ಉಡುಪಿ | ದೇವನಹಳ್ಳಿ ರೈತರ ಮೇಲೆ ಪೋಲಿಸ್ ದೌರ್ಜನ್ಯ ಖಂಡಿಸಿ ಕುಂದಾಪುರದಲ್ಲಿ ಪ್ರತಿಭಟನೆ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ 1777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತದ ಭೂಸ್ವಾದೀನ ವಿರೋದಿಸಿ ಪ್ರತಿಭಟನಾ ನಿರತ ರೈತರು, ರೈತ ಕಾರ್ಮಿಕ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಕುಂದಾಪುರ ತಾಲುಕು ಸಮಿತಿ ಇಂದಿಲ್ಲಿ ಶಾಸ್ತ್ರಿ ಸರ್ಕಲ್ ಬಳಿ ಪ್ರತಿಭಟನೆ ನಡೆಸುವ ಮುಖಾಂತರ ಖಂಡಿಸಿತು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಪಕ್ಷದ ಮುಖಂಡರಾದ ಎಚ್ .ನರಸಿಂಹ ರಾಜ್ಯದ ಮುಖ್ಯಮಂತ್ರಿ ಆಗುವ ಮುನ್ನ ರೈತರ ಹೋರಾಟ ಬೆಂಬಲಿಸಿ ಭರವಸೆ ನೀಡಿದ ಸಿದ್ದರಾಮಯ್ಯನವರು ಇದೀಗ ಕಾರ್ಪೊರೇಟ್ ಕಂಪನಿಗಳ ಪರ ವಹಿಸಿದ್ದಾರೆ. ರೈತರಿಗೆ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿದರು.

1005964098

ಪಕ್ಷದ ತಾಲೂಕು ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ, ದೇಶದಾದ್ಯಂತ ಸಿಪಿಎಂ ಜನರ ಸಮಸ್ಯೆಗಳನ್ನು ಪರಿಹರಿಸಲು ದೇಶದಾದ್ಯಂತ ಪ್ರಚಾರಾಂದೋಲನ ನಡೆಸುತ್ತಿದೆ. ಕೇಂದ್ರ ಸರ್ಕಾರದ ಕಾರ್ಪೋರೇಟ್ ಪರವಾದ ನೀತಿಗಳು ಬೆಲೆ ಏರಿಕೆ, ನಿರುದ್ಯೋಗ ವ್ಯಾಪಕಗೊಳ್ಳುತ್ತಿದೆ ಈ ನೀತಿಗಳು ಗ್ರಾಮೀಣ,ನಗರಗಳ ಅಭಿವೃದ್ಧಿಗಳ ಹಾಗೂ ಜನಜೀವನದ ಮೇಲೂ ದುಷ್ಪರಿಣಾಮ ಬೀರುತ್ತಿದೆ ಈ ಹಿನ್ನೆಲೆಯಲ್ಲಿ ಸಿಪಿಎಂ ಪಕ್ಷವು ಸ್ಥಳೀಯ ಬೇಡಿಕೆಗಳನ್ನು ಸರಕಾರಗಳ ಮುಂದೆ ಮಂಡಿಸುತ್ತಿದೆ ಎಂದು ಹೇಳಿದ ಅವರು ತಾಲೂಕಿನ ಸರ್ವತೋಮುಖ ಅಭಿವೃದ್ದಿ ದೃಷ್ಟಿಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಬಸ್ ಮಾರ್ಗಗಳನ್ನು ರಾಷ್ಟ್ರೀಕರಣ ಗೊಳಿಸಬೇಕು. ಮಹಿಳೆಯರು, ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆ ದೊರೆಯುವಂತಾಗಬೇಕು, ಕುಂದಾಪುರದಿಂದ ಬೆಂಗಳೂರಿಗೆ ಹೆಚ್ಚುವರಿ ರೈಲು ಓಡಿಸಲು, ಎಲ್ಲ ಗ್ರಾಮದಲ್ಲೂ ಸುಸಜ್ಜಿತ ಆರೋಗ್ಯ ಕೇಂದ್ರ ತೆರೆಯಲು, ತಾಲೂಕಿನಾದ್ಯಂತ ಸರಕಾರಿ ಪಿಯುಸಿ, ಪದವಿ, ಡಿಪ್ಲೊಮಾ ಕಾಲೇಜು ಆರಂಭಿಸಲು ಒತ್ತಾಯಿಸಿದರು. ಈ ಮೂಲಕ ಖಾಸಗಿ ಬಸ್, ಖಾಸಗಿ ಆಸ್ಪತ್ರೆಗಳ, ಖಾಸಗಿ ಶಿಕ್ಷಣ ಸಂಸ್ಥೆಗಳ ಲೂಟಿ ತಡೆಯಬೇಕಾಗಿದೆ. ಪುರಸಭೆಯ ಒಳಚರಂಡಿ ಯೋಜನೆ ಶೀಘ್ರ ಪೂರ್ಣ ಗೊಳಿಸಲು ಹಾಗು ಪುರಸಭೆ ನಲ್ಲಿ ನೀರಿನ ನಿರ್ವಹಣೆ ಪುರಸಭೆಯೇ ಮಾಡಬೇಕು ಎಂಬುದಾಗಿ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ನೇತೃತ್ವವನ್ನು ಪಕ್ಷದ ಮುಖಂಡರಾದ ಸುರೇಂದ್ರ, ಚಿಕ್ಕಮೊಗವೀರ, ರವಿ ವಿ ಎಂ, ಲಕ್ಷಣ ಡಿ, ಪ್ರಕಾಶ್ ಕೋಣಿ, ಚಂದ್ರ ಪೂಜಾರಿ ವಹಿಸಿದ್ದರು.
ಪಕ್ಷದ ಹಿರಿಯ ಮುಖಂಡರಾದ ಕೆ ಶಂಕರ್, ಮಹಾಬಲ ವಡೇರ ಹೋಬಳಿ ಉಪಸ್ಥಿತರಿದ್ದರು ಜಿಲ್ಲಾ ಸಮಿತಿ ಸದಸ್ಯರಾದ ಸುರೇಂದ್ರ ಎಚ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...