ಗುಬ್ಬಿಯಲ್ಲಿ ನೊಣವಿನಕೆರೆ ಸ್ವಾಮೀಜಿಗಳಿಂದ ಧನುರ್ಮಾಸದ ಇಷ್ಟಲಿಂಗ ಪೂಜೆ.

Date:

ವೀರಶೈವ ಸಮಾಜ, ಪಾರ್ವತಿ ವೀರಶೈವ ಲಿಂಗಾಯಿತ ಮಹಿಳಾ ಸಮಾಜ ಹಾಗೂ ಗುಬ್ಬಿ ನಗರ ವೀರಶೈವ ಯುವಸೇವಾ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಧನುರ್ಮಾಸದ ಇಷ್ಟಲಿಂಗ ಪೂಜೆ ಕಾರ್ಯಕ್ರಮವನ್ನು ನೊಣವಿನಕೆರೆ ಕಾಡು ಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ನಡೆಸಿಕೊಟ್ಟರು.

ಶನಿವಾರ ಬೆಳಿಗ್ಗೆ ಪಟ್ಟಣದ ವೀರಶೈವ ಸಮಾಜದ ಕಚೇರಿ ಆವರಣದಲ್ಲಿ ನಡೆದ ಇಷ್ಟಲಿಂಗ ಪೂಜೆ ವಿಧಿವತ್ತಾಗಿ ನಡೆಸಿದ ಶ್ರೀಗಳು ಗೋಸಲ ಶ್ರೀ ಚನ್ನಬಸವೇಶ್ವರರ ಪುಣ್ಯಕ್ಷೇತ್ರದಲ್ಲಿ ಈ ವಿಶೇಷ ಪೂಜೆ ಸಾರ್ಥಕ ಕಾರ್ಯವಾಗಿದೆ ಎಂದರು.

ವೀರಶೈವ ಲಿಂಗಾಯಿತ ಧರ್ಮ ವಿಶ್ವಮಾನ್ಯ ಪಡೆದುಕೊಂಡು ತನ್ನದೇ ವೈಶಿಷ್ಟ್ಯತೆ ಗಳಿಸಿಕೊಂಡಿದೆ. ನಮ್ಮ ಸಮಾಜ ಲಿಂಗ ಪೂಜೆ, ಜಂಗಮ ಪೂಜೆ ಮೂಲಕವೇ ಲೋಕ ಕಲ್ಯಾಣ ಕಾರ್ಯ ಮಾಡಿದೆ. ಶರಣರ ಮಾರ್ಗಾನುಸಾರ ಸಾಮಾಜಿಕ ಮನ್ನಣೆಯನ್ನು ಧಾರ್ಮಿಕ ಕಾರ್ಯ ಮೂಲಕವೇ ಗಳಿಸಿದ್ದೇವೆ. ಗುರು ಪರಂಪರೆಯನ್ನು ಎಂದೂ ಮರೆಯದ ವೀರಶೈವ ಲಿಂಗಾಯಿತ ಸಮಾಜ ಗುರುಪೀಠಗಳನ್ನು ಸಹ ಆರಾಧಿಸಿ ಅರ್ಥಪೂರ್ಣ ಬದುಕು ನಡೆಸಿದ್ದಾರೆ. ಈ ಹಿನ್ನಲೆ ನಮ್ಮ ಧರ್ಮ ಆಚರಣೆ, ಪೂಜೆ ಪುನಸ್ಕಾರಗಳನ್ನು ನಿಲ್ಲಿಸಿದೆ ಮುಂದುವರೆಸಬೇಕು. ಈ ಕಾರ್ಯ ಗುಬ್ಬಿಯಲ್ಲಿ ಯುವಕರು ನಡೆಸಿಕೊಂಡು ಬಂದಿರುವುದು ಗಮನಾರ್ಹ ವಿಚಾರ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತ್ರಿವಿಧ ದಾಸೋಹ ಮೂಲಕವೇ ನಮ್ಮ ಸಮಾಜ ವಿಶೇಷವಾಗಿ ಗುರುತಿಸಿಕೊಂಡಿದೆ. ಯಾವುದೇ ಕಾರ್ಯಕ್ರಮ ನಡೆದರೂ ಅಲ್ಲಿ ಅಕ್ಷರ, ಅನ್ನ, ಆಶ್ರಯ ಮೂರು ದಾಸೋಹ ನಡೆದೇ ನಡೆಯುತ್ತದೆ. ಹೀಗೆ ಸಮಾಜದ ಮುಖ್ಯವಾಹಿನಿಗೆ ಬಂದ ವೀರಶೈವ ಲಿಂಗಾಯಿತ ಸಮುದಾಯ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಜೊತೆಗೆ ನಮ್ಮ ಆಚರಣೆ ಪದ್ಧತಿ ಸಂಸ್ಕೃತಿ ಬೆಳೆಸಿಕೊಂಡು ಹೋಗುವ ರೀತಿ ಸಂಸ್ಕಾರ ಕಲಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಪಪಂ ಸದಸ್ಯ ಜಿ.ಆರ್.ಶಿವಕುಮಾರ್, ಸಮಾಜದ ಮುಖಂಡರಾದ ಮಂಜುನಾಥ್, ಕಾಂತರಾಜು, ಕಾಯಿ ಸುರೇಶ್, ಗಂಗಾಧರ್, ಅನಿಲ್ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...