ಧಾರವಾಡ | ಅಂಜುಮನ್ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ

Date:

ಕನ್ನಡ ಸಾಹಿತ್ಯ ಪರಿಷತ್ತು 111ನೇ ಸಂಸ್ಥಾಪನ ದಿನಾಚರಣೆಯನ್ನು ಆಚರಿಸುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಸಮಾಜದ ಬೇರೆ ಬೇರೆ ರಂಗಗಳಲ್ಲಿರುವ ಸಾಹಿತಿಗಳನ್ನು ಗುರುತಿಸಿ ಅವರನ್ನು ಮುನ್ನಲೆಗೆ ತರುವ ಕೆಲಸ ಮಾಡಿದೆ‌ ಎಂದು ಕರ್ನಾಟಕ ವಿಶ್ವವಿದ್ಯಾಲಯ ಕುಲಸಚಿವ ಡಾ. ನಿಜಲಿಂಗಪ್ಪ ಮಟ್ಟಿಹಾಳ ಹೇಳಿದರು.

ಸಸಿಗೆ ನೀರೆರೆವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಎಲ್ಲಾ ಅಧ್ಯಕ್ಷರುಗಳು ತಮ್ಮ ಮಿತಿಯಲ್ಲಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಸಮೃದ್ಧಗೊಳಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಬಂಡಾಯ ಲೇಖಕ ಡಾ. ಚಂದ್ರಶೇಖರ್ ಪಾಟೀಲರು ಅಧಿಕಾರಶಾಹಿಯನ್ನು ಪ್ರತಿರೋಧಿಸಿ ಕನ್ನಡ ಸಾಹಿತ್ಯ ಪರಿಷತ್ತನ್ನು ಬೆಳೆಸಿದ ಮಾದರಿ ನಮ್ಮ ಮುಂದಿದೆ. ಇಂದಿನ ಯುವಜನರು ಇದನ್ನು ಮುಂದುವರೆಸಿಕೊಂಡು ಹೋಗಬೇಕಾದ ಅಗತ್ಯವಿದೆ ಎಂದರು.

IMG 20250506 WA0001

ಮುಖ್ಯ ಅತಿಥಿ ಪ್ರೊ .ಶ್ಯಾಮಸುಂದರ ಬಿದರಗುಂದಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಒಗ್ಗಟ್ಟು ಮತ್ತು ಅಸ್ಮಿತೆಯ ಸಂಕೇತವಾಗಿದೆ. ನಾವೆಲ್ಲ ಒಂದಾಗಿ ಬಾಳಲು ನಮಗೆ ಸಾಹಿತ್ಯದ ಜ್ಞಾನ ಅಗತ್ಯವಾಗಿದೆ. ಇಂತಹ ಜ್ಞಾನ ನೀಡುವ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಶ್ರಮಿಸುತ್ತಿದೆ. ಅಂತೆಯೇ ಧಾರವಾಡದಲ್ಲಿರುವ ವಿದ್ಯಾವರ್ಧಕ ಸಂಘವು ಕನ್ನಡ ನಾಡು ನುಡಿಯ ಪ್ರಸಾರಕ್ಕಾಗಿ ಕೆಲಸ ಮಾಡುತ್ತಿರುವುದನ್ನು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ. ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ತಲೆಮಾರಿನ ಯುವಕರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸತ್ವವನ್ನು ಪಡೆದುಕೊಂಡು ಅದರ ಬೆಳವಣಿಗೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗುತ್ತದೆ ಎಂದರು. ಸುನಂದಾ ನಿಂಬನಗೌಡರ ಹಾಗೂ ಸಂಗಡಿಗರು ಸಂಗೀತ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಡಾ. ಜಿನದತ್ತ ಹಡಗಲಿ ಸ್ವಾಗತಿಸಿದರು.‌ ಡಾ. ಮೇಟಿ ರುದ್ರೇಶ್ ನಿರೂಪಿಸಿದರು. ಕು. ಬಾನುಬಿ ವಂದಿಸಿದರು. ಈ ವೇಳೆ ಡಾ. ನಿಜಲಿಂಗಪ್ಪ ಮಟ್ಟಿಹಾಳ, ಡಾ.‌ ಶ್ಯಾಮಸುಂದರ ಬಿದರಕುಂದಿ ಹಾಗೂ ಸುನಂದಾ ನಿಂಬನಗೌಡರ ಅವರನ್ನು ಸನ್ಮಾನಿಸಿದರು.

ಇದನ್ನು ಓದಿದ್ದೀರಾ? ಧಾರವಾಡ | ಭಾರತೀಯರಿಗೆ ವರವಾಗಿ ದೊರೆತ ಸಂವಿಧಾನ ಪ್ರತಿಯೊಬ್ಬರ ಜೀವನಾಡಿ: ರಂಜಾನ ದರ್ಗಾ

ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಐ. ಎ. ಮುಲ್ಲಾ ಹಾಗೂ ಡಾ. ಎನ್. ಬಿ. ನಾಲತವಾಡ ಉಪಸ್ಥಿತರಿದ್ದರು. ಪತ್ರಿಕೋದ್ಯಮ ವಿಭಾಗದ ಪ್ರೊ ಡಾ. ಅಬ್ದುಲ್‌ಕರಮ ಆದೋನಿ ಕುರಾನ್ ಪಠಣ ಮಾಡಿದರು. ಶ್ವೇತಾ ವರಚಗಿ ಶ್ಲೋಕ ಪಠಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...