ಧರ್ಮಸ್ಥಳ | ಸೌಜನ್ಯ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ಉದಯ್ ಕುಮಾರ್ ಜೈನ್‌ಗೆ ಎಸ್‌ಐಟಿ ಬುಲಾವ್!

Date:

ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ನಡೆದಿದೆ. ಈ ಮಧ್ಯೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಎಸ್ ಐ ಟಿ ತನಿಖೆ ಆರಂಭಿಸಿದೆಯಾ ಎಂಬ ಪ್ರಶ್ನೆ ಕೂಡ ಮೂಡತೊಡಗಿದೆ.

ಸೌಜನ್ಯ ಕೊಲೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (SIT) ಕೈಗೆತ್ತಿಕೊಂಡಿದ್ದು, ಆರೋಪಕ್ಕೊಳಗಾಗಿರುವವರನ್ನು ವಿಚಾರಣೆ ನಡೆಸುತ್ತಿದೆ. ಈ ವಿಚಾರಣೆಗೆ ಒಳಗಾಗಿರುವವರಲ್ಲಿ ಒಬ್ಬರಾದ ಉದಯ್ ಕುಮಾರ್ ಜೈನ್, ‘ತಾವು ಯಾವುದೇ ತನಿಖೆಗೂ ಸಿದ್ಧವಿದ್ದು, ಮತ್ತೊಮ್ಮೆ ತಮ್ಮ ಬ್ರೈನ್ ಮ್ಯಾಪಿಂಗ್ ಮಾಡಲು ಕೂಡ ಸಿದ್ಧನಿದ್ದೇನೆ’ ಎಂದು ತಿಳಿಸಿದ್ದಾರೆ.

ಸೌಜನ್ಯ ಕುಟುಂಬಸ್ಥರು ಉದಯ್ ಕುಮಾರ್ ಜೈನ್, ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್ ಅವರ ಮೇಲೆ ಆರೋಪ ಮಾಡಿದ್ದರು. ಅವರ ಪೈಕಿ ಉದಯ್ ಜೈನ್ ಎಸ್‌ಐಟಿ ಮುಂದೆ ಬುಧವಾರ ಹಾಜರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಐಟಿ ಕಚೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಉದಯ್ ಕುಮಾರ್ ಜೈನ್, “ನಿನ್ನೆ ರಾತ್ರಿ ಎಸ್‌ಐಟಿ ಅಧಿಕಾರಿಯೋರ್ವರು ನನಗೆ ಕರೆ ಮಾಡಿ ಇವತ್ತು ವಿಚಾರಣೆಗೆ ಬರುವಂತೆ ಸೂಚಿಸಿದ್ದರು. ಹಾಗಾಗಿ ಬಂದಿದ್ದೇನೆ. ನಾನು ಯಾವುದೇ ವಿಚಾರಣೆಗೂ ಸಿದ್ಧನಿದ್ದೇನೆ” ಎಂದು ಹೇಳಿದ್ದಾರೆ.

ಸೌಜನ್ಯ ಪ್ರಕರಣದಲ್ಲಿ ಸಿಬಿಐ ತನಿಖೆಗೂ ತಾನು ಸಂಪೂರ್ಣ ಸಹಕರಿಸಿರುವುದಾಗಿ ಹೇಳಿರುವ ಉದಯ್ ಜೈನ್,’ನಮ್ಮ ಬ್ರೈನ್ ಮ್ಯಾಪಿಂಗ್ ಕೂಡಾ ಆಗಿದೆ. ಮತ್ತೊಮ್ಮೆ ಬ್ರೈನ್ ಮ್ಯಾಪಿಂಗ್ ಮಾಡುವುದಕ್ಕೂ ನಾವು ಸಿದ್ಧರಿದ್ದೇವೆ. ನಮ್ಮ ಬಳಿ ಮಾನನಷ್ಟ ಮೊಕದ್ದಮೆ ಹೂಡಲು ಹಣವಿಲ್ಲ. ಅಲ್ಲದೆ, ಎಸ್‌ಐಟಿ ತನಿಖೆಗೆ ನಾನು ಸಾಯುವವರೆಗೂ ಸಹಕಾರ ನೀಡಲು ಸಿದ್ಧನಿದ್ದೇನೆ. ಈ ಪ್ರಕರಣಕ್ಕೆ ಈಡಿ ಪ್ರವೇಶಿಸಿದ್ದು, ಸತ್ಯ ಹೊರಬರುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್‌ನಿಂದ ಚಿನ್ನಾಭರಣ ಕಳವು: ಸಿಬ್ಬಂದಿ ಸಹಿತ ಐವರ ಬಂಧನ

“ಸೌಜನ್ಯ ತಾಯಿ ಎಸ್‌ಐಟಿಗೆ ಕೊಟ್ಟ ದೂರಿಗೆ ಕರೆದಿರಲೂಬಹುದು. ಚಿನ್ನಯ್ಯ ನೀಡಿದ ಹೇಳಿಕೆಯ ಕಾರಣಕ್ಕೂ ಕರೆದಿರಬಹುದು. ಬುರುಡೆ ಪ್ರಕರಣದ ದಿಕ್ಕು ಬದಲಿಸುವ ಹುನ್ನಾರ ಇದು. ಗುಂಡಿ ಎಲ್ಲಾ ತೋಡಿಯಾಗಿದೆ. ಈಗ ವಿಷಯಾಂತರ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಬುರುಡೆ ಪ್ರಕರಣ ಮುಚ್ಚಿ ಹಾಕಲು ಈ ಪ್ರಕರಣವನ್ನ ಮತ್ತೆ ಮುನ್ನೆಲೆಗೆ ತರುತ್ತಿದ್ದಾರೆ” ಎಂದು ಉದಯ್ ಕುಮಾರ್ ಜೈನ್ ಇದೇ ವೇಳೆ ಹೇಳಿಕೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...