ರಭಸವಾಗಿ ಬಂದ ಕಾರೊಂದು ಚಕ್ಕಡಿ ಬಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಜೋಡಿ ಎತ್ತುಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಹೊಲದ ಕೆಲಸ ಮುಗಿಸಿ ವಾಪಸ್ಸು ಮನೆಕಡೆಗೆ ಬರುತ್ತಿದ್ದ ಚಕ್ಕಡಿಗೆ ಲಕ್ಷ್ಮೇಶ್ವರ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಎರಡೂ ಎತ್ತುಗಳು ಸಾವಿಗೀಡಾಗಿವೆ. ಚಕ್ಕಡಿಯಲ್ಲಿದ್ದ ದೊಡ್ಡರಾಜೇಸಾಹೇಬ ಮತ್ತು ಅವರ ಮಗನಿಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಸಂಶಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಅಲ್ಲಿಂದ ಆಂಬುಲೆನ್ಸ್’ನಲ್ಲಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ ಧಾರವಾಡ | ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ; ಚಾಕು ಇರಿದು ಹಲ್ಲೆ
ಗಾಯಗೊಂಡಿರುವ ದೊಡ್ಡರಾಜೇಸಾಹೇಬ ಮತ್ತ ಅವರ ಮಗ ಸಂಶಿ ಗ್ರಾಮದ ನಿವಾಸಿಗಳಾಗಿದ್ದು, ಹೊಲದ ದಾರಿಯಿಂದ ಚಕ್ಕಡಿ ಹೊಡೆದುಕೊಂಡು ಲಕ್ಷ್ಮೇಶ್ವರ-ಹುಬ್ಬಳ್ಳಿ ಬೈಪಾಸ್ ರಸ್ತೆಗೆ ಪ್ರವೇಶ ಮಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.





