ಧಾರವಾಡ | ರಂಜಾನ್ ಸಲಾಮಿ ಕೊಟ್ಟು ವಾಪಸ್ಸಾಗುವಾಗ ಬೈಕ್ ಅಪಘಾತದಲ್ಲಿ ಯುವಕ ಸಾವು

Date:

ಭಾವಿ ಪತ್ನಿಯ ಮನೆಗೆ ರಂಜಾನ್ ಸಲಾಮಿ ಕೊಟ್ಟು ಮರಳುವಾಗ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ಧಾರವಾಡದ ಕೆಲಗೇರಿ ಸೇತುವೆ ಬಳಿ ನಡೆದಿದೆ.

ತಾಲೂಕಿನ ಲಕಮಾಪುರ ನಿವಾಸಿ ಇಮಾಮಸಾಬ ಖಲೀಲಸಾಬ ಹೆಬ್ಬಳ್ಳಿ (21) ಮೃತಪಟ್ಟ ಯುವಕ. ಬೈಕ್‌ನಲ್ಲಿದ್ದ ಮತ್ತೊಬ್ಬ ಯುವಕ ಮೊಹ್ಮದಯೂನೂಸ್ ಮುಲ್ಲಾನವರ (17) ಗಾಯಗೊಂಡಿದ್ದಾನೆ. ಮೃತ ಇಮಾಮಸಾಬನಿಗೆ ಕಂಬಾರಗಣವಿ ಗ್ರಾಮದ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ಹಬ್ಬದ ಪ್ರಯುಕ್ತ ಹುಡುಗಿಯ ಮನೆಗೆ ಹೋಗಿ ಮರಳಿ ಬರುವಾಗ ಈ ಘಟನೆ ನಡೆದಿದೆ.

ಈ ಕುರಿತು ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...