ಧರ್ಮಸ್ಥಳ ಸೌಜನ್ಯ ಪ್ರಕರಣ: ಸಮಾನ ಮನಸ್ಕರ ಸಮಾಲೋಚನಾ ಸಭೆಗೆ ಪೊಲೀಸರಿಂದ ಅಡ್ಡಗಾಲು!

Date:

ಕನ್ನಡದ ಯೂಟ್ಯೂಬರ್ ‘ದೂತ- ಸಮೀರ್ ಎಂಡಿ’ಯವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಿರುವ ವಿಡಿಯೋ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಕಳೆದ ಫೆಬ್ರವರಿ 27ರಂದು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಆಗಿರುವ ವಿಡಿಯೋ ಸದ್ಯ 17 ಮಿಲಿಯನ್ ವೀಕ್ಷಣೆ ಕಂಡಿದೆ.

ಈ ವಿಡಿಯೋ ವಿಚಾರ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾ.9ರ ಬೆಳಗ್ಗೆ 10ಕ್ಕೆ ಸಮಾನ ಮನಸ್ಕರು ಸಮಾಲೋಚನಾ ಸಭೆಯನ್ನು ಆಯೋಜಿಸಿದ್ದರು.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಸೌಜನ್ಯ ಪರ ಸಾಹಿತಿ, ಚಿಂತಕ, ಪತ್ರಕರ್ತರು, ಹೋರಾಟಗಾರರ ಸಮಾಲೋಚನಾ ಸಭೆ ಕರೆಯಲಾಗಿತ್ತು. ಆದರೆ ಕನ್ನಡ ಸಾಹಿತ್ಯ ಪರಿಷತ್ ಒತ್ತಡಕ್ಕೊಳಗಾಗಿ ಕೊನೇ ಕ್ಷಣದಲ್ಲಿ ಸಭಾಂಗಣದ ಅನುಮತಿಯನ್ನು ರದ್ದುಗೊಳಿಸಿದ್ದರಿಂದ ಸಮಾಲೋಚನಾ ಸಭೆಯನ್ನು ಮುಂದೂಡಲಾಗಿದೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003718911

ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣವನ್ನು ಬಾಡಿಗೆ ಪಾವತಿಸಿ ಕಾರ್ಯಕ್ರಮಕ್ಕೆ ನಿಗದಿಗೊಳಿಸಲಾಗಿತ್ತು. ಕಾರ್ಯಕ್ರಮದ ಬಗ್ಗೆ ಪರಿಷತ್ ಜೊತೆಗೆ ಚರ್ಚೆ ನಡೆಸಲಾಗಿತ್ತು. ಆದರೆ ಸಾಹಿತ್ಯ ಪರಿಷತ್ ಗೆ ಬಂದ ಲೀಗಲ್ ನೋಟಿಸ್ ಮತ್ತು ಪೊಲೀಸ್ ನೋಟಿಸ್ ಆಧಾರದಲ್ಲಿ ಸಭಾಂಗಣವನ್ನು ನೀಡಲಾಗುವುದಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು 08.03.2025 ರಂದು ರಾತ್ರಿ 10.30 ಕ್ಕೆ ಸಂಘಟಕರಲ್ಲೋರ್ವರಾದ ಬೈರಪ್ಪ ಹರೀಶ್ ಕುಮಾರ್ ಅವರಿಗೆ ಲಿಖಿತ ನೋಟಿಸ್ ಕಳಿಸಿದ್ದಾರೆ‌ ಎಂದು ಸಮಾನ ಮನಸ್ಕ ಸದಸ್ಯರು ಮಾಹಿತಿ ನೀಡಿದ್ದಾರೆ.

ದಿಢೀರನೆ ಸಭಾಂಗಣ ನಿರಾಕರಣೆಯ ಹಿನ್ನಲೆಯಲ್ಲಿ 09.03.2025 ರವಿವಾರ 10.30 ಕ್ಕೆ ಅಕ್ಕಮಹಾದೇವಿ ಸಭಾಂಗಣ, ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆಸಲುದ್ದೇಶಿಸಿದ್ದ “ಸೌಜನ್ಯ ಸಮಾಲೋಚನಾ ಸಭೆ”ಯನ್ನು ಮುಂದೂಡಲಾಗಿದೆ ಎಂದು ಸಮಾನ ಮನಸ್ಕ ಸದಸ್ಯರು ತಿಳಿಸಿದ್ದಾರೆ.

1003718910

“ಮುಂಡಾಸುಧಾರಿಗಳು, ಊಳಿಗಮಾನ್ಯದ ಪಳಿಯುಳಿಕೆಗಳು ಸಭೆಗೆ ತಾತ್ಕಾಲಿಕ ಅಡ್ಡಿ ಮಾಡಿರಬಹುದು. ಆದರೆ ಸಮಾನ ಮನಸ್ಕರೆಲ್ಲರೂ ಒಂದು ದೊಡ್ಡ ತಂಡವಾಗಿ ಮುಂಡಾಸುಧಾರಿಗಳ ವಿರುದ್ದ ಕಾನೂನು ಹೋರಾಟವೂ ಸೇರಿದಂತೆ ಎಲ್ಲ ಚಳವಳಿಗಳನ್ನು ಇನ್ನಷ್ಟೂ ಪರಿಣಾಮಕಾರಿಯಾಗಿ ಮುಂದುವರೆಸಲಿದೆ. ಊಳಿಗಮಾನ್ಯ ದರ್ಪದ ಅಂತ್ಯ ಸನಿಹದಲ್ಲಿದೆ” ಎಂದು ಬೆಂಗಳೂರಿನ ಸಮಾನ ಮನಸ್ಕರು ಆಕ್ರೋಶ ಹೊರಹಾಕಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...