ಧರ್ಮಸ್ಥಳ | ಸುಳ್ಳು ಹೇಳಿ ಸಿಕ್ಕಿಬಿದ್ದ ‘ಸುವರ್ಣ ನ್ಯೂಸ್‌’ ವರದಿಗಾರರು

Date:

ಧರ್ಮಸ್ಥಳದಲ್ಲಿ ವರದಿ ಮಾಡುವಾಗ ತಮ್ಮ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್‌ ಮಟ್ಟಣ್ಣನವರ್‌ ಹಲ್ಲೆ ಮಾಡಿದ್ದಾರೆ ಎಂದು ಸುವರ್ಣನ್ಯೂಸ್‌ನ ವರದಿಗಾರ ಮತ್ತು ಕ್ಯಾಮೆರಾಮನ್ ಮಾಡಿದ್ದ ಆರೋಪ ಸುಳ್ಳು ಎಂಬುದು ಒಂದೇ ದಿನದಲ್ಲಿ ಬಟಾಬಯಲಾಗಿದೆ. ವರದಿಗಾರ ಮತ್ತು ಕ್ಯಾಮೆರಾಮನ್ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ. ಅವರಿಗೆ ಯಾವುದೇ ಪೆಟ್ಟು ಬಿದ್ದಿಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದಾರೆ. ಉದ್ದೇಶಪೂರ್ವಕವಾಗಿಯೇ ತಿಮರೋಡಿ ಮತ್ತು ಗಿರೀಶ್‌ ವಿರುದ್ಧ ಸುವರ್ಣನ್ಯೂಸ್‌ ಸುಳ್ಳು ಆರೋಪ ಮಾಡಿದೆ ಎಂಬುದು ಸಾಬೀತಾಗಿದೆ.

ಬುಧವಾರ, ಧರ್ಮಸ್ಥಳದಲ್ಲಿ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಧರ್ಮಸ್ಥಳದಲ್ಲಿ ಸ್ಥಳೀಯ ಗೂಂಡಾಗಳು ಹಲ್ಲೆ ನಡೆಸಿದ್ದರು. ಹಲ್ಲೆಗೊಳಗಾದ ಯೂಟ್ಯೂಬರ್‌ಗಳನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಲು ತಿಮರೋಡಿ ಮತ್ತು ಗಿರೀಶ್‌ ತೆರಳಿದ್ದರು. ಈ ವೇಳೆ, ತಮಗೆ ಬೈಟ್‌ ನೀಡುವಂತೆ ಸುವರ್ಣನ್ಯೂಸ್‌ನ ವರದಿಗಾರ ಮತ್ತು ಕ್ಯಾಮೆರಾಮನ್‌ಗಳಾದ ಹರೀಶ್‌ ಮತ್ತು ನವೀನ್‌ ಪುಜಾರಿ ಒತ್ತಾಯಿಸಿದ್ದರು. ಆದರೆ, ಬೈಟ್ ನೀಡಲು ತಿಮರೋಡಿ ಮತ್ತು ಗಿರೀಶ್‌ ನಿರಾಕರಿಸಿದ್ದರು. ಆ ಕಾರಣಕ್ಕೆ ಹರೀಶ್‌ ಮತ್ತು ನವೀನ್‌ –ಇಬ್ಬರೂ ದಾಂಧಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

ಆದಾಗ್ಯೂ, ತಮ್ಮ ಮೇಲೆ ತಿಮರೋಡಿ ಮತ್ತು ಗಿರೀಶ್‌ ಹಲ್ಲೆ ನಡೆಸಿದ್ದಾರೆ ಎಂದು ಸುವರ್ಣನ್ಯೂಸ್‌ನ ಹರೀಶ್ ಮತ್ತು ನವೀನ್ ಆರೋಪಿಸಿದ್ದರು. ಪೊಲೀಸ್‌ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು, ಸುವರ್ಣನ್ಯೂಸ್‌ ಕೂಡ ‘ತಮ್ಮ ಸಿಬ್ಬಂದಿಗಳ ಮೇಲೆ ತಿಮರೋಡಿಯಿಂದ ಹಲ್ಲೆ’ ಎಂದು ಸುಳ್ಳು ಸುದ್ದಿ ಪ್ರಕಟಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸುವರ್ಣನ್ಯೂಸ್‌ನ ಹರೀಶ್ ಮತ್ತು ನವೀನ್‌ಗೆ ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ. ಇಬ್ಬರನ್ನೂ ಪರೀಕ್ಷಿಸಿದ ‘ಬೆನಕ ಹೆಲ್ತ್‌ ಸೆಂಟರ್‌’ನ ವೈದ್ಯ ಮುರುಗನ್ ಅವರು ಈ ಇಬ್ಬರ ಮೇಲೂ ಯಾವುದೇ ಹಲ್ಲೆ ನಡೆದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

WhatsApp Image 2025 08 07 at 2.18.00 PM

ವೈದ್ಯಕೀಯ ಪರೀಕ್ಷೆಯ ವರದಿ ನೀಡಿರುವ ವೈದ್ಯ ಮುರುಗನ್, “ಪೊಲೀಸ್ ಇನ್ಸ್‌ಪೆಕ್ಟರ್‌ ಸಮ್ಮುಖದಲ್ಲಿ ಹರೀಶ್‌ ಮತ್ತು ನವೀನ್ ಪುಜಾರಿಯನ್ನು ಪರೀಕ್ಷಿಸಲಾಗಿದೆ. ಅವರ ದೇಹದ ಮೇಲೆ ಯಾವುದೇ ಗಾಯದ ಅಥವಾ ಪೆಟ್ಟು ಬಿದ್ದಿರುವ ಗುರುತುಗಳು ಪತ್ತೆಯಾಗಿಲ್ಲ” ಎಂದು ದೃಢಪಡಿಸಿದ್ದಾರೆ.

WhatsApp Image 2025 08 07 at 2.18.01 PM

ಅಲ್ಲದೆ, ಹಲ್ಲೆಗೊಳಗಾಗಿದ್ದೇನೆಂದು ಹೇಳಿಕೊಂಡಿದ್ದ ಹರೀಶ್‌ನ ವಿಡಿಯೋ ತುಣುಕೊಂದು ಸಾಮಾಜಿಕ ತಾಲತಾಣದಲ್ಲಿ ವೈರಲ್ ಆಗಿದೆ. ಅದರಲ್ಲಿ; ವ್ಯಕ್ತಿಯೊಬ್ಬರು ನಿನ್ನ ಮೇಲೆ ಹಲ್ಲೆ ನಡೆದಿದೆಯೇ ಎಂದು ಪ್ರಶ್ನಿಸಿದ್ದಾರೆ. ಉತ್ತರಿಸಿದ ಹರೀಶ್, “ಹಲ್ಲೆಗೆ ಯತ್ನಿಸಿದರು. ಅಷ್ಟರಲ್ಲಿ, ಎಲ್ಲರೂ ನಮ್ಮನ್ನು ರಕ್ಷಿಸಿದರು. ನಾವು ಸೇಫ್‌ ಆಗಿದ್ದೇವೆ” ಎಂದು ಹೇಳಿದ್ದಾರೆ. ಮತ್ತೆ ಹಲ್ಲೆಯ ಆರೋಪ ಯಾಕೆ ಮಾಡಿದ್ದೀರಿ ಎಂಬ ಪ್ರಶ್ನೆಗೆ ಹರೀಶ್ ಹಾರಿಕೆಯ ಉತ್ತರ ನೀಡಿದ್ದಾರೆ.

ಇದೀಗ, ಸುಳ್ಳು ಆರೋಪ ಮತ್ತು ಸುಳ್ಳು ವರದಿ ಪ್ರಸಾರ ಮಾಡಿದ ಸುವರ್ಣನ್ಯೂಸ್‌ನ ಪ್ರಧಾನ ಸಂಪಾದಕ ಅಜಿತ್ ಹನುಮಕ್ಕನವರ್, ಹರೀಶ್ ಮತ್ತು ನವೀನ್ ಪುಜಾರಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...