ಧಾರವಾಡ | ಕಾನೂನುಗಳು, ಸಾಮಾಜಿಕ ವ್ಯವಸ್ಥೆಯ ಪೋಷಕರಿಗೆ ಗೌರವ ಕೊಡಿ: ನ್ಯಾ. ಶಾಂತಿ

Date:

ಭವಿಷ್ಯದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಕಲ್ಪಸಿಕೊಂಡು ಭಯಪಡುತ್ತಿದ್ದ ಪಾಲಕರಿಗೆ, ಪೋಷಕರಿಗೆ ಇಂದಿನ ಕಾಯ್ದೆ, ಕಾನೂನುಗಳು ಮತ್ತು ಸಾಮಾಜಿಕ ವ್ಯವಸ್ಥೆಯು ಧೈರ್ಯ, ಸ್ಥೈರ್ಯ, ಗೌರವ ನೀಡಿದೆ. ಹೆಣ್ಣು ಜನಿಸಿದರೆ ಹೆಮ್ಮೆಪಡುವ ಕಾಲ ಬಂದಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ. ಶಾಂತಿ ಅವರು ಹೇಳಿದರು.

ಧಾರವಾಡ ನಗರದ ಆಲೂರು ವೇಂಕಟರಾವ್ ಸಾಂಸ್ಕೃತಿಕ ಸಮುಚ್ಛಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ  ಹಾಗೂ ಮಹಿಳಾ ಮತ್ತು  ಮಕ್ಕಳ ಅಭಿವೃದ್ದಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೋ- ಬೇಟಿ ಪಡಾವೋ ಜಾಗೃತಿ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

ಕುಟುಂಬಕ್ಕಾಗಿ ಸರ್ವವನ್ನು ಸಮರ್ಪಿಸುವ ಹೆಣ್ಣು ತನ್ನ ಆರೋಗ್ಯದ ಬಗ್ಗೆಯೂ ಕಾಳಜಿ, ಎಚ್ಚರಿಕೆ ವಹಿಸುವ ಅಗತ್ಯವಿದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಮತ್ತು ವಿಶ್ರಾಂತಿ ರಹಿತ ಜೀವನಶೈಲಿಯಿಂದ ಅನೇಕ ರೀತಿಯ ರೋಗರುಜಿನಗಳು ಹೆಣ್ಣುಮಕ್ಕಳನ್ನು ಬಾಧಿಸುತ್ತಿವೆ. ಸರಿಯಾದ ಸಮಯಕ್ಕೆ ಅಗತ್ಯಚಿಕಿತ್ಸೆ ಲಭಿಸದೆ ಅನೇಕ ಮಧ್ಯವಯಸ್ಕ ಮಹಿಳೆಯರು ಕ್ಯಾನ್ಸರ್, ಹೃದಯಾಘಾತ, ರಕ್ತಹೀನತೆ, ರಕ್ತದೊತ್ತಡ, ಮಧುಮೇಹದಂತ ವಿವಿಧ ರೀತಿಯ ರೋಗಗಳಿಗೆ ಬಲಿಯಾಗುತ್ತಿದ್ದಾರೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧನಾತ್ಮಕ ಚಿಂತನೆ ಮತ್ತು ಸಂಗೀತ, ಸಾಹಿತ್ಯ ಆಸ್ವಾದನೆ, ಕಥೆ-ಕಾದಂಬರಿ ಓದು, ಮನರಂಜನೆ ಆಟಗಳು ಮಹಿಳಿಯರನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಗಟ್ಟಿಗೊಳಿಸುತ್ತವೆ ಎಂದು  ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ತಿಳಿಸಿದರು.

ಯಾವುದೇ ಒಂದು ಸಣ್ಣದಾದ ಗಿಡವನ್ನು ನೆಟ್ಟು ಅದಕ್ಕೆ ಸರಿಯಾಗಿ ನೀರು ಗೊಬ್ಬರವನ್ನು ಹಾಕಿದಾಗ ಮಾತ್ರ ಅದು ಬೆಳೆದು ಗಾಳಿ ನೆರಳು ನೀಡಲು ಸಹಾಯಕವಾಗಿದೆ ಹಾಗೇ ಮಹಿಳೆಯರಿಗೂ ಕೆಲವೊಂದು ಸೌಲಭ್ಯಗಳು ಇವೆ ಅವುಗಳನ್ನು  ಮಹಿಳೆಯರಿಗೆ ತಲುಪುವಂತೆ ಮಾಡಬೇಕು ಅದಕ್ಕೆ ತಕ್ಕದಾದ ವಾತಾವರಣವನ್ನು ನಿರ್ವಹಿಸಿ ಕೊಡುವುದು ಎಲ್ಲ ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.

ಭೇಟಿ ಬಚಾವೋ ಭೇಟಿ ಪಡಾವೋ ಜಾಗೃತಿಯ ಕಾರ್ಯಕ್ರಮವನ್ನು ಪ್ರತಿಯೊಂದು ಜಿಲ್ಲೆ ಮತ್ತು ರಾಷ್ಟ್ರಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ. ಇದರಿಂದ ಹೆಣ್ಣು ಮಕ್ಕಳ ತಾಯಂದಿರಿಗೆ ಮಾನಸಿಕ ಸಾಮರ್ಥ್ಯ, ಧೈರ್ಯ ತುಂಬಿಸುವಂತಹ ಒಂದು ಹಣಕಾಸಿನ ಯೋಜನೆಯಾಗಿ ಸುಕನ್ಯಾ ಸಮೃದ್ಧಿ ಬಂದು ನಿಂತೆದೆ. ಪ್ರತಿಯೊಬ್ಬರು ಇಂತಹ ಸರಕಾರಿ ಯೋಜನೆಗಳನ್ಬು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಆರ್ಥಿಕ ಸಭಲತೆ, ಸ್ವಾವಲಂಭತೆ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದರು.

ಮಹಿಳೆಯರ ಸುರಕ್ಷತೆ, ಸುಭದ್ರತೆಗೆ ಬರೀ ಕಾನೂನುಗಳು ಬಂದರೆ ಸಾಲದು. ಅದರ ಸದುಪಯೋಗವನ್ನು ಹೆಣ್ಣುಮಕ್ಕಳು ಪಡೆದುಕೊಳ್ಳುವಂತ ಸಾಮಾಜಿಕ ವಾತಾವರಣ ನಿರ್ಮಾಣವಾಗಬೇಜು. ಹೆಣ್ಣು ಮಕ್ಕಳಿಗೆ ಅವರು ಸ್ವಯಂ ಉದ್ಯೋಗಿಗಳಾಗಲು, ಸ್ವಾಲಂಭಿಗಳಾಗಲು  ಬೆಂಬಲಿಸಿಬೇಕೆಂದು ಅವರು ಹೇಳಿದರು.

ನಮ್ಮ ಸಾಧನೆಯ ಹಾದಿಯಲ್ಲಿ ಕಲ್ಲಿರಲಿ, ಮುಳ್ಳಿರಲಿ  ಹಿಮ್ಮೆಟ್ಟದೆ, ಮುಂದೆ ಸಾಗಿ ಗುರಿ ಮುಟ್ಟಬೇಕು. ಹಾಗೆ ದ್ವೇಷವನ್ನು ಬೆಳೆಸಿಕೊಂಡು ಬದುಕುವಷ್ಟು ಜೀವನ ದೊಡ್ಡದಿಲ್ಲ; ಕೇಡು ಬಯಸಿದವರಿಗೆ ಕ್ಷಮೆ ನೀಡಿ ಮುಂದೆ ಸಾಗಬೇಕೆಂದು ಅವರು ನುಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್.ದೊಡ್ಡಮನಿ ಮಾತನಾಡಿ, ಮೊದಲು ಮಹಿಳೆಯರಿಗೆ ಉದ್ಯೋಗ ಸೇರಿ ವಿಶೇಷ ವಲಯಗಳಲ್ಲಿ ಯಾವುದೇ ರೀತಿ ಅವಕಾಶವಿರಲಿಲ್ಲ. ಅವರ ಸಾಮರ್ಥ್ಯ ಶಕ್ತಿ ಎಷ್ಟು ಅಂತ ಗೊತ್ತಿರಲಿಲ್ಲ. ಸ್ವಾತಂತ್ರ್ಯದ ನಂತರದಲ್ಲಿ ಸಂವಿಧಾನದ ಮೂಲಕವಾಗಿ ಲಿಂಗತಾರತಮ್ಯವಿಲ್ಲದೆ, ಎಲ್ಲರಿಗೂ ಸಮಾನವಾದ ಅವಕಾಶಗಳು ಲಭಿಸಿವೆ ಎಂದರು.

ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ವ್ಯಾಜ್ಯಗಳು ಹೆಚ್ಚಾಗುತ್ತಿವೆ. ಇದರ ಪರಿಣಾಮವಾಗಿ ಮಕ್ಕಳು  ತಂದೆ-ತಾಯಿಯರ ಪ್ರೀತಿಯಿಂದ ವಂಚಿತರಾಗುತ್ತಿದ್ದಾರೆ. ಮಕ್ಕಳಲ್ಲಿ, ಕುಟುಂಬ ಸದಸ್ಯರಲ್ಲಿ, ಪ್ರತಿಯೊಬ್ಬರನ್ನು ಪ್ರೀತಿಯಿಂದ ಕಾಣುವ ಗುಣವನ್ನು ಮತ್ತು ಒಳ್ಳೆಯ ಸಂಬಂಧಗಳ ಜೊತೆ ಮಾನವೀಯ  ಮೌಲ್ಯಗಳನ್ನು ಬೆಳೆಸಬೇಕೆಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ  ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ, ಕರ್ನಾಟಕ ಬಾಲವಿಕಾಸ ಅಕಾಡಮಿ ಯೋಜನಾ ನಿರ್ದೇಶಕಿ ಭಾರತಿ ಶೆಟ್ಟರ ಮಾತನಾಡಿದರು.

ಡಿಮಾನ್ಸ್ ಸಂಸ್ಥೆಯ ಮನೋವೈಧ್ಯಕೀಯ ಸಮಾಜಕಾರ್ಯವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಡಿ.ಜೆ. ಅನಂತರಾಮ ಅವರು ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಅವರು ಸ್ವಾಗತಿಸಿದರು. ಕಾರ್ಯಕ್ರಮ ಅಧಿಕಾರಿ ಅನುಪಮಾ ಅಂಗಡಿ ವಂದಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದಗಧಿ ಇಲಾಖೆಯ ಮಹಿಳಾ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಇಲಾಖೆಗಳ ಮಹಿಳಾ ಅಧಿಕಾರಿ ಸಿಬ್ಬಂದಿಗಳು, ಸ್ವ ಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...