ದೇವನಹಳ್ಳಿ | ಎಲ್ಲ ಸರ್ಕಾರಗಳು ಜನ ವಿರೋಧಿ, ರೈತ ವಿರೋಧಿ: ಬಹುಭಾಷಾ ನಟ ಪ್ರಕಾಶ್ ರಾಜ್

Date:

ಎಲ್ಲ ಸರಕಾರಗಳು ಜನ ವಿರೋಧಿ ಹಾಗೂ ರೈತ ವಿರೋಧಿಯೇ ಆಗಿವೆ. ನಮಗೇನು ಬೇಕು, ಅವರೇ ಬರ್ತಾರೆ, ನೀವು ಸುಮ್ಮನಿರಿ ಎಂಬುದು ಅವರ ಅಹಂಕಾರ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಹೋರಾಟವು 1000 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಧರಣಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ನಾನು ರೈತ ಅಲ್ಲ. ಭೂಮಿ ಜತೆ ಮಾತಾಡ್ತೀನಿ. ರೈತ ನನಗಿಂತ ದೊಡ್ಡೋನು. ರೈತನ ಋಣ ನಮ್ಮ ಮೇಲಿದೆ. ಹಾಗಾಗಿ ಈ ಹೋರಾಟಕ್ಕೆ ಬಂದಿದ್ದೇನೆ. ರೈತರ ಹೋರಾಟ ಎಂದೆಂದಿಗೂ ನಡೆಯುತ್ತಲೇ ಇವೆ. ಇಷ್ಟು ವರ್ಷ ಹೋರಾಟ ನಡೆದರೂ ಇದಕ್ಕೆ ತಾರ್ಕಿಕ ಅಂತ್ಯ ಸಿಕ್ಕಿಲ್ಲ. ಯಾವ ಅಹಂಕಾರ ಇದನ್ನು ಬದಲಿಸಬೇಕು” ಎಂದು ಪ್ರಶ್ನಿಸುವ ಮೂಲಕ ಸರ್ಕಾರಗಳ ನಡೆಯನ್ನು ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಹೋರಾಟ 1

“ಈ ಹಿಂದಿನ ಸರ್ಕಾರ ಅವರು ರೈತರೇ ಅಲ್ಲ. ಹೊಡೆಯಿರಿ ಎಂದು ಹೇಳಿತ್ತು. ಆದರೆ, ನೀವು ಬಂದು ಒಂದು ವರ್ಷದ ಮೇಲಾಯಿತು. ನಿಮ್ಮ ಭರವಸೆ ಎಲೆಕ್ಷನ್ ಗಿಮಿಕ್ ಅಷ್ಟೇ. ಈ ಹೋರಾಟದ ಗೆಲುವು ಮುಖ್ಯ. ನಿಮ್ಮೆಲ್ಲಾ ರಾಜಕಾರಣಿಗಳಿಗೆ ರೈತರು ಮತ ನೀಡುವ ಬಟನ್‌ಗಳಷ್ಟೇ. ಸರಕಾರಗಳು ಭೂಸ್ವಾಧೀನ ಯಾಕೆ ಮಾಡುತ್ತಿವೆ. ನಿಮ್ಮ ಸರಕಾರ ರೈತರಿಗೆ ಕೆಲಸ ಕೊಡುತ್ತಿಲ್ಲ. ಅವರು ಸ್ವಂತ ಕೆಲಸ ಮಾಡಿಕೊಂಡು, ಅವರ ಭೂಮಿ ಜತೆ ಮಾತಾಡಿಕೊಂಡು ಇರುವವರು. ಅವರ ಭವಿಷ್ಯ ನೋಡಿಕೊಳ್ಳುತ್ತಿರುವ. ನಿಮಗೆ ಮತ ನೀಡಿದ್ದಕ್ಕೆ ನಮ್ಮ ಕೆಲಸ ಕಿತ್ತುಕೊಂಡರೆ, ಏನು ಮಾಡೋದು ಎಂಬುದು ಅವರ ಹೋರಾಟ. ಇಂತಹ ಆತಂಕ ಮತ್ತು ಹೋರಾಟದ ಜತೆ ಇಡೀ ರಾಜ್ಯದ ಜನತೆ ನಿಮ್ಮ ಜತೆ ನಿಲ್ಲಬೇಕು” ಎಂದು ಹೇಳಿದರು.

WhatsApp Image 2024 12 30 at 3.45.34 PM

ಫಲವತ್ತಾದ ಭೂಮಿ ಮೇಲೆ ಕೈಗಾರಿಕೆಗಳನ್ನು ಎಲ್ಲಿವರೆಗೆ ಕಟ್ಟುತ್ತಿರಿ. ಹೀಗೆ ಕಟ್ಟಿ ಹೊಟ್ಟೆಗೆ ಏನು ತಿನ್ನುತ್ತೀರಿ. ರೈತರನ್ನು ಗೌರವಿಸಿ, ಅವರನ್ನು ಉಳಿಸದಿದ್ದರೆ ಎಲ್ಲರೂ ನಾಶವೇ ಎಂಬ ಸತ್ಯವನ್ನು ಅರಿತು ಮುಂದೆಜ್ಜೆ ಇಡಬೇಕು ಎಂದು ಹೇಳಿದರು.

ಇದು ಕೇವಲ 23 ಹಳ್ಳಿಗಳ ಭೂ ಸ್ವಾಧೀನ ಸಮಸ್ಯೆ ಅಲ್ಲ. ಈ ಹೋರಾಟದ ಗೆಲುವು ಇಡೀ ಸ್ವಾಧೀನ ಪ್ರತಿಕ್ರಿಯೆಯನ್ನೇ ಬದಲಿಸಬೇಕು. ಸ್ವಾಧೀನ ಮಾಡಿ ನೀವು ಭೂಮಿ ಕೊಡುತ್ತಿರುವುದು ಭವಿಷ್ಯದ ಬಂಡವಾಳಶಾಹಿಗಳಿಗೆ. ಅವರು ಮರ ನೋಡದೆ ತೆಂಗಿನ ಕಾಯಿ ಕೀಳುತ್ತಾರೆ, ಗಿಡ ನೋಡದೇ ದೇವರಿಗೆ ಹೂ ಮುಡಿಸುತ್ತಾರೆ. ಭತ್ತ ನೋಡದೆ ಅನ್ನ ಉಂಡು, ರಾಗಿ ನೋಡದೆ ಮುದ್ದೆ ಹಿಚುಕುತ್ತಾರೆ. ಆದ್ದರಿಂದ, ಅವರಿಗೆ ಭೂಮಿ ಮತ್ತು ರೈತರ ನಡುವಿನ ಸಂಬಂಧ ಅರ್ಥವಾಗುವುದಿಲ್ಲ. ಭೂಮಿ ಎಂಬುದು ರೈತರ ಸ್ವಾಭಿಮಾನ, ಐಡೆಂಟಿಟಿ, ಅವರ ಹೆಮ್ಮೆ, ನಿರಂತರವಾದ ಮಾತು ಮತ್ತು ಸಂಭಾಷಣೆ. ಅದನ್ನೇ ನೀವು ಕಿತ್ತುಕೊಳ್ಳುತ್ತಿರುವುದು ಯಾಕೆ? ಎಂದು ಕೇಳಿದರು.

ಇದನ್ನು ಓದಿದ್ದೀರಾ? ದೇವನಹಳ್ಳಿ | ಸರ್ಕಾರ ಉಳಿಯಬೇಕಾದರೆ ರೈತರ ಮಾತು ಕೇಳಿ: ನಿವೃತ್ತ ನ್ಯಾ.ಗೋಪಾಲ ಗೌಡ ಎಚ್ಚರಿಕೆ

ಇಲ್ಲಿನ ರೈತರು ತಮ್ಮ ತುಂಡು ಭೂಮಿಯಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ಸರ್ಕಾರ ಅವರಿಗೆ ಕೆಲಸ ಕೊಟ್ಟಿಲ್ಲ. ತಲೆತಲಾಂತರದಿಂದ ಅವರೇ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಪಟ್ಟಣದವರೆಲ್ಲಾ ರೈತರಾಗಬೇಕಿಲ್ಲ; ಆದರೆ ಸಹಮನುಷ್ಯರು ಹಾಗೂ ರೈತರ ಆತಂಕ, ಕಣ್ಣೀರಿನ ಜೊತೆಗೆ ನಿಲ್ಲಬೇಕಾಗಿರುವುದು ನಮ್ಮ ಕರ್ತವ್ಯ. ಮಾಧ್ಯಮಗಳ ಮೂಲಕ ಈ ದೇಶದ ರಾಜಕಾರಣಿಗಳಿಗೆ ಹಾಗೂ ಪಟ್ಟಣ ನಿವಾಸಿಗಳಿಗೆ ಸಂದೇಶ ನೀಡುವುದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ. ನಿಮ್ಮ ಜೊತೆಗೆ ನಿಲ್ಲುವುದರಿಂದ ನನಗೆ ಗೌರವ ಸಿಗುತ್ತದೆ; ರೈತರ ಋಣ ನನ್ನ ಮೇಲೆ ಇದೆ. ಫಲವತ್ತಾದ ಭೂಮಿ ಮೇಲೆ ಕೈಗಾರಿಕೆ ಕಟ್ಟುತ್ತಾ ಹೋದರೆ, ನೀವು ಮುಂದೆ ಹೊಟ್ಟೆಗೆ ತಿನ್ನುವುದಾದರೂ ಏನು? ರೈತ ನಶಿಸಿದರೆ ನಾವ್ಯಾರೂ ಇರುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...