ಧಾರವಾಡ | ಥಿನ್ನರ್ ಬಾಟಲಿಗೆ ಬೆಂಕಿಬಿದ್ದು 4 ವರ್ಷದ ಬಾಲಕ ಸಾವು; ತಂದೆಯ ಸ್ಥಿತಿ ಚಿಂತಾಜನಕ

Date:

ಥಿನ್ನರ್ ಬಾಟಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ತಂದೆ ಮತ್ತು ಮಗ ಬೆಂಕಿಯಲ್ಲಿ ಸಿಲುಕಿಕೊಂಡು 4 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಧಾರವಾಡದ ಸಂತೋಷ ನಗರದಲ್ಲಿ ನಿನ್ನೆ (ಆ.15) ನಡೆದಿದೆ.

ಮೃತ ಬಾಲಕ ಅಗಸ್ತ್ಯ ಮಾಶ್ಯಾಳ್‌ನ ತಂದೆ ಚಂದ್ರಕಾಂತ್ ಅವರಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿದ್ದಾರೆ.

ಅಗಸ್ತ್ಯನ ತಾಯಿ ಬಾಣಂತಿ ಇರುವುದರಿಂದ ಬಿಸಿ ತಾಗಿಸಲು ಅಗ್ಗಿಷ್ಟಿಕೆಯನ್ನು ಬಳಸಲಾಗುತ್ತಿದ್ದು, ಅಗ್ಗಿಷ್ಟಿಕೆಗೆ ಬೆಂಕಿ ಹಚ್ಚಲು ಬಾಲಕನ ಅಜ್ಜಿ ಪ್ರಯತ್ನಿಸುತ್ತಿದ್ದರು. ನಿರಂತರ ಮಳೆಯಿಂದ ಅಗ್ಗಿಷ್ಟಿಕೆಯಲ್ಲಿದ್ದ ಕಟ್ಟಿಗೆ ಹಸಿಯಾಗಿ ಬೆಂಕಿ ಹತ್ತುತ್ತಿರಲಿಲ್ಲ. ಆಗ ಚಂದ್ರಕಾಂತ್, ಸ್ವಲ್ಪ ಥಿನ್ನರ್ ಹಾಕುವಂತೆ ಹೇಳಿದ್ದಾರೆ. ಥಿನ್ನರ್ ಹಾಕುತ್ತಿದ್ದಂತೆ ಬೆಂಕಿ ಜೋರಾಗಿ ಥಿನ್ನರ್ ಬಾಟಲ್​ಗೂ ಹೊತ್ತಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿಢೀರನೆ ಥಿನ್ನರ್ ಬಾಟಲ್ ಅನ್ನು ಹೊರಗೆ ಎಸೆಯಲು ಅಗಸ್ತ್ಯನ ಅಜ್ಜಿ ಪ್ರಯತ್ನಿಸಿದಾಗ, ಬಾಟಲ್​ ತಪ್ಪಿ, ಚಂದ್ರಕಾಂತ್ ಮತ್ತು ಅಗಸ್ತ್ಯ ಇದ್ದ ಕೋಣೆಯೊಳಗೆ ಹೋಗಿದೆ. ಏಕಾಏಕಿ ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡು ಚಂದ್ರಕಾಂತ್ ಮತ್ತು ಆಗಸ್ತ್ಯ ಕೋಣೆಯಲ್ಲೇ ಸಿಲುಕಿಕೊಂಡಿದ್ದಾರೆ. ಕೋಣೆಯಲ್ಲಿದ್ದ ಚಂದ್ರಕಾಂತ್ ಮತ್ತು ಅಗಸ್ತ್ಯನನ್ನು ರಕ್ಷಿಸಿ ಹೊರಗೆ ಕರೆದುಕೊಂಡು ಬರುವಷ್ಟರಲ್ಲಿ ಇಬ್ಬರಿಗೂ ಸಾಕಷ್ಟು ಸುಟ್ಟಗಾಯಗಳಾಗಿದ್ದವು. ಇಬ್ಬರನ್ನೂ ಕೂಡಲೇ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿದರೂ ಕೂಡ, ಬಾಲಕ ಅಗಸ್ತ್ಯ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಧಾರವಾಡ | ನಿಜ ಜೀವನದಲ್ಲಿ ʼತಲೆದಂಡʼ ನಾಟಕದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಿಸಿ ದಿವ್ಯ ಪ್ರಭು

ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...