ಧಾರವಾಡ | ಅಕ್ರಮ ಸ್ಪಿರೀಟ್ ಪತ್ತೆಯಾದ ಪ್ರಕರಣ; 51 ಕೆ.ಜಿ ಗಾಂಜಾ ಪೊಲೀಸ್ ವಶಕ್ಕೆ

Date:

ಅಕ್ರಮ ಸ್ಪಿರೀಟ್ ಪತ್ತೆಯಾದ ಪ್ರಕರಣದ ಆರೋಪಿಗಳ ಪತ್ತೆಗೆ ಜಾಲ ಬೀಸಿದಾಗ, ಆರೋಪಿತರ ಬಳಿ ಇದ್ದ ಅಂದಾಜು 51 ಕೆ.ಜಿ ಗಾಂಜಾವನ್ನು ಧಾರವಾಡ ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ನವೆಂಬರ 24, ರಂದು ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ತೇಗೂರ ಗ್ರಾಮದ ಭಾರತ ಪ್ಯಾಲೇಸ್ ಹೋಟೆಲ್ ಹತ್ತಿರ ಅಕ್ರಮವಾಗಿ 35 ಲೀಟರ್ ಸ್ಟೀರಿಟ್ ತುಂಬಿದ 844 ಕ್ಯಾನಗಳನ್ನು ವಶಕ್ಕೆ ಪಡೆದುಕೊಂಡು ಅಬಕಾರಿ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾರ್ಗದರ್ಶನದಲ್ಲಿ ತನಿಖೆ ಹಾಗೂ ಪರಾರಿಯಾಗಿದ್ದ ಆರೋಪಿತರ ಪತ್ತೆ ಕಾರ್ಯ ಕೈಗೊಂಡಾಗ ಒಟ್ಟು 51 ಕೆಜಿ 460 ಗ್ರಾಂ ಒಣಗಿದ ಮಾದಕ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದಲ್ಲಿನ ಪರಾರಿ ಆರೋಪಿತರ ಪತ್ತೆ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ ಆರ್ಯ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಾನಂದ ಕಟಗಿ, ಪೊಲೀಸ್ ಉಪ ಅಧೀಕ್ಷಕ ವಿನೋದ ಮುಕ್ತದಾರ ಮಾರ್ಗದರ್ಶನದಲ್ಲಿ ಗರಗ ಠಾಣೆಯ ಶಿವಯೋಗಿ ಲೋಹಾರ, ಪಿಎಸ್‌ಐ ಸಿದ್ರಾಮಪ್ಪ ಉನ್ನದ ನೇತೃತ್ವದಲ್ಲಿ ಪರಾರಿ ಆರೋಪಿತರು ತಮ್ಮ ವಾಸಸ್ಥಳದಲ್ಲಿ ಅಕ್ರಮವಾಗಿ ಸ್ಪಿರಿಟ ಹಾಗೂ ಇನ್ನಿತರೇ ನಿಷೇಧಿತ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಂಡಿರಬಹುದು ಎಂದು ಮಾಹಿತಿ ಬರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ನ್ಯಾಯಾಲಯದಿಂದ ಸರ್ಚ ವಾರಂಟನ್ನು ಪಡೆದುಕೊಂಡು ಡಿಸೇಂಬರ್ 05ರಂದು ಬೆಂಗಳೂರ ನಗರ ಜಿಲ್ಲೆ, ಆನೆಕಲ್ ತಾಲೂಕಿನ ಸೂರ್ಯನಗರದಲ್ಲಿರುವ ಕೆಹೆಚ್‌ಬಿ ನಿವೇಶನ 300 ನೇದ್ದರಲ್ಲಿ ಆರೋಪಿಗಳು ವಾಸವಿರುವ ಬಾಡಿಗೆ ಮನೆಗೆ ಹೋಗಿ ಇಬ್ಬರು ಆರೋಪಿತರನ್ನು ವಶಕ್ಕೆ ಪಡೆದು ಅವರಿಂದ ಒಟ್ಟು 51 ಕೆಜಿ 460ಗ್ರಾಂ ಒಣಗಿದ ಮಾದಕ ಗಾಂಜಾವನ್ನು 12,86,500/- ಗಾಂಜಾ ತೂಕ ಮಾಡುವ ಒಂದು ಡಿಜಿಟಲ್ ಮಶೀನ್ ಹಾಗೂ 3 ಮೋಬೈಲ್‌ಗಳನ್ನು ವಶಪಡಿಸಿಕೊಂಡು ಸ್ಥಳದಲ್ಲಿ ಪಂಚನಾಮೆ ಕೈಕೊಂಡು ವಶಪಡಿಸಿಕೊಂಡ ಮುದ್ದೆ ಮಾಲಗಳನ್ನು ಪ್ರಕರಣಕ್ಕೆ ಅಳವಡಿಸಿಕೊಂಡಿದ್ದಾರೆ. ಆರೋಪಿತರನ್ನು ಬೆಂಗಳೂರಿನಿಂದ ಕರೆತಂದು ದಸ್ತಗೀರ ನಿಯಮಗಳನ್ನು ಪಾಲನೆ ಮಾಡಿ ಡಿ. 06 ರಂದು ಇಬ್ಬರು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ ಹುಬ್ಬಳ್ಳಿ | ತಾಯಿಯ ಮನಸ್ಸು ಎಷ್ಟೇ ಸುಟ್ಟರೂ ಮಕ್ಕಳ ಆನಂದದಲ್ಲಿರುತ್ತಾಳೆ: ಡಾ. ಸುಪ್ರೀಯಾ ಮಲಶೆಟ್ಟಿ

ಈ ಪ್ರಕರಣದಲ್ಲಿನ ಪರಾರಿ ಆರೋಪಿತರನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಪಿಎಸ್‌ಐ ಎಸ್.ಪಿ ಉನ್ನದ, ಪಿಎಸ್‌ಐ ಬಸವರಾಜ ಯದ್ದಲಗುಡ್ಡ ಹಾಗೂ ಸಿಬ್ಬಂದಿ ಯು.ಆರ್.ಸಂಪಗಾಂವಿ, ವಿಜಯ ಉಪ್ಪಿನ, ಆರ್.ಕೆ.ಕೊಪ್ಪದ, ಪಿ.ಎಸ್.ಟಕ್ಕಳಕಿ, ಪ್ರಸಾದ ಬಡಿಗೇರ, ಸೋಮು ರಾಠೋಡ, ಧಾರವಾಡ ಜಿಲ್ಲಾ ಸಿಡಿಆರ್ ವಿಭಾಗದ ಸಿಬ್ಬಂದಿ ವಿಠಲ ಡಂಗನವರ, ಪಿಸಿ ರವೀಂದ್ರ ಪಟೇದ್ ಅವರುಗಳನ್ನು ಒಳಗೊಂಡ ತಂಡ ಪ್ರಮುಖ ಪಾತ್ರ ವಹಿಸಿದ್ದರು. ಆರೋಪಿತರ ಮತ್ತು ಗಾಂಜಾ ವಶ ಪಡಿಸಿಕೊಂಡ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಪ್ರಸಂಶೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...