ಧಾರವಾಡ | ಸಾಧಕನಿಗೆ ಸಾಧಿಸುತ್ತೇನೆಂಬ ಛಲ, ಆತ್ಮವಿಶ್ವಾಸ ಇರಬೇಕು: ಕುಮಾರಿ. ಅದಿತಿ ಕ್ಷಾತ್ರತೇಜ

Date:

ಸಾಧಕನಿಗೆ ಸಾಧಿಸುತ್ತೇನೆಂಬ ಛಲ ಹಾಗೂ ಆತ್ಮವಿಶ್ವಾಸವಿದ್ದರೆ ಎಂತಹ  ಸಾಧನೆಯನ್ನಾದರೂ ಮಾಡಬಹುದು ಎಂದು ಅಂತಾರಾಷ್ಟ್ರೀಯ ಟೆಕ್ವಾಂಡೋ ಕ್ರೀಡಾ ಪ್ರತಿಭೆ ಹಾಗೂ ಪ್ರಧಾನಿಯವರ ಮನಕಿ ಬಾತ್ 100 ಸಂಚಿಕೆಯಲ್ಲಿ ಪಾಲೊಂಡ ಕು. ಅದಿತಿ ಪಿ. ಕ್ಷಾತ್ರತೇಜ ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ನನ್ನ ಈ ಸಾಧನೆಗೆ ಪ್ರೇರಕ ಶಕ್ತಿ ನನ್ನ ತಾಯಿ ಹಾಗೂ ನನ್ನ ತಂದೆ ನೀಡಿದ ಸಹಕಾರ. ಇಂದು ಪುರುಷರಿಗೆ ಸಿಗುವಷ್ಟು ಅವಕಾಶಗಳನ್ನು ಮಹಿಳೆಯರಿಗೂ ನೀಡಬೇಕು. ಮಹಿಳೆ ಪುರುಷ ಎಂಬ ತಾರತಮ್ಯ ಸಲ್ಲದು. ಸಾಧನೆ ಮಾಡಲು ಲಿಂಗ ತಾರತಮ್ಯ ಉಚಿತವಲ್ಲ. ನನ್ನ ತಾಯಿಯ ಅಪೇಕ್ಷೆಯಂತೆ ದೇಶದ  ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸುವ ಮಹಾದಾಸೆ ನನ್ನದು. ಮಹಿಳೆ ಎಂದೂ ಅಬಲೆಯಲ್ಲ. ಇಂದಿನ ಸಂಕೀರ್ಣ ಪರಿಸ್ಥಿತಿಯಲ್ಲಿ ತನ್ನನ್ನು ತಾನು ಸ್ವಯಂ ರಕ್ಷಿಸಿಕೊಳ್ಳುವ ಅಗತ್ಯವಿದೆ. ಮಹಿಳೆ ಅಂತಹ ರಕ್ಷಣಾ ತಂತ್ರ ಹೊಂದಬೇಕೆಂಬುದು ನನ್ನ ಬಯಕೆ ಕೂಡಾ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಷಾ ಗದ್ದಗಿಮಠ ಮಾತನಾಡಿ, ಕ.ವಿ.ವ. ಸಂಘವು ರಾಜ್ಯೋತ್ಸವ ಆಚರಣೆ ಒಂದೇ ದಿನಕ್ಕೆ ಸೀಮಿತಗೊಳಿಸದೇ ತಿಂಗಳ ಪೂರ್ತಿ ಆಯೋಜಿಸಿದ್ದು ಅಭಿನಂದನೀಯ. ಸಂಯೋಜನೆಯಲ್ಲಿ ಪದಾಧಿಕಾರಿಗಳ ಶ್ರಮ ಅಧಿಕವಾದುದು. ವೈವಿಧ್ಯಮಯ ಕಾರ್ಯಕ್ರಮದ ಜೊತೆ ಮಕ್ಕಳ ಚಿತ್ರಕಲಾ ಸ್ಪರ್ಧೆ ವಿಶೇಷ ಮೆರುಗು ತಂದಿದ್ದು ಅರ್ಥಪೂರ್ಣವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕುಮಾರ ಅವಿನಾಶ ನೀಲಗುಂದ ಏಕಪಾತ್ರಾಭಿನಯದ ಮೂಲಕ ಪ್ರೇಕ್ಷಕರನ್ನು ಪ್ರೇಕ್ಷಕರನ್ನು ರಂಜಿಸಿದರು. ಧಾರವಾಡದ ಬಾಲಬಳಗ ಶಾಲೆಯ ಮಕ್ಕಳು ಪರಿಸರ ಗೀತೆಗಳನ್ನು ಪ್ರಸ್ತುತ ಪಡಿಸಿದರು. ಮಕ್ಕಳ ದಿನಾಚರಣೆ ಅಂಗವಾಗಿ ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ 1 ರಿಂದ 10 ನೇ ತರಗತಿ ಮಕ್ಕಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು. ಭಾಗವಹಿಸಿದ ಎಲ್ಲರಿಗೂ ಪ್ರಮಾಣ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಧಾರವಾಡ | ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗದೇ ನಾಯಕತ್ವದ ಗುಣ ಬೆಳೆಸಿಕೊಳ್ಳಿ: ವೀರಣ್ಣ ಒಡ್ಡೀನ

ಡಾ. ಮಹೇಶ ಧ. ಹೊರಕೇರಿ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು.  ವೀರಣ್ಣ ಒಡ್ಡೀನ ನಿರ್ವಹಿಸಿದರು. ಶಂಕರ ಕುಂಬಿ ವಂದಿಸಿದರು. ಕಾರ್ಯಕ್ರಮದಲ್ಲಿ ಡಾ. ಸಂಜೀವ ಕುಲಕರ್ಣಿ, ಶಿವಾನಂದ ಭಾವಿಕಟ್ಟಿ, ಪ್ರೊ. ಬಿ.ಎಚ್. ಕೋಟಿಗೌಡ್ರ, ಎಂ.ಎA. ಚಿಕ್ಕಮಠ, ಶಂಕರ ಘಟ್ನಟ್ಟಿ, ಸಿ.ಎಸ್. ಪಾಟೀಲಕುಲಕರ್ಣಿ, ಡಾ. ಸದಾಶಿವ ಮರ್ಜಿ, ಕೆ.ಎಂ. ಅಂಗಡಿ ಸೇರಿದಂತೆ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...