ಉಡುಪಿ | ದೇವರಾಜ ಅರಸು: ವಂಚಿತರಿಗೆ ಸಾಮಾಜಿಕ ನ್ಯಾಯ ಒದಗಿಸಿದ ಚೇತನ

Date:

  • ಉಳುವವನೇ ಭೂ ಓಡೆಯ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದವರು ದೇವರಾಜ್ ಅರಸು
  • ಬಿಜೆಪಿ ಪಕ್ಷ ಸುಳ್ಳಿನ ಮೇಲೆಯೇ ದೇಶವನ್ನಾಳಲು ಹೊರಟಿದೆ

ಮಾಹಿತಿ ತಂತ್ರಜ್ಞಾನ ಮತ್ತು ಇಂಟರ್ನೆಟ್ ವ್ಯವಸ್ಥೆಯಲ್ಲಿ ಕ್ರಾಂತಿ ತಂದು ಭವ್ಯ ಭಾರತ ನಿರ್ಮಾಣವನ್ನು ಸಾಕರಗೊಳಿಸಿದ ರಾಜೀವ್ ಗಾಂಧಿ ಹಾಗೂ ಉಳುವವನೇ ಭೂ ಒಡೆಯ ಕಾಯ್ದೆಯನ್ನು ಅನುಷ್ಠಾನಗೊಳಿಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸಿದ ದೇವರಾಜ ಅರಸು ಮಹಾ ಚೇತನರು ಎಂದು ಉಡುಪಿ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಹರೀಶ್ ಕಿಣಿ ಹೇಳಿದರು.

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಗಾಂಧಿ ಸಂಘಟನೆಯ ಆಶ್ರಯದಲ್ಲಿ ನಗರದ ಓಸ್ಕರ್ ಸ್ಮಾರಕ ಕಾಂಗ್ರೆಸ್ ಭವನದಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸ್ ರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಮುಖಂಡ ನಾಗೇಶ್ ಉದ್ಯಾವರ್ ಮಾತನಾಡಿ , “ಇಂದು ವ್ಯಾಪಕವಾಗೆ ಸುಳ್ಳು ಸುದ್ದಿಗಳನ್ನು ಹರಡಿಸುವ ಬಿಜೆಪಿ ಸುಳ್ಳಿನ ಮೇಲೆಯೇ ದೇಶವನ್ನಾಳಲು ಹೊರಟಿದೆ. ಆದರೆ ಸುಳ್ಳುಗಳಿಂದ ದೇಶ ಸುಧಾರಣೆ ಸಾಧ್ಯವಿಲ್ಲ. ನಮ್ಮ ಹಿರಿಯ ಚೇತನರಾದ ರಾಜೀವ್ ಗಾಂಧಿ, ದೇವರಾಜ್ ಅರಸು ಸೇರಿದಂತೆ ಮಂತಾದವರ ಆದರ್ಶಗಳನ್ನು ಅನುಷ್ಠಾನಗೊಳಿಸಿ ಈ ಸುಳ್ಳು ಪಡೆಯನ್ನು ನಿಶಕ್ತಗೊಳಿಸಿ ಸಮೃದ್ಧ ಭಾರತ ಕಟ್ಟೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ಎಲ್ಲಾ ರಂಗಗಳಲ್ಲೂ ಯುವ ಸಮೂಹದ ಭವಿಷ್ಯ ರೂಪಿಸುವಲ್ಲಿ ರಾಜೀವ್ ಗಾಂಧಿಯವರ ಕೊಡುಗೆ ಅಪಾರವಾಗಿದೆ. ನಾಡಿನ ಹಿಂದುಳಿದ ಸಮುದಾಯಕ್ಕೆ ಮೀಸಲಾತಿ ಜಾರಿಗೊಳಿಸಿ ಭೂ ಮಸೂದೆ ಕಾನೂನು ಮೂಲಕ ಕ್ರಾಂತಿಗೈದ ಡಿ.ದೇವರಾಜ್ ಅರಸುಗೆ ಸಲ್ಲುತ್ತದೆ” ಎಂದು ನಗರ ಸಭೆಯ ಸದಸ್ಯ ರಮೇಶ್ ಕಾಂಚನ್‌ ನುಡಿದರು.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಿ. ನರಸಿಂಹ ಮೂರ್ತಿ ಮಾತನಾಡಿದರು. ಇದೇ ಸಂದರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಅಮೃತಾ ಪೂಜಾರಿ ಅವರು ಅಲೆವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದಕ್ಕೆ ಜಿಲ್ಲಾ ಸಮಿತಿಯಿಂದ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಸಹ ಸಂಚಾಲಕಿ ರೋಶಿನಿ ವಲಿವರ್, ಗೌರವ ಸಲಹೆಗಾರ ವೆರೋನಿಕ ಕರ್ನೇಲಿಯೋ, ಜಿಲ್ಲಾ ಉಸ್ತುವಾರಿ ಡಾ.ಸುನೀತಾ ಶೆಟ್ಟಿ, ಕಿಶನ್ ಹೆಗ್ಡೆ, ರೋಶನ್ ಶೆಟ್ಟಿ, ಕುಶಲ ಶೆಟ್ಟಿ ಕೀರ್ತಿ ಶೆಟ್ಟಿ ಶಶಿಧರ್ ಶೆಟ್ಟಿ, ಶಬರೀಶ್, ಮೇರಿ ಡಿಸೋಜ, ಸೂರ್ಯ ಸಾಲಿಯಾನ್, ಶಂಕರ ನಾಯ್ಕ, ಮಾರ್ಗರೇಟ್ ಸೀಮಾ, ಶಾಂತಿ ಪಿರೇರಾ, ಸತೀಶ್ ಜಪ್ತಿ,ಜೋಯ್ಸ್ ಟೆನ್ನಿಸ್, ಲಿಲ್ಲಿ ಡಿಸೋಜ, ಉದಯ, ನಜೀರ್, ರೋನಾಲ್ಡ್, ಲಕ್ಷ್ಮಿ ನಾರಾಯಣ, ಕುಮುದ, ವಾರೀಜಾಕ್ಷಿ ಮತ್ತಿತರರಿದ್ದರು. ಆನಂದ್ ಪೂಜಾರಿ ಸ್ವಾಗತಿಸಿ, ರೋಶನ್ ಬರಟೋ ವಂದಿಸಿದರು, ಅಮೃತಾ ಪೂಜಾರಿ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...