ಧರ್ಮಸ್ಥಳ ಗಲಾಟೆ | ಬಿಗ್‌ಬಾಸ್ ಸ್ಫರ್ಧಿ ರಜತ್ ಕುಟುಂಬಕ್ಕೆ ಜೀವ ಬೆದರಿಕೆ: ದೂರು ದಾಖಲಿಸಿದ ದಂಪತಿ

Date:

ಧರ್ಮಸ್ಥಳ ಆಸುಪಾಸಿನಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತು ಅವರ ಪತ್ನಿ ಅಕ್ಷತಾ ಅವರಿಗೆ ಜೀವ ಬೆದರಿಕೆ ಹಾಕಿರುವ ಸಂಬಂಧ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಡಿಜಿಐಜಿಪಿ ಕಚೇರಿಗೆ ಆಗಮಿಸಿ, ತಮಗೆ ಬಂದಿರುವ ಜೀವ ಬೆದರಿಕೆ ಸಂದೇಶಗಳು ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ.

ರಜತ್ ಅವರ ಪತ್ನಿ ಅಕ್ಷತಾ ಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ‘ಕೊಲೆ ಮಾಡುವೆ, ಕತ್ತರಿಸುವೆ’ ಎಂಬ ಬೆದರಿಕೆ ಸಂದೇಶಗಳು ಬಂದಿವೆ ಎಂದು ಆರೋಪಿಸಿ ಈ ದೂರು ದಾಖಲಾಗಿದೆ. ಸದ್ಯ ಈ ದೂರು ಸೈಬರ್ ಠಾಣೆಗೆ ವರ್ಗಾವಣೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರು ನೀಡಿದ ಬಳಿಕ ಈ ಬಗ್ಗೆ ಮಾತನಾಡಿರುವ ರಜತ್, “ನಾವು ಧರ್ಮಸ್ಥಳಕ್ಕೆ ಸೌಜನ್ಯಗೆ ನ್ಯಾಯ ಕೇಳಲು ಹೋಗಿದ್ದೆವು. ಯಾವುದೇ ಜಾತಿ, ಧರ್ಮ, ದೇವಸ್ಥಾನದ ಬಗ್ಗೆ ನಾವು ಮಾತನಾಡಿಲ್ಲ. ಹಾಡಹಗಲೇ ನಮ್ಮ ಕಣ್ಣ ಮುಂದೆ ಗಲಾಟೆ ನಡೆದಿದೆ. ಹಲ್ಲೆ ಮಾಡಿದವರ ವಿರುದ್ಧ ಮತ್ತು ಬೆದರಿಕೆ ಸಂದೇಶ ಕಳುಹಿಸಿದವರ ವಿರುದ್ಧ ದೂರು ಕೊಟ್ಟಿದ್ದೇವೆ. ನಾವು ಬೆದರಿಕೆಗಳಿಗೆ ಹೆದರುವವರಲ್ಲ” ಎಂದರು.

ಬಳಿಕ ಮಾತನಾಡಿದ ಅಕ್ಷತಾ ತಮ್ಮ ಸಾಮಾಜಿಕ ಜಾಲತಾಣದ ಸ್ಟೇಟಸ್‌ನಲ್ಲಿ, ‘ನಿನ್ನ ಗಂಡನನ್ನು ವಾಪಸ್ ಕರೆಸಿಕೊ, ಇದು ಮಂಡ್ಯ ಅಲ್ಲ, ಕರಾವಳಿ’ ಎಂಬ ಸಂದೇಶವನ್ನು ಶಾರದಾ ಭಟ್ ಎಂಬುವವರು ಕಳಿಸಿದ್ದಾರೆ. ಇದು ಜೀವ ಬೆದರಿಕೆಯಾಗಿದ್ದು, ದೂರು ನೀಡಿದ್ದೇವೆ. ನಾವು ಮಂಡ್ಯದವರು, ಹುಟ್ಟಿ ಬೆಳೆದಿದ್ದು ಮಂಡ್ಯದಲ್ಲಿ. ವಾಪಸ್ ಕರೆಯುವ ಅವಶ್ಯಕತೆ ಇಲ್ಲ ಎಂದರು.

ಏನಿದು ಬೆಳವಣಿಗೆ?

ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾಗಿದ್ದ ಸೌಜನ್ಯ ಮನೆಗೆ ಭೇಟಿ ನೀಡಿದ್ದರು. ಸ್ಥಳೀಯ ಯೂಟ್ಯೂಬರ್‌ಗಳಿಗೆ ಪಾಂಗಳ ಕ್ರಾಸ್ ಬಳಿ ಸಂದರ್ಶನ ನೀಡುತ್ತಿದ್ದ ವೇಳೆ ಕೆಲವು ಗೂಂಡಾಗಳು ಬಂದು ಯೂಟ್ಯೂಬರ್ಸ್‌ಗಳಿಗೆ ಹಲ್ಲೆ ನಡೆಸಿದ್ದರು. ಈ ವೇಳೆ ರಜತ್ ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಬಳಿಕ ಅಲ್ಲಿಂದ ತೆರಳಿದ್ದ ರಜತ್, ಈ ಘಟನೆಯ ಬಳಿಕ ತನಗೆ ಜೀವ ಬೆದರಿಕೆ ಬಂದಿರುವುದಾಗಿ ತಿಳಿಸಿದ್ದಾರೆ.

ದೂರು 3
ಶಾರದಾ ಭಟ್ ಎಂಬುವವರ ಫೇಸ್‌ಬುಕ್ ಪೋಸ್ಟ್

ಅಲ್ಲದೇ, ಸೌಜನ್ಯ ಮನೆಗೆ ಭೇಟಿಯ ಸಂಬಂಧ ಶಾರದಾ ಭಟ್ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ, ‘ಬಿಗ್ ಬಾಸ್ ರಜತ್ ಅವರ ಪತ್ನಿ ಹೆಸರು ಅಕ್ಷತಾ. ಇವರು ರಜತ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಇಬ್ಬರಿಗೂ ಇಬ್ಬರು ಮಕ್ಕಳಿದ್ದಾರೆ, ಒಂದು ಗಂಡು ಮತ್ತು ಒಂದು ಹೆಣ್ಣು.ಗಂಡ ಬೇಕು ಅಂದ್ರೆ ರಿಟರ್ನ್ ಕರೆಯಿಸಿಕೊಳ್ಳಿ ಅಕ್ಷತಾ ಅವರೇ…ಇದು ಮಂಡ್ಯ ಅಲ್ಲ ಕರಾವಳಿ…… ” ಎಂದು ಪೋಸ್ಟ್‌ ಮಾಡಿದ್ದರು. ಈ ಎಲ್ಲ ಬೆಳವಣಿಗೆಯ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...