ಧರ್ಮಸ್ಥಳ ಪ್ರಕರಣ | ಸ್ಪಾಟ್ 1ರಲ್ಲಿ ಸಿಕ್ಕಿದ್ದ ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ವಿವರ ಪತ್ತೆ ಹಚ್ಚಿದ ಎಸ್‌ಐಟಿ

Date:

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿ ಮೃತದೇಹಗಳನ್ನು ಹೂತಿರುವುದಾಗಿ ದೂರುದಾರ ತೋರಿಸಿಕೊಟ್ಟಿರುವ ನೇತ್ರಾವತಿ ಸ್ನಾನಘಟ್ಟದ ಸಮೀಪ ಎಸ್ಐಟಿ ಕಳೆದ ಮೂರು ದಿನಗಳಿಂದ ಉತ್ಖನನ ನಡೆಸುತ್ತಿದೆ. ಮೂರನೇ ದಿನವಾದ ಗುರುವಾರ ಕೆಲವು ಮೂಳೆಗಳು ಪತ್ತೆಯಾಗಿದೆ.

ಈ ನಡುವೆ ಉತ್ಖನನದ ಮೊದಲ ದಿನದಂದು ಗುರುತಿಸಲಾಗಿದ್ದ ಮೊದಲನೇ ಸ್ಥಳದಲ್ಲಿ ಪತ್ತೆಯಾಗಿದ್ದ ಡೆಬಿಟ್ ಕಾರ್ಡ್ ಹಾಗೂ ಪಾನ್ ಕಾರ್ಡ್ ವಿವರಗಳನ್ನು ಪತ್ತೆ ಹಚ್ಚುವಲ್ಲಿ ಎಸ್‌ಐಟಿ ಅಧಿಕಾರಿಗಳು ಸಫಲರಾಗಿರುವುದಾಗಿ ಮೂಲಗಳು ಈದಿನ ಡಾಟ್‌ ಕಾಮ್‌ಗೆ ಮಾಹಿತಿ ನೀಡಿದೆ.

ಮಂಗಳವಾರ ಸ್ಪಾಟ್ 1 ರಲ್ಲಿ ಪಾನ್ ಕಾರ್ಡ್ ಪತ್ತೆಯಾದ ವ್ಯಕ್ತಿಯ ಕುಟುಂಬವನ್ನು ಎಸ್‌ಐಟಿ ಪತ್ತೆ ಹಚ್ಚಿದೆ. ಸಿಕ್ಕಿದ್ದ ಪಾನ್ ಕಾರ್ಡ್‌ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸುರೇಶ್ ಎಂಬ ವ್ಯಕ್ತಿಯದ್ದು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುರೇಶ್ ಎಂಬ ವ್ಯಕ್ತಿ ಕಳೆದ ಮಾರ್ಚ್ 2025ರಲ್ಲಿ ನೆಲಮಂಗಲ ತಾಲೂಕಿನಲ್ಲಿರುವ ತನ್ನ ಹುಟ್ಟೂರಿನಲ್ಲಿ ಕಾಮಾಲೆ ರೋಗದಿಂದ ನಿಧನರಾಗಿದ್ದು, ಊರಲ್ಲಿಯೇ ಅವರ ಅಂತ್ಯಕ್ರಿಯೆ ನಡೆಸಿರುವುದನ್ನು ಕೂಡ ಎಸ್‌ಐಟಿ ದೃಢಪಡಿಸಿದೆ. ಅಲ್ಲದೇ, ಈ ಬಗ್ಗೆ ಮಾಹಿತಿಯನ್ನು ಖಚಿತಪಡಿಸಲು ಕೆಲವು ಎಸ್‌ಐಟಿ ಅಧಿಕಾರಿಗಳು ಸುರೇಶ್ ಅವರ ಮನೆಗೆ ಭೇಟಿ ನೀಡಿದ್ದು, ಮೃತರ ತಂದೆಯೂ ಇದನ್ನು ದೃಢಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೃತರು ಮದ್ಯವ್ಯಸನಿಗಳಾಗಿದ್ದರು ಎಂದು ಎಸ್‌ಐಟಿ ತನಿಖೆಯ ವೇಳೆ ತಿಳಿದುಬಂದಿದ್ದು, ಅವರು ಸಾಯುವುದಕ್ಕೂ ಮೊದಲು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರು ತಮ್ಮ ಪಾನ್ ಕಾರ್ಡ್ ಕಳೆದುಕೊಂಡಿರಬಹುದು ಎಂದು ಎಸ್‌ಐಟಿ ಶಂಕಿಸಿರುವುದಾಗಿ ಮೂಲಗಳು ತಿಳಿಸಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ಮೂಳೆ ಪತ್ತೆಯ ಬಳಿಕ ತಾತ್ಕಾಲಿಕ ಶೆಡ್‌ ನಿರ್ಮಾಣ; ಉತ್ಖನನ ಮುಂದುವರಿಸಿದ ಎಸ್‌ಐಟಿ

ಅಲ್ಲದೇ, ಈ ಪಾನ್ ಕಾರ್ಡ್‌ ಮಾತ್ರವಲ್ಲದೇ ಮೊದಲ ದಿನದ ಉತ್ಖನನದ ವೇಳೆ ಒಂದು ಡೆಬಿಟ್ ಕಾರ್ಡ್ ಕೂಡ ಪತ್ತೆಯಾಗಿತ್ತು. ಇದನ್ನೂ ಕೂಡ ಎಸ್‌ಐಟಿ ಪರಿಶೀಲಿಸಿದ್ದು, ಅದು ಸುರೇಶ್ ಅವರ ತಾಯಿಗೆ ಸೇರಿದ್ದೆಂದು ತಿಳಿದು ಬಂದಿರುವುದಾಗಿ ಮೂಲಗಳು ತಿಳಿಸಿದೆ.

ಸಿಕ್ಕಿರುವ ಡೆಬಿಟ್ ಕಾರ್ಡ್‌ ಸುರೇಶ್ ಅವರ ತಾಯಿಗೆ ಸೇರಿದ್ದು ಎಂದು ಖಚಿತಪಡಿಸಿದ್ದು, ಅವರು ಜೀವಂತವಾಗಿದ್ದಾರೆ ಮತ್ತು ಆರೋಗ್ಯವಾಗಿದ್ದಾರೆ ಎಂಬುದನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಖಚಿತಪಡಿಸಿಕೊಂಡಿರುವುದಾಗಿ ಈದಿನ ಡಾಟ್‌ ಕಾಮ್‌ಗೆ ಮೂಲಗಳು ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...