ಧಾರವಾಡ | ನೊಗಕ್ಕೆ ಹೆಗಲು ಕೊಟ್ಟು ಎಡೆ ಹೊಡೆದ ರೈತ

Date:

ಬಾಡಿಗೆಗೆ ಎತ್ತುಗಳು ಸಿಗದ ಕಾರಣ ಕುಟುಂಬಸ್ಥರೇ ನೊಗಕ್ಕೆ ಹೆಗಲು ಕೊಟ್ಟು ಎಡೆ ಹೊಡೆಯುವ ದೃಶ್ಯ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದಲ್ಲಿ ಕಂಡುಬಂದಿತು.

ಗ್ರಾಮದ ರೈತ ಸುರೇಶ ಗೌಡ ತನ್ನ ನೊಗಕ್ಕೆ ಹೆಗಲು ಕೊಟ್ಟು ಸೋಯಾಬಿನ್, ಶೇಂಗಾ ಬೆಳೆಗಳ ಮಧ್ಯೆ ಬೆಳೆದಿದ್ದ ಕಳೆ ತೆಗೆಯುವ ಕಾರ್ಯ ಮಾಡಿದ್ದಾರೆ. ರೈತ ಸುರೇಶ್ ಮತ್ತು ಅವರ ಮಗ ನೊಗ ಹಿಡಿದು ನೇಗಿಲನ್ನು ಎಳೆದರೆ, ಸರೇಶ್ ಅವರ ಪತ್ನಿ ನೇಗಿಲು ಹಿಡಿದು, ಉಳುಮೆ ಮಾಡಿದ್ದಾರೆ. ದಿನಕ್ಕೆ ಎಕರೆ ಜಮೀನಿನಲ್ಲಿ ಎಡೆ ಹೊಡೆಯುವ ಮೂಲಕ ಕಳೆ ಕೀಳುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

“ಬಡ ರೈತರಿಗೆ ಎತ್ತು ಕೊಳ್ಳಲು ಶಕ್ತಿ ಇರುವುದಿಲ್ಲ. ಬಾಡಿಗೆಗೆ ಎತ್ತು ಸಿಗದ ಪರಿಣಾಮ ಬಿತ್ತನೆಗೂ ಪಡಿಪಾಟಲು ಪಡುವ ಸ್ಥಿತಿ ಉಂಟಾಗುತ್ತದೆ. ನಿರಂತರ ಮಳೆ ಸುರಿದ ಹಿನ್ನಲೆಯಲ್ಲಿ ಬೆಳೆ ಮಧ್ಯೆ ವೀಪರಿತ ಕಳೆ ಬೆಳೆದಿದೆ. ಬಾಡಿಗೆಗೆ ಎತ್ತುಗಳು ಸಿಗದ ಕಾರಣ, ನೊಗಕ್ಕೆ ಹೆಗಲು ಕೊಟ್ಟು ಉಳುಮೆ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...