ಧರ್ಮಸ್ಥಳ ಪ್ರಕರಣ | ದೂರುದಾರನ ಮಾಹಿತಿ ಬಹಿರಂಗಪಡಿಸಿದವರ ವಿರುದ್ಧ ಪ್ರತ್ಯೇಕ ತನಿಖೆ: ಎಸ್‌ಪಿ

Date:

ಧರ್ಮಸ್ಥಳ ಪ್ರದೇಶದ ಸುತ್ತಮುತ್ತಲಿನ ಕಾಡಿನಲ್ಲಿ ಸಾಮೂಹಿಕವಾಗಿ ನೂರಾರು ಮೃತದೇಹಗಳನ್ನು ಹೂತು ಹಾಕಿದ್ದೇನೆಂದು ವ್ಯಕ್ತಿಯೊಬ್ಬ ದೂರು ನೀಡಿದ ಪ್ರಕರಣದಲ್ಲಿ ಜಿಲ್ಲೆಯ ಸಕ್ಷಮ ಪ್ರಾಧಿಕಾರವು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಾಕ್ಷಿಯ ರಕ್ಷಣೆಗೆ ಅನುಮೋದನೆ ನೀಡಿದೆ. ಆದರೆ, ದೂರುದಾರ ಸಾಕ್ಷಿಯ ಗುರುತಿನ ರಕ್ಷಣೆಯ ವಿಚಾರದಲ್ಲಿ ಗಂಭೀರ ಲೋಪವಾಗಿರುವುದು ಬೆಳಕಿಗೆ ಬಂದಿದೆ.

ಸಾಕ್ಷಿ ದೂರುದಾರರನ್ನು ಪ್ರತಿನಿಧಿಸುತ್ತಿರುವ ವ್ಯಕ್ತಿಗಳು, ಪತ್ರಿಕಾ ಪ್ರಕಟಣೆ ಹಾಗೂ ಎಫ್‌.ಐ.ಆರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಮೂಲಕ, ಸಾಕ್ಷಿ ದೂರುದಾರರ ವಯಸ್ಸು, ವೃತ್ತಿಯ ಸ್ಥಳ, ಚಹರೆ, ವೃತ್ತಿಯಲ್ಲಿದ್ದ ಅವಧಿ, ಸಮುದಾಯ ಮತ್ತು ಇತರೆ ಮಾಹಿತಿಗಳನ್ನು ಬಹಿರಂಗಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದಾಗಿ ಸ್ಥಳೀಯ ಅನೇಕರು ಸಾಕ್ಷಿ ದೂರುದಾರರನ್ನು ಅಂದಾಜಿಸಿದ್ದಾರೆ.

ಈ ಘಟನೆಯ ಹೊರತಾಗಿಯೂ, ಎಲ್ಲ ಅಧಿಕೃತ ಮೂಲಗಳಿಂದ ಸಾಕ್ಷಿ ದೂರುದಾರರ ಗುರುತನ್ನು ಬಹಿರಂಗಪಡಿಸದಿರಲು ನಿರ್ಧರಿಸಲಾಗಿದೆ. ಅಲ್ಲದೆ, ಈ ಸಂಬಂಧ ಬಂಟ್ವಾಳ ಪೊಲೀಸ್‌ ಉಪಾಧೀಕ್ಷಕರ (ಡಿವೈಎಸ್‌ಪಿ) ನೇತೃತ್ವದಲ್ಲಿ ಪ್ರತ್ಯೇಕ ತನಿಖೆಯನ್ನು ಆರಂಭಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಧರ್ಮಸ್ಥಳ

ಸಾಕ್ಷಿ ದೂರುದಾರರು ಬೆಳ್ತಂಗಡಿಯ ನ್ಯಾಯಾಲಯದ ಮುಂದೆ ಶುಕ್ರವಾರ ಹಾಜರಾಗಿ ತಮ್ಮ ಹೇಳಿಕೆಯನ್ನು ನೀಡಿರುತ್ತಾರೆ. ಇದೇ ವೇಳೆ ಸಾಕ್ಷಿ ದೂರುದಾರರು ಸ್ವತಃ ತಾವೇ ಹೊರತೆಗೆದಿರುವುದಾಗಿ ತಿಳಿಸಿರುವ ಅಸ್ಥಿಪಂಜರದ ಅವಶೇಷಗಳನ್ನು ನ್ಯಾಯಾಲಯದಲ್ಲಿ ಪೊಲೀಸರಿಗೆ ಹಾಜರುಪಡಿಸಿದ್ದಾರೆ. ಈ ಅವಶೇಷಗಳನ್ನು ಸಾಕ್ಷಿ ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರು ಆದಷ್ಟು ಶೀಘ್ರ ಹೂತಿಟ್ಟಿರುವ ಶವ ಹೊರತರಲು ಕ್ರಮ ಕೈಗೊಳ್ಳಬೇಕು: ವಕೀಲ ಪವನ್ ಶ್ಯಾಮ್

ಇನ್ನು ಶುಕ್ರವಾರ ಸಂಜೆ ಮಾಧ್ಯಮಗಳೊಂದಿಗೆ ಮಾತನಾಡಿರುವ ದೂರುದಾರರ ಪರ ವಕೀಲ ಪವನ್ ಶ್ಯಾಮ್, ಪೊಲೀಸರು ಆದಷ್ಟು ಶೀಘ್ರ ಹೂತಿಟ್ಟಿರುವ ಶವ ಹೊರತರಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

VAKEELA PAWAN SHYAM

ಹೆಣಗಳನ್ನು ಹೂತು ಹಾಕಿರುವ ಜಾಗಗಳನ್ನು ಸ್ಪಷ್ಟವಾಗಿ ದೂರುದಾರನು ಗುರುತಿಸಿ ತೋರಿಸಲು ಸಿದ್ಧನಿದ್ದಾನೆ. ಈ ಬಗ್ಗೆ ಪೊಲೀಸರು ಯಾವಾಗ ಬೇಕಾದರೂ ದಿನ ನಿಗದಿಪಡಿಸಿದ್ದರೂ ನಾವು ದೂರುದಾರನೊಂದಿಗೆ ಬಂದು ಸಹಕರಿಸಲಿದ್ದೇವೆ. ಘಟನೆಯ ಬಗ್ಗೆ ಮಾಹಿತಿಗಳನ್ನು ನೀಡಲಾಗಿದೆ. ಸಾಕ್ಷ್ಯ ನಾಶವಾಗುವ ಆತಂಕವೂ ಇದ್ದು, ಸಾಧ್ಯವಾದಷ್ಟು ವೇಗವಾಗಿ ಇಲ್ಲಿ ಹೇಳಿಕೆ ನೀಡಿರುವ ವ್ಯಕ್ತಿ ಹೂತು ಹಾಕಿರುವ ಮೃತದೇಹಗಳನ್ನು ಹೊರತೆಗೆಯಲು ಕ್ರಮ ಕೈಗೊಳ್ಳಬೇಕಾದ ಜವಾಬ್ದಾರಿ ಪೊಲೀಸ್ ಇಲಾಖೆಯದ್ದು ಎಂದು ಅವರು ಹೇಳಿದ್ದಾರೆ.

“ನ್ಯಾಯಾಲಯಲಯದಲ್ಲಿ ಹೇಳಿಕೆ ನೀಡಿರುವ ದೂರುದಾರನನ್ನು ಪೊಲೀಸರು ಬಂಧಿಸಿಲ್ಲ ಹಾಗೂ ಪೊಲೀಸ್ ಕಸ್ಟಡಿಗೆ ನೀಡಲಾಗಿಲ್ಲ. ಅವರು ನಮ್ಮೊಂದಿಗೆ ಇರುತ್ತಾರೆ” ಎಂದು ದೂರುದಾರರ ಪರ ವಕೀಲ ಪವನ್ ಶ್ಯಾಮ್ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...