡ ಕಸ ಕಡ್ಡಿಗಳಿಂದ ತುಂಬಿ ವಾರಾಂತ್ಯದಲ್ಲಿ ಸ್ವಚ್ಛಗೊಳಿಸದೆ ಹೋಗಿರುವುದು ಕಚೇರಿಯ ದುಃಸ್ಥಿತಿಗೆ ಮತ್ತು ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ದಾವಣಗೆರೆ ಉಪ ವಿಭಾಗಾಧಿಕಾರಿ ಎದುರು ಅನೈರ್ಮಲ್ಯ 1

ಶನಿವಾರ ಬೆಳಿಗ್ಗೆ ಸಂಘಟನೆಯೊಂದರ ಪ್ರತಿಭಟನೆಯ ವೇಳೆ ಈ ದಿನ.ಕಾಮ್‌ ಮಾಧ್ಯಮ ಪ್ರತಿನಿಧಿಗಳು, ಸಂಘಟನೆಗಳ ಮುಖಂಡರು ಕಚೇರಿ ಆವರಣಕ್ಕೆ ಭೇಟಿ ನೀಡಿದಾಗ ಈ ದೃಶ್ಯಗಳು ಕಂಡುಬಂದಿದ್ದು, ಕಚೇರಿಯ‌ ಮೇಲ್ಛಾವಣಿ ಹೊದಿಕೆಯನ್ನು ಸ್ವಚ್ಛಗೊಳಿಸುವ ವೇಳೆ ಕೆಳಗೆ ಹಾಕಿರುವ ಒಣ ಎಲೆ, ಕಸಕಡ್ಡಿ, ಪಕ್ಷಿ ಜನ್ಯ ತ್ಯಾಜ್ಯವನ್ನು ವಿಲೇವಾರಿ ಮಾಡದೇ ಕಚೇರಿ ಬಾಗಿಲಲ್ಲೇ ಬಿಟ್ಟು ಹೋಗಿರುವುದು ಕಂಡುಬಂದಿತು. ಅಲ್ಲದೆ ರೈಲು ನಿಲ್ದಾಣದ ಪೂರ್ವ ಭಾಗದ ಕಾಂಪೌಂಡಿಗೆ ಹೊಂದಿಕೊಂಡಿರುವ, ಅರಳಿ ಮರದ ಪಕ್ಕ ಸಾರ್ವಜನಿಕರಿಗೆ ಕಾಣದಂತೆ ಮರೆಯಲ್ಲಿರುವ ಕುಳಿತುಕೊಳ್ಳುವ ಚಾವಡಿ ಮೇಲೆ ದುಷ್ಕರ್ಮಿಗಳು ಮದ್ಯಪಾನ ಮಾಡಿ ಅಲ್ಲಿಯೇ ಮದ್ಯದ ಬಾಟಲಿ, ನೀರಿನ ಬಾಟಲಿ, ಶೇಂಗಾ ಬೀಜಗಳನ್ನು ಬಿಟ್ಟು ಹೋಗಿರುವ ದೃಶ್ಯವೂ ಕಂಡುಬಂದಿದೆ.

ಈ ಆವರಣದಲ್ಲಿಯೇ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ದಂಡಾಧಿಕಾರಿಗಳ ನ್ಯಾಯಾಲಯವೂ ಇದ್ದು, ಈ ಕಟ್ಟಡಗಳ ಹಿಂಬಾಗದ ಅಕ್ಕಪಕ್ಕದಲ್ಲಿಯೂ ತ್ಯಾಜ್ಯ ತುಂಬಿಕೊಂಡಿದ್ದು, ಸ್ವಚ್ಛತೆ ಮರೀಚಿಕೆಯಾಗಿದೆ.‌ ಅಲ್ಲಲ್ಲಿ ಮೂತ್ರ ವಿಸರ್ಜನೆಯ ತಾಣವಾಗಿಯೂ ಬದಲಾಗಿದೆ.‌ ತಡೆಗೋಡೆ ಪಕ್ಕದಲ್ಲಿ ಕಚೇರಿ ಆವರಣದಲ್ಲಿ ತಿಂಡಿ ತಿನಿಸುಗಳ ಪಾಕೆಟ್, ಇತರ ತ್ಯಾಜ್ಯಗಳು ಬಿದ್ದಿರುವುದು ಸಾಮಾನ್ಯ ದೃಶ್ಯಗಳಾಗಿವೆ.

ದಾವಣಗೆರೆ ಉಪ ವಿಭಾಗಾಧಿಕಾರಿ ಎದುರು ಅನೈರ್ಮಲ್ಯ 2

ಈ ಬಗ್ಗೆ ಕಾರ್ಮಿಕ ಸಂಘಟನೆಯ ಮುಖಂಡ ಮಂಜುನಾಥ್‌ ಪ್ರತಿಕ್ರಿಯಿಸಿದ್ದು, “ಸರ್ಕಾರಿ ಆವರಣಗಳು ಸ್ವಚ್ಛತೆಯಿಂದ ಜನಸ್ನೇಹಿಯಾಗಿರಬೇಕು. ಆದರೆ ಈ ಕಚೇರಿಗೆ ಸುರಕ್ಷತೆ ಇಲ್ಲವಾಗಿದೆ.‌ ರಾತ್ರಿ ವೇಳೆ ಕುಡುಕರಿಗೆ ಸ್ನೇಹಿಯಾಗಿದೆ. ರಾತ್ರಿ, ಸಂಜೆ ವೇಳೆ ಇಲ್ಲಿ ತಡೆಗೋಡೆ ದಾಟಿ ಯಾರಾದರೂ ಬರಬಹುದಾದ ಅಸುರಕ್ಷಿತೆ ಇಲ್ಲಿದೆ. ದುಷ್ಕರ್ಮಿಗಳು, ಕುಡುಕರು, ಪ್ರಯಾಣಿಕರು ಯಾರು ಬೇಕಾದರೂ ಅಕ್ರಮವಾಗಿ ಪ್ರವೇಶಿಸಬಹುದಾಗಿದೆ. ಈ ಘಟನೆ ನೋಡಿದರೆ ಇಂತಹ ಘಟನೆಗಳು ಯಾರಿಗೂ ಕಾಣದಂತೆ ಏಷ್ಟೋ ಬಾರಿ ನಡೆದಿರಬಹುದು ಎನ್ನುವ ಅನುಮಾನ ಮೂಡುತ್ತದೆ. ಕೂಡಲೇ ಇದರ ಬಗ್ಗೆ ಕ್ರಮ ವಹಿಸಬೇಕು. ಆವರಣದಲ್ಲಿ ಸುರಕ್ಷತೆ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಈ ದಿನ.ಕಾಮ್ ಉಪವಿಭಾಗಾಧಿಕಾರಿ ಸಂತೋಷ ಪಾಟೀಲ್ ಅವರನ್ನು ಸಂಪರ್ಕಿಸಿದಾಗ, “ಕಚೇರಿಯ ಮೇಲ್ಚಾವಣಿ ಕಸ ವಿಲೇವಾರಿಗೆ ನಾವೇ ಸೂಚನೆ ನೀಡಿದ್ದು, ಅದನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಕಚೇರಿ ಆವರಣವನ್ನೂ ಕೂಡ ಸ್ವಚ್ಛಗೊಳಿಸುವಂತೆ ತಿಳಿಸಿದ್ದು, ಅದನ್ನು ಭಾನುವಾರದೊಳಗೆ ಸ್ವಚ್ಛಗೊಳಿಸಲಾಗುತ್ತದೆ” ಎಂದು ಉತ್ತರಿಸಿದರು.

ದಾವಣಗೆರೆ ಉಪ ವಿಭಾಗಾಧಿಕಾರಿ ಎದುರು ಅನೈರ್ಮಲ್ಯ 3

“ಆವರಣದೊಳಗೆ ಮದ್ಯಪಾನ, ತಿಂಡಿಯ ಪೊಟ್ಟಣ ಸೇರಿದಂತೆ ಇತರ ದುಷ್ಕೃತ್ಯಗಳು ಈ ಮುಂಚೆಯೂ ನಮ್ಮ ಗಮನಕ್ಕೆ ಬಂದಿದ್ದು, ಅಲ್ಲಿ ಸಾಮಾನ್ಯವಾಗಿ ಕೆಲವು ರೈಲ್ವೆ ಪ್ರಯಾಣಿಕರು ಈ ಕೃತ್ಯವನ್ನು ನಡೆಸುತ್ತಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ಆಗಾಗ್ಗೆ ನಡೆಯುತ್ತಿದೆ. ಇದರ ವಿರುದ್ಧ ಎರಡು ಮೂರು ಬಾರಿ ರೈಲ್ವೆ ಪೊಲೀಸ್ ಸಿಬ್ಬಂದಿಗಳಿಗೆ ದೂರನ್ನು ನೀಡಿದ್ದೇವೆ. ಇದರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕಚೇರಿಯಿಂದ ಪತ್ರ ಬರೆಯಲಾಗಿದೆ. ರೈಲ್ವೆ ಆವರಣದಿಂದ ಕಚೇರಿಗೆ ಸುರಕ್ಷತೆ ಇಲ್ಲದಂತಾಗಿದ್ದು, ಈ ಹಿಂದೆ ರೈಲ್ವೆ ಆವರಣದಿಂದ ಬಾಲಕನೊಬ್ಬ ಕಚೇರಿಯ ಆವರಣದ ಕಾರೊಂದಕ್ಕೆ ಕಲ್ಲು ಹೊಡೆದ ಪ್ರಸಂಗವೂ ನಡೆದಿತ್ತು” ಎಂದು ಹೇಳಿದರು.

“ಕಚೇರಿಯ ಸಮಯ ಮುಗಿದ ನಂತರ ಆವರಣಕ್ಕೆ ರಾತ್ರಿ ವೇಳೆ ಅಲ್ಲಿ ಓಡಾಡುವ ಪ್ರಯಾಣಿಕರು ಫುಡ್ ಪ್ಯಾಕೆಟ್‌ಗಳನ್ನು ಎಸೆಯುವುದು, ತಡೆಗೋಡೆಯನ್ನು ಹಾರಿ ಬಂದು ಮದ್ಯಪಾನದಂತ ಚಟುವಟಿಕೆಗಳನ್ನು ನಡೆಸುವುದು ಈ ಹಿಂದೆಯೂ ನಡೆದಿದ್ದು, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ರಾತ್ರಿ ಪೊಲೀಸ್ ಗಸ್ತು ನಡೆಸುವಂತೆ ರೈಲ್ವೆ ಪೊಲೀಸ್ ಇಲಾಖೆಗೆ ದೂರು ನೀಡಿ ಮನವಿ ಮಾಡಲಾಗಿದೆ. ಈ ಅನೈತಿಕ ಚಟುವಟಿಕೆಗಳ ವಿರುದ್ಧ ರೈಲ್ವೆ ಪೊಲೀಸರೇ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ಬಗ್ಗೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲು ಮನವಿ ಮಾಡಿ, ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಸರಕಾರಿ ಯೋಜನೆಗಳ ಯಶಸ್ಸಿನ ಪಾತ್ರ ಅಂಗನವಾಡಿ ಕಾರ್ಯಕರ್ತೆಯರು; ಡಿಎಚ್ ಕಂಬಳಿ

“ಇತ್ತೀಚಿನ ದಿನಗಳಲ್ಲಿ ದಾವಣಗೆರೆ ನಗರದಲ್ಲಿ ಹಲವು ಅಕ್ರಮ ಚಟುವಟಿಕೆಗಳ ಬಗ್ಗೆ ವರದಿಯಾಗುತ್ತಿದ್ದು ಡ್ರಗ್ಸ್, ಗಾಂಜಾ ಅಫೀಮು ಸೇರಿದಂತೆ ಮಾದಕ ವಸ್ತುಗಳು ವ್ಯಾಪಕವಾಗಿ ಹರಡಿವೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಗಾಂಜಾ ಮಾರುವ, ಡ್ರಗ್ಸ್ ಸಾಗಿಸುವ ದುಷ್ಕರ್ಮಿಗಳೂ ಕೂಡ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಪ್ರಕರಣಗಳು ದಾಖಲಾಗಿವೆ. ಸ್ಥಳೀಯರೂ ಕೂಡ ಇದರಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಆವರಣದಲ್ಲಿ ಇತರೆ ದುಷ್ಕೃತ್ಯಗಳು ನಡೆಯುವ ಮುನ್ನ ಇಲಾಖೆಗಳು ಎಚ್ಚೆತ್ತುಕೊಳ್ಳಬೇಕಿದೆ” ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದ ಕೇಂದ್ರ ಭಾಗದಲ್ಲಿ ಪ್ರತಿಷ್ಠಿತ ಕಚೇರಿಯ ಆವರಣವೇ ಈ ರೀತಿಯ ಅನೈರ್ಮಲ್ಯ, ಕುಡುಕರಿಗೆ ಮದ್ಯಪಾನದ ತಾಣವಾಗಿ ಬದಲಾಗಿರುವುದು ಸರ್ಕಾರಿ ಕಚೇರಿಗಳು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.‌

WhatsApp Image 2025 11 17 at 5.21.38 PM
ವಿನಾಯಕ್ ಚಿಕ್ಕಂದವಾಡಿ
+ posts

ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...