ಧಾರವಾಡ | ನಾಳೆ ‘ನಮ್ಮ ಕರ್ನಾಟಕ ನಡೆದ 50 ಹೆಜ್ಜೆ-ಮುಂದಿನ ದಿಕ್ಕು’ ವಿಶೇಷ ಸಂಚಿಕೆ ಬಿಡುಗಡೆ

Date:

ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಾಗಿ 50 ವರ್ಷ ತುಂಬಿದ ನೆನಪಿನಲ್ಲಿ ಈದಿ‌ನ.ಕಾಮ್ ‘ನಮ್ಮ ಕರ್ನಾಟಕ ನಡೆದ 50 ಹೆಜ್ಜೆ-ಮುಂದಿನ ದಿಕ್ಕು’ ಎಂಬ ಶೀರ್ಷಿಕೆಯ ವಿಶೇಷ ಸಂಚಿಕೆಯನ್ನು ಡಿಸೆಂಬರ್ 29ರಂದು ಬಿಡುಗಡೆಗೊಳಿಸುತ್ತಿದ್ದು, ಆ ಹಿನ್ನೆಲೆಯಲ್ಲಿ ಈದಿನ ತಂಡದ ವತಿಯಿಂದ ಧಾರವಾಡದ ನಿವೃತ್ತ ನೌಕರರ ಭವನದಲ್ಲಿ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಲೇಖಕರು, ಸಾಹಿತಿಗಳು, ಸಾಮಾಜಿಕ, ರಾಜಕೀಯ ವಿಶ್ಲೇಶಕರನ್ನು ಒಳಗೊಂಡು ಸುಮಾರು 60 ಬರಹಗಾರರ ವಿವಿಧ ಲೇಖನಗಳನ್ನು ವಿಶೇಷ ಸಂಚಿಕೆ ಒಳಗೊಂಡಿದೆ. ಒಟ್ಟಾರೆಯಾಗಿ 50 ವರ್ಷಗಳಲ್ಲಿ ನಡೆದ ಏರು ಪೇರು, ಬೆಳವಣಿಗೆ, ದಲಿತರು, ಮಹಿಳೆಯರು, ಹೋರಾಟ ಇತ್ಯಾದಿ ಬರಹಗಳನ್ನು ಈ ವಿಶೇಷ ಸಂಚಿಕೆಯಲ್ಲಿ ಓದಬಹುದು.

ವಿಶೇಷ ಸಂಚಿಕೆಯನ್ನು ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕ ಡಾ. ಚಂದ್ರ ಪೂಜಾರಿ ಬಿಡುಗಡೆ ಮಾಡಲಿದ್ದು, ಈದಿನ ನ್ಯೂಸ್ ಆ್ಯಪ್ ಅನ್ನು ಕಳಸಾ ಬಂಡೂರಿ ರೈತ ಹೊರಾಟ ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ ಬಿಡುಗಡೆಗೊಳಿಸಲಿದ್ದಾರೆ. ಪ್ರಾಸ್ತಾವಿಕವಾಗಿ ಬಸವಥ್ವ ಪ್ರಚಾರಕ ಮಲ್ಲೇಸ್ ಹಳಕಟ್ಟಿ ಮಾತಾನಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ್ ಹಲಗತ್ತಿ ವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ? ಡಿ. 29: ರಾಜ್ಯದ ಹಲವೆಡೆ ಈ ದಿನ.ಕಾಮ್‌ನಿಂದ ‘ನಮ್ಮ ಕರ್ನಾಟಕ, ನಡೆದ 50 ಹೆಜ್ಜೆ-ಮುಂದಿನ ದಿಕ್ಕು’ ವಿಶೇಷ ಸಂಚಿಕೆ ಬಿಡುಗಡೆ

ಇನ್ನು ಮುಖ್ಯ ಅತಿಥಿಗಳಾಗಿ ಜಾನಪದ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ವೆಂಕನಗೌಡ ಪಾಟೀಲ್ ಮತ್ತು ಕವಿವಿ ಸಿಂಡಿಕೇಟ್ ಸದಸ್ಯ ಡಾ. ಬಸವರಾಜ ಗೊರವರ ಇರುವರು. ಮತ್ತು ವಿವಿಧ ಸಮಘಟನೆಗಳಿಂದ ಮುಸ್ತಾಕ್ ಹಾವೇರಿಪೇಟ್, ನಿಂಗಮ್ಮ ಸವಣೂರ, ರವಿ ಬಾಗೋಡಿ, ಎಮ್ ಕೆ ನದಾಫ್ ಇರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...