ಧರ್ಮಸ್ಥಳದಲ್ಲಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ; ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Date:

ಅನೈತಿಕ ಪೊಲೀಸ್‌ಗಿರಿಯನ್ನು ತಡೆಯಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಅನ್ನು ಸ್ಥಾಪಿಸಲಾಗಿದ್ದರೂ ಕೂಡ, ಅನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಲೇ ಇದೆ. 20 ದಿನಗಳ ಅಂತರದಲ್ಲಿ ಮೂರನೇ ಪ್ರಕರಣ ಇಂದು(ಜ.16) ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ.

ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯೋರ್ವಳು ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ಬೆಂಗಳೂರು ಮೂಲದ ಜೋಡಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದಾಗ ತಡೆದ ಕೆಲವರು, ಅವರ ವಿವರಗಳನ್ನು ಕೇಳಿದ್ದಾರೆ. ಪಂಚೆ ಧರಿಸಿ ತಿಲಕ ಹಾಕಿ ಯುವತಿ ಜೊತೆ ಸುತ್ತಾಡುತ್ತಿದ್ದ ಯುವಕನನ್ನು ವಿಚಾರಿಸಿದಾಗ ಆತ ಮುಸ್ಲಿಂ ಯುವಕ ಎಂದು ಗೊತ್ತಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಧರ್ಮಸ್ಥಳ ಠಾಣೆಯ ಪೊಲೀಸರು, ಜೋಡಿಯನ್ನು ಬಳಿಕ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

JODI IN D

ಜೋಡಿಯು ನೀಡಿದ ಮಾಹಿತಿಯನ್ನಾಧರಿಸಿ ಪೊಲೀಸರು ಅವರ ಪೋಷಕರೊಂದಿಗೆ ಮಾತನಾಡಿದ್ದು, ಬಳಿಕ ಅವರನ್ನು ಧರ್ಮಸ್ಥಳ ಪೊಲೀಸರು ಮನೆಗೆ ಕಳುಹಿಸಿರುವುದಾಗಿ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಬಂಟ್ವಾಳ | ರಿಕ್ಷಾ ಹಿಂದೆ ಗನ್‌ನೊಂದಿಗೆ ಗಾಂಧಿ ಹಂತಕ ಗೋಡ್ಸೆ ಹೆಸರು: ಸಮಾಜದಲ್ಲಿ ಆತಂಕ ಸೃಷ್ಟಿಸುವ ಹುನ್ನಾರ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆ್ಯಂಟಿ ಕಮ್ಯೂನಲ್ ವಿಂಗ್(Anti Communal Wing) ಅನ್ನು ಪೊಲೀಸ್ ಇಲಾಖೆ ರಚಿಸಿದ್ದರೂ ಕೂಡ, ಕರಾವಳಿ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ಅನೇಕ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಲೇ ಇದೆ. ಕೆಲವು ಘಟನೆಗಳಲ್ಲಿ ಹಲ್ಲೆ ಕೂಡ ನಡೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...