ಧರ್ಮಸ್ಥಳ ಪ್ರಕರಣ | 13ನೇ ಸ್ಥಳದಲ್ಲಿ ಉತ್ಖನನ: ಜಿಪಿಎಸ್‌ ಯಂತ್ರ ಬಳಸಲು ಮುಂದಾದ ಎಸ್‌ಐಟಿ

Date:

ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ(ಆ.11) ಕೂಡ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲು ಎಸ್‌ಐಟಿ ಮುಂದಾಗಿದೆ.

ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುವುದಕ್ಕೂ ಮುನ್ನ ಎಸ್‌ಐಟಿ ಅಧಿಕಾರಿಗಳು ಜಿಪಿಎಸ್ ಡ್ರೋನ್ ಯಂತ್ರ ಬಳಸಲು ಮುಂದಾಗಿದ್ದಾರೆ.

ಈ ಬಗ್ಗೆ ಸ್ಥಳದಿಂದ ಈದಿನ ಡಾಟ್‌ ಕಾಮ್‌ಗೆ ಮಾಹಿತಿ ನೀಡಿರುವ ನಮ್ಮ ಪ್ರತಿನಿಧಿ ಭೀಮಾ ನಾಯ್ಕ್‌, “ಸಾಕ್ಷಿ ದೂರುದಾರ ಗುರುತಿಸಿದ್ದ ಈವರೆಗಿನ ಯಾವುದೇ ಸ್ಥಳದಲ್ಲಿ ಜಿಪಿಎಸ್ ತಂತ್ರಜ್ಞಾನವನ್ನು ಎಸ್‌ಐಟಿ ಬಳಸಿಲ್ಲ. ಸೋಮವಾರ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ. ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಿಂದ ಬರುವಾಗ ಜಿಪಿಎಸ್ ಯಂತ್ರವನ್ನು ತಂದಿದ್ದಾರೆ. ಅದರ ಫಲಿತಾಂಶದ ಆಧಾರದ ಮೇಲೆ ಉತ್ಖನನ ನಡೆಸುವುದಕ್ಕೆ ಮುಂದಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಹಲವಾರು ವಿದ್ಯುತ್ ಕಂಬಗಳ ಸಹಿತ ಹಲವು ಅಡಚಣೆಗಳಿರುವುದರಿಂದ ಎಸ್‌ಐಟಿ ಅಧಿಕಾರಿಗಳು ಜಿಪಿಎಸ್ ಯಂತ್ರ ಬಳಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಜಿಪಿಎಸ್ ತಂತ್ರಜ್ಞಾನದ ಬಳಕೆ ಸಾರ್ವಜನಿಕರಲ್ಲಿ ಹೆಚ್ಚು ಕುತೂಹಲ ಮೂಡಿಸಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ವ್ಯಾಪಕ ಚರ್ಚೆಗೆ ಕಾರಣವಾದ ಕಾಂಗ್ರೆಸ್‌ನ ಮಾಜಿ ಸಂಸದ ಜನಾರ್ಧನ ಪೂಜಾರಿ ಹೇಳಿಕೆ

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 10ರಂದು ಯಾವುದೇ ಕಾರ್ಯಾಚರಣೆ ನಡೆದಿರಲಿಲ್ಲ. ಆ. 9ರಂದು ಧರ್ಮಸ್ಥಳದ ಬಾಹುಬಲಿ ಬೆಟ್ಟದ ಸಮೀಪ ಶೋಧ ನಡೆದಿತ್ತು. ಬಾಹುಬಲಿ ಅರಣ್ಯದಲ್ಲಿ 16 ಮತ್ತು 16-ಅ ಗುರುತು ಮಾಡಿದ ಎರಡು ಜಾಗದಲ್ಲಿ ಕಾರ್ಯಾಚರಣೆ ನಡೆದಿತ್ತು. ಆದರೆ, ಈ ವೇಳೆ ಯಾವುದೇ ಕುರುಹುಗಳು ಪತ್ತೆಯಾಗಿರಲಿಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...