ರಾಯಚೂರು ಜಿಲ್ಲೆಯ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಿದ್ದಾರೆ: ಪಾರಸಮಲ್ ಸುಖಾಣ

Date:

ರಾಯಚೂರಿನಲ್ಲಿ ಏಮ್ಸ್ ಮಂಜೂರು ಮಾಡಲು ಕೇಂದ್ರ ಆರೋಗ್ಯ ಸಚಿವರು ತಂಡ ಕಳುಹಿಸುವದಾಗಿ ರಾಯಚೂರು ಮತ್ತು ಕೊಪ್ಪಳ ಸಂಸದರು ಹೇಳಿಕೊಂಡಿರುವುದು ಶುದ್ಧ ಸುಳ್ಳು, ಚುನಾವಣಾ ರಾಜಕೀಯ ತಂತ್ರವಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪಾರಸಮಲ್ ಸುಖಾಣ ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, “ಸಂಸತ್‌ನಲ್ಲಿ ಆರೋಗ್ಯ ಸಚಿವರು ನೀಡಿದ ಹೇಳಿಕೆಯಂತೆ ಹುಬ್ಬಳ್ಳಿ ಧಾರವಾಡ ಹೆಸರು ಮಾತ್ರ ಇರುವುದು ಖಚಿತವಾಗಿದೆ. ಕೂಡಲೇ ರಾಜ್ಯದ ಮುಖ್ಯಮಂತ್ರಿಯವರು ಜಿಲ್ಲೆಗೆ ಮತ್ತೊಂದು ವಂಚನೆ ಆಗುವ ಮುನ್ನ ಪ್ರಧಾನಿ ಮಂತ್ರಿಯವರ ಗಮನ ಸೆಳೆಯಬೇಕಿದೆ” ಎಂದರು.

“ಐಐಟಿ ಸ್ಥಾಪನೆಗೆ ಈಗಾಗಲೇ ಜಿಲ್ಲೆಗೆ ಆನ್ಯಾಯವಾಗಿದೆ. ಏಮ್ಸ್ ಮಂಜೂರಾತಿ ಬೇಕಿರುವ ವಿಮಾನ ನಿಲ್ದಾಣ, ಮಹಾನಗರ ಪಾಲಿಕೆ ವ್ಯವಸ್ಥೆ ರಾಜ್ಯ ಸರ್ಕಾರ ಮಾಡದೇ ಇರುವಾಗ ಏಮ್ಸ್ ಮಂಜೂರು ಮಾಡಿಸಲು ಮನವಿ ಕೊಟ್ಟರೆ ಸಾಲದು. ರಾಜ್ಯ ಸರ್ಕಾರ ಕೂಡಲೇ ಭೂಮಿ, ನೀರು ಸೇರಿದಂತೆ ಇತರೆ ಸೌಲಭ್ಯಗಳ ಷರತ್ತುಗಳನ್ನು ಪೂರೈಸುವಂತೆ ಪ್ರಸ್ತಾವನೆ ಸಲ್ಲಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಲಬುರಗಿ ರಾಜಕೀಯದಿಂದ ಜಿಲ್ಲೆಗೆ ನಿರಂತರ ಅನ್ಯಾಯ ಮುಂದುವರೆಯುತ್ತಿದೆ. ವೈದ್ಯಕೀಯ ಶಿಕ್ಷಣ ಸಚಿವರು ಕಲಬುರಗಿಯಲ್ಲಿ ನಿನ್ನೆಯಷ್ಟೇ ಟ್ರೋಮಾ ಸೆಂಟರ್ ಉದ್ಘಾಟಿಸಿಕೊಂಡಿದ್ದಾರೆ. ಜಯದೇವ ಆಸ್ಪತ್ರೆ, ಟ್ರೋಮಾ ಸೆಂಟರ್, ನರ್ಸಿಂಗ್ ಕಾಲೇಜು, ಇಎಸ್‌ಐ ಆಸ್ಪತ್ರೆ, ಮಹಿಳಾ ಮತ್ತು ಮಗುವಿನ ಆಸ್ಪತ್ರೆಗಳೆಲ್ಲವೂ ಕಲಬುರಗಿಯಲ್ಲಿ ಸ್ಥಾಪಿಸಿದರೆ ಉಳಿದ ಜಿಲ್ಲೆಗಳ ಸ್ಥಿತಿಯೇನು” ಎಂದು ಪ್ರಶ್ನಿಸಿದರು.

“ವೈದ್ಯಕೀಯ ಶಿಕ್ಷಣ ಸಚಿವರು ಕೇವಲ ಝಂಡಾ, ಸಭೆಗೆ ಸೀಮಿತವಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಿದ್ದಾರೆ. ಸರ್ವರಿಗೂ ಸಮಬಾಳು, ಸಮಪಾಲು ಎಂದು ಹೇಳುವ ಮುಖ್ಯಮಂತ್ರಿಯವರು ಜಿಲ್ಲೆಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವ ಕೆಲಸ ಮಾಡಬೇಕು” ಎಂದು ಸ್ವಪಕ್ಷದ ವಿರುದ್ಧವೇ ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ರೈತರ ಪರವಾಗಿ ಧ್ವನಿ ಎತ್ತಿ; ಶಾಸಕರಿಗೆ ಸಂಗಮೇಶ ಸಗರ ಆಗ್ರಹ

“ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರುವ ಕುರಿತು ಪ್ರತ್ಯೇಕ ದೇಶ ಸ್ಥಾಪಿಸುವ ಧ್ವನಿ ಕೇಳಿಬಂದಿದೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಕಲಬುರಗಿಯಿಂದಲೂ ಅನ್ಯಾಯವಾಗುತ್ತಿದೆ. ಆ ಕಾರಣಕ್ಕಾಗಿ ಪ್ರತ್ಯೇಕ ರಾಜ್ಯದ ಕೂಗು ಕೇಳಿಬರಲು ಕಾರಣವಾಗಿದೆ. ಜಿಲ್ಲೆಯ ಶಾಸಕರುಗಳಲ್ಲಿ ಇರುವ ಭಿನ್ನಾಭಿಪ್ರಾಯದಿಂದ ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ. ಪಕ್ಷದ ವೇದಿಕೆಗಳಲ್ಲಿಯೇ ಈ ಕುರಿತು ಚರ್ಚಿಸಲಾಗಿದೆ. ಆದರೆ ಗುಂಪುಗಾರಿಕೆಯಿಂದ ಜಿಲ್ಲೆ ಅಭಿವೃದ್ದಿ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಓಪೆಕ್ ಆಸ್ಪತ್ರೆ ಇದ್ದರೂ ಉಪಯೋಗ ಇಲ್ಲದಂತಾಗಿದೆ. ಬಜೆಟ್‌ನಲ್ಲಿಯೂ ಜಿಲ್ಲೆಗೆ ನ್ಯಾಯ ದೊರಕುವ ವಿಶ್ವಾಸವಿಲ್ಲ. ಅಭಿವೃದ್ಧಿ ಕೇವಲ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ಕಲಬುರಗಿಗೆ ಸೀಮಿತವಾದರೆ ಸಮಪಾಲು ದೊರೆಯಲು ಸಾಧ್ಯವಿಲ್ಲ” ಎಂದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...