ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

Date:

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧಿತರಾಗಿದ್ದ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಹೇಶ್ ಶೆಟ್ಟಿ ತಿಮರೋಡಿ, “ಸೌಜನ್ಯ ಹೋರಾಟ ಮುಂದುವರಿಯಲಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಉಡುಪಿಯ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪೊಲೀಸ್ ವಾಹನದಲ್ಲಿ ಕುಳಿತಿದ್ದಾಗಲೇ ಮಾತನಾಡಿದ ಅವರು, “ಜಾಮೀನು ನೀಡಲು ಶ್ರಮಿಸಿದ ಎಲ್ಲ ವಕೀಲರಿಗೆ ಧನ್ಯವಾದಗಳು. ಅನಾಮಿಕ ದೂರುದಾರನ ಬಂಧನದ ಬಗ್ಗೆ ನನಗೆ ಮಾಹಿತಿ ಇಲ್ಲ. ಸುಜಾತ ಭಟ್ ಬಗ್ಗೆ ನನಗೆ ಏನೂ ಹೇಳುವುದಕ್ಕಿಲ್ಲ. ಅವರು ನಮ್ಮ ಹೋರಾಟದಲ್ಲೇ ಇಲ್ಲ. ಅವರಿಗೆ ಅನ್ಯಾಯ ಆಗಿದೆ ಅಂತ ಬಂದಿದ್ದಾರೆ” ಎಂದು ತಿಳಿಸಿದರು.

ಸುಜಾತ ಭಟ್ ನಿಮ್ಮನ್ನು ದಿಕ್ಕು ತಪ್ಪಿಸಿದ್ದಾರೆಯೇ ಎಂದು ಪ್ರಶ್ನಿಸಿದಾಗ, “ಜಾಮೀನು ಸಿಕ್ಕಿದೆ. ಜೈಲಿನಿಂದ ಹೊರಬಂದ ಬಳಿಕ ಮಾತನಾಡುತ್ತೇನೆ. ಸುಜಾತ ಭಟ್ ಬಗ್ಗೆ ಹೇಳುವುದಕ್ಕೇನೂ ಇಲ್ಲ. ನಮ್ಮನ್ನು ದಿಕ್ಕು ತಪ್ಪಿಸಿದರೆ ಅಣ್ಣಪ್ಪ ಮಂಜುನಾಥ ಸ್ವಾಮಿಯಿಂದ ಮಾತ್ರ. ಬೇರೆ ಯಾರಿಂದಲೂ ದಿಕ್ಕು ತಪ್ಪಿಸಲು ಆಗುವುದಿಲ್ಲ. ಸುಜಾತ ಭಟ್ ಅವರನ್ನು ನಾವು ನಂಬಿಲ್ಲ. ನಮ್ಮದು ಸೌಜನ್ಯಳ ನ್ಯಾಯಕ್ಕಾಗಿರುವ ಹೋರಾಟ. ಅದನ್ನು ಇನ್ನಷ್ಟು ಮುಂದುವರಿಸುತ್ತೇವೆ” ಎಂದು ಮಹೇಶ್ ಶೆಟ್ಟಿ ತಿಮರೋಡಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯ ವಾಹಿನಿ ಮಾಧ್ಯಮಗಳು ತಮಗೆ ಬೇಕಾದವರ ಜೊತೆಗೆ ಡೀಲ್ ಮಾಡಿಕೊಂಡಿದೆ. ಹಾಗಾಗಿ, ಮಾಧ್ಯಮಗಳ ಬಗ್ಗೆ ಏನೂ ಮಾತನಾಡುವುದಿಲ್ಲ” ಎಂದು ಮಹೇಶ್ ಶೆಟ್ಟಿ ತಿಮರೋಡಿ ಅಸಮಾಧಾನ ಹೊರಹಾಕಿದರು.

ಹೆಂಡತಿಗೆ ನೋಟಿಸ್ ನೀಡಿ, ಗಂಡನನ್ನು ಬಂಧಿಸಿದ್ದರು: ತಿಮರೋಡಿ ಪರ ವಕೀಲ ವಿಜಯ ವಾಸು ಪೂಜಾರಿ

ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಸಿಕ್ಕ ಬಳಿಕ ಈದಿನ ಡಾಟ್‌ ಕಾಮ್‌ ಜೊತೆಗೆ ಮಾತನಾಡಿದ ತಿಮರೋಡಿ ಪರ ವಕೀಲರಾದ ವಿಜಯ ವಾಸು ಪೂಜಾರಿ, “ಉಡುಪಿಯ ಜೆಎಂಎಫ್‌ಸಿ ನ್ಯಾಯಾಲಯ ತಿಮರೋಡಿ ಅವರಿಗೆ ಜಾಮೀನು ಮಂಜೂರು ಮಾಡಿದೆ. ಇದು ಅವರ ಕಾನೂನು ಹೋರಾಟಕ್ಕೆ ಸಿಕ್ಕ ಬಹುದೊಡ್ಡ ಜಯ. ಅವರ ವಿರೋಧಿಗಳಿಗೆ ಪಾಠ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

“ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ ಓರ್ವ ಅಮಾಯಕಿ ಹುಡುಗಿಯ ಪರ ತಿಮರೋಡಿ ಕಳೆದ 13 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಇವತ್ತು ನ್ಯಾಯಾಲಯದಲ್ಲಿ ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದರು. ನ್ಯಾಯಾಲಯವು ಕೇವಲ ಮೂರು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿತ್ತು. ನಂತರ ಜಾಮೀನು ನೀಡುವಂತೆ ಬಲವಾದ ವಾದ ಮಂಡಿಸಿದ್ದೆವು. ನ್ಯಾಯಾಲಯವು ನಮ್ಮ ಮನವಿಯನ್ನು ಪುರಸ್ಕರಿಸಿದೆ” ಎಂದು ತಿಳಿಸಿದರು.

“ತಿಮರೋಡಿ ಬಂಧನದ ವೇಳೆ ಕಾನೂನು ಉಲ್ಲಂಘನೆಯಾಗಿದ್ದನ್ನು ನ್ಯಾಯಾಲಯಕ್ಕೆ ತಿಳಿಸಿದ್ದೇವೆ. ನೋಟಿಸ್ ಅನ್ನು ತಿಮರೋಡಿ ಅವರ ಪತ್ನಿಗೆ ನೀಡಿ, ತಿಮರೋಡಿ ಅವರನ್ನು ಬಂಧಿಸಲಾಗಿತ್ತು. ಹೆಂಡತಿಗೆ ನೋಟಿಸ್ ನೀಡಿ, ಗಂಡನನ್ನು ಬಂಧಿಸಿದ್ದರು. ಇಂಥದ್ದೆಕ್ಕೆಲ್ಲ ಯಾವುದೇ ಕಾನೂನಿನಲ್ಲಿ ಅವಕಾಶ ಇಲ್ಲ. 2ನೇ ನೋಟಿಸ್‌ ಜಾರಿ ಮಾಡಿ, ಕೇವಲ 24 ಗಂಟೆಯೊಳಗೆ ಬಂಧಿಸಿದ್ದಾರೆ. ಈ ಎಲ್ಲ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಾಮೀನು ನೀಡಿದೆ” ಎಂದು ತಿಮರೋಡಿ ಪರ ವಕೀಲರಾದ ವಿಜಯ ವಾಸು ಪೂಜಾರಿ ತಿಳಿಸಿದರು.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...