ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ 1777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತದ ಭೂಸ್ವಾದೀನ ವಿರೋದಿಸಿ ಪ್ರತಿಭಟನಾ ನಿರತ ರೈತರು, ರೈತ ಕಾರ್ಮಿಕ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಕುಂದಾಪುರ ತಾಲುಕು ಸಮಿತಿ ಇಂದಿಲ್ಲಿ ಶಾಸ್ತ್ರಿ ಸರ್ಕಲ್ ಬಳಿ ಪ್ರತಿಭಟನೆ ನಡೆಸುವ ಮುಖಾಂತರ ಖಂಡಿಸಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಪಕ್ಷದ ಮುಖಂಡರಾದ ಎಚ್ .ನರಸಿಂಹ ರಾಜ್ಯದ ಮುಖ್ಯಮಂತ್ರಿ ಆಗುವ ಮುನ್ನ ರೈತರ ಹೋರಾಟ ಬೆಂಬಲಿಸಿ ಭರವಸೆ ನೀಡಿದ ಸಿದ್ದರಾಮಯ್ಯನವರು ಇದೀಗ ಕಾರ್ಪೊರೇಟ್ ಕಂಪನಿಗಳ ಪರ ವಹಿಸಿದ್ದಾರೆ. ರೈತರಿಗೆ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿದರು.

ಪಕ್ಷದ ತಾಲೂಕು ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ, ದೇಶದಾದ್ಯಂತ ಸಿಪಿಎಂ ಜನರ ಸಮಸ್ಯೆಗಳನ್ನು ಪರಿಹರಿಸಲು ದೇಶದಾದ್ಯಂತ ಪ್ರಚಾರಾಂದೋಲನ ನಡೆಸುತ್ತಿದೆ. ಕೇಂದ್ರ ಸರ್ಕಾರದ ಕಾರ್ಪೋರೇಟ್ ಪರವಾದ ನೀತಿಗಳು ಬೆಲೆ ಏರಿಕೆ, ನಿರುದ್ಯೋಗ ವ್ಯಾಪಕಗೊಳ್ಳುತ್ತಿದೆ ಈ ನೀತಿಗಳು ಗ್ರಾಮೀಣ,ನಗರಗಳ ಅಭಿವೃದ್ಧಿಗಳ ಹಾಗೂ ಜನಜೀವನದ ಮೇಲೂ ದುಷ್ಪರಿಣಾಮ ಬೀರುತ್ತಿದೆ ಈ ಹಿನ್ನೆಲೆಯಲ್ಲಿ ಸಿಪಿಎಂ ಪಕ್ಷವು ಸ್ಥಳೀಯ ಬೇಡಿಕೆಗಳನ್ನು ಸರಕಾರಗಳ ಮುಂದೆ ಮಂಡಿಸುತ್ತಿದೆ ಎಂದು ಹೇಳಿದ ಅವರು ತಾಲೂಕಿನ ಸರ್ವತೋಮುಖ ಅಭಿವೃದ್ದಿ ದೃಷ್ಟಿಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಬಸ್ ಮಾರ್ಗಗಳನ್ನು ರಾಷ್ಟ್ರೀಕರಣ ಗೊಳಿಸಬೇಕು. ಮಹಿಳೆಯರು, ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆ ದೊರೆಯುವಂತಾಗಬೇಕು, ಕುಂದಾಪುರದಿಂದ ಬೆಂಗಳೂರಿಗೆ ಹೆಚ್ಚುವರಿ ರೈಲು ಓಡಿಸಲು, ಎಲ್ಲ ಗ್ರಾಮದಲ್ಲೂ ಸುಸಜ್ಜಿತ ಆರೋಗ್ಯ ಕೇಂದ್ರ ತೆರೆಯಲು, ತಾಲೂಕಿನಾದ್ಯಂತ ಸರಕಾರಿ ಪಿಯುಸಿ, ಪದವಿ, ಡಿಪ್ಲೊಮಾ ಕಾಲೇಜು ಆರಂಭಿಸಲು ಒತ್ತಾಯಿಸಿದರು. ಈ ಮೂಲಕ ಖಾಸಗಿ ಬಸ್, ಖಾಸಗಿ ಆಸ್ಪತ್ರೆಗಳ, ಖಾಸಗಿ ಶಿಕ್ಷಣ ಸಂಸ್ಥೆಗಳ ಲೂಟಿ ತಡೆಯಬೇಕಾಗಿದೆ. ಪುರಸಭೆಯ ಒಳಚರಂಡಿ ಯೋಜನೆ ಶೀಘ್ರ ಪೂರ್ಣ ಗೊಳಿಸಲು ಹಾಗು ಪುರಸಭೆ ನಲ್ಲಿ ನೀರಿನ ನಿರ್ವಹಣೆ ಪುರಸಭೆಯೇ ಮಾಡಬೇಕು ಎಂಬುದಾಗಿ ಒತ್ತಾಯಿಸಿದರು.
ಕಾರ್ಯಕ್ರಮದ ನೇತೃತ್ವವನ್ನು ಪಕ್ಷದ ಮುಖಂಡರಾದ ಸುರೇಂದ್ರ, ಚಿಕ್ಕಮೊಗವೀರ, ರವಿ ವಿ ಎಂ, ಲಕ್ಷಣ ಡಿ, ಪ್ರಕಾಶ್ ಕೋಣಿ, ಚಂದ್ರ ಪೂಜಾರಿ ವಹಿಸಿದ್ದರು.
ಪಕ್ಷದ ಹಿರಿಯ ಮುಖಂಡರಾದ ಕೆ ಶಂಕರ್, ಮಹಾಬಲ ವಡೇರ ಹೋಬಳಿ ಉಪಸ್ಥಿತರಿದ್ದರು ಜಿಲ್ಲಾ ಸಮಿತಿ ಸದಸ್ಯರಾದ ಸುರೇಂದ್ರ ಎಚ್ ವಂದಿಸಿದರು.





