ಉಡುಪಿ | 11 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ, ನನ್ನ ಪರವಾಗಿ ಯಾರೂ ಮಾತನಾಡಿಲ್ಲ : ದೇವೇಂದ್ರ ಸುವರ್ಣ

Date:

ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಅಕ್ಷತಾ ಪೂಜಾರಿ ಅವರು ಮಾಡಿದ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ವಾಸ್ತವಕ್ಕೆ ದೂರವಾಗಿವೆ ಎಂದು ದೇವೇಂದ್ರ ಸುವರ್ಣ ಅವರು ಆರೋಪಿಸಿದ್ದಾರೆ. ಈ ಕುರಿತು ಅವರು ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ನೋವು, ಅಸಮಾಧಾನ ಮತ್ತು ಪ್ರಕರಣದ ಸಂಪೂರ್ಣ ಹಿನ್ನೆಲೆಯನ್ನು ಮಾಧ್ಯಮಗಳ ಮುಂದೆ ವಿವರಿಸಿದರು.

ಅಕ್ಷತಾ ಪೂಜಾರಿ ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಸಂಘಟನೆಗಳು, ನಾಯಕರು ಮತ್ತು ಸಾರ್ವಜನಿಕರು ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿರುವುದನ್ನು ಗಮನಿಸಿದ ದೇವೇಂದ್ರ ಸುವರ್ಣ, “ನನಗೆ ಕಳೆದ 11 ವರ್ಷಗಳಿಂದ ನ್ಯಾಯ ಸಿಗದೆ ಇದ್ದರೂ ಯಾರೂ ಮಾತನಾಡಿಲ್ಲ. ಆದರೆ ಈಗ ಒಂದು ಪ್ರಕರಣಕ್ಕೆ ಮಾತ್ರ ಇಷ್ಟೊಂದು ಗಮನ ನೀಡಲಾಗುತ್ತಿದೆ. ಇದು ನನಗೆ ತೀವ್ರ ನೋವು ತಂದಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿ : https://eedina.com/karnataka/akshatha-poojary-udupi-case-protest-brahmawara-police-station/2025-12-17/

ಪೊಲೀಸರು ಯಾವುದೇ ರೀತಿಯ ದೌರ್ಜನ್ಯ ಅಥವಾ ದುರ್ವರ್ತನೆ ತೋರಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ಪೊಲೀಸರು ಆಶೀಕ್ ಮನೆಗೆ ಹೋಗಿದ್ದು ಕೇವಲ ಆರೋಪಿಯ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಮಾತ್ರ. ಅಲ್ಲಿ ಮಾನವೀಯ ನೆಲೆಯಲ್ಲಿ ನಡೆದುಕೊಂಡಿದ್ದಾರೆ. ಯಾವುದೇ ಹಲ್ಲೆ, ಅವಾಚ್ಯ ಶಬ್ದ ಅಥವಾ ಅಸಭ್ಯ ವರ್ತನೆ ನಡೆದಿಲ್ಲ” ಎಂದು ಹೇಳಿದರು.

ತಮ್ಮ ಮೇಲೂ ಎಫ್‌ಐಆರ್ ದಾಖಲಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ದೇವೇಂದ್ರ ಸುವರ್ಣ, “ನಾನು ಕೋರ್ಟ್ ಆದೇಶದಂತೆ ಪೊಲೀಸರೊಂದಿಗೆ ಅಲ್ಲಿಗೆ ಹೋಗಿದ್ದೇನೆ. ಪೊಲೀಸರೇ ಕರೆ ಮಾಡಿ ಆಶೀಕ್ ಇಂತಹ ಲೊಕೇಷನ್‌ನಲ್ಲಿ ಇದ್ದಾನೆ ಎಂದು ಮಾಹಿತಿ ನೀಡಿದ ಕಾರಣ ನಾನು ಅವರ ಜೊತೆ ಹೋದೆ. ಇದನ್ನು ಹೊರತುಪಡಿಸಿ ನಾನು ಯಾರ ಮೇಲೂ ಹಲ್ಲೆ ಮಾಡಿಲ್ಲ, ಹುಡುಗಿಯೊಂದಿಗೆ ಯಾವುದೇ ರೀತಿಯ ಮಾತುಕತೆಯನ್ನೂ ನಡೆಸಿಲ್ಲ. ನನ್ನ ವಿರುದ್ಧ ದಾಖಲಿಸಿರುವ ಆರೋಪಗಳು ಸಂಪೂರ್ಣ ಸುಳ್ಳು” ಎಂದು ತಿಳಿಸಿದರು.

ಅಕ್ಷತಾ ಪೂಜಾರಿ ಅವರು ಮಾಡಿರುವ ಆರೋಪಗಳಿಂದಾಗಿ ಪೊಲೀಸರು ಹಾಗೂ ನನ್ನ ಮೇಲೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ ಅವರು, “ಸತ್ಯ ಮತ್ತು ಧರ್ಮ ಇದ್ದರೆ ಅದು ನನ್ನನ್ನು ಕಾಪಾಡುತ್ತದೆ ಎಂಬ ನಂಬಿಕೆ ನನಗಿದೆ. ನ್ಯಾಯ ಎಲ್ಲರಿಗೂ ಸಮಾನವಾಗಿ ದೊರಕಬೇಕು. ಒಂದು ಜಾತಿ ಅಥವಾ ಸಂಘಟನೆಯ ಬೆಂಬಲ ಇದ್ದವರಿಗೆ ಮಾತ್ರ ನ್ಯಾಯ ಸಿಗುವ ಸ್ಥಿತಿ ನಿರ್ಮಾಣವಾಗಬಾರದು” ಎಂದು ಹೇಳಿದರು.

ತಮಗೂ ನ್ಯಾಯ ದೊರಕಬೇಕಾದರೆ ಜಾತಿ ಅಥವಾ ಸಂಘಟನೆಯ ಹೆಸರಿನಲ್ಲಿ ಹೋರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗುತ್ತಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದ ದೇವೇಂದ್ರ ಸುವರ್ಣ, “ನಾನು ಸತ್ಯದ ಮೇಲೆ ನಿಂತಿದ್ದೇನೆ. ಸಂವಿಧಾನದ ಕಾನೂನ್ನು ನಂಬಿದ್ದೇನೆ ನನಗೆ ನ್ಯಾಯ ಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರು ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...