ಧಾರವಾಡ | ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಆರೋಪ; ಸೂಕ್ತ ಕ್ರಮಕ್ಕೆ ಬಿಜೆಪಿ ಒತ್ತಾಯ

Date:

ಸರ್ಕಾರದ ಅಭಿವೃದ್ಧಿ ಕೆಲಸಗಳ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕೆಛೇರಿ ಎದುರು ಸರ್ಕಾರಿ ಕಛೇರಿ ಶುದ್ಧೀಕರಣವೆಂದು ಮುಲ್ಲಾ ಮೋಕ್ಷ ಹೋಮ ಪೂಜೆ ಮಾಡಿಸುವ ಮೂಲಕ ಸೂಕ್ತ ಕ್ರಮಕ್ಕೆ ಒತ್ತಾಯಿಸಿದರು.

ಈ ವೇಳೆ ಶಾಸಕ ಅರವಿಂದ್ ಬೆಲ್ಲದ ಮಾತನಾಡಿ, ಹುಬ್ಬಳ್ಳಿಯಲ್ಲಿ ನಡೆದ ಸರ್ಕಾರದ ಅಭಿವೃದ್ಧಿ ಕೆಲಸಗಳ ಭೂಮಿ ಪೂಜೆ ಕಾರ್ಯಕ್ರಮವನ್ನು ಕಾಂಗ್ರೆಸ್ ಸರಕಾರವು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಕಾರ್ಯಕ್ರಮದ ವೇದಿಕೆಯಲ್ಲಿ ಕುರಾನ್ ಪಠಣ ಮಾಡಿ, ಮುಸ್ಲಿಂ ಸಮುದಾಯದ ಓಲೈಕೆಗಾಗಿ ಅಧಿಕಾರ ದುರುಪಯೋಗ ಮಾಡಿದ ಹಾಗೂ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾದ ಜಿಲ್ಲಾ ಪಂಚಾಯತ ಸಿ.ಇ.ಓ, ಹಾಗೂ ಪಾಲಿಕೆ ಆಯುಕ್ತರು ಶಿಷ್ಟಾಚಾರ ಉಲ್ಲಂಘಿಸಿ ಕಾಂಗ್ರೆಸ್ ಏಜೆಂಟರಂತೆ ಕೆಲಸ ಮಾಡಿದ್ದಾರೆ. ಒಂದು ಸಮೂದಾಯಕ್ಕೆ ಸಿಮೀತವಾಗುವ ರೀತಿಯಲ್ಲಿ ರಾಜ್ಯ ಸರ್ಕಾರ ಆಡಳಿತ ನಡೆಸುತ್ತಿದ್ದನ್ನು ಬಿಜೆಪಿಯು ಸಹಿಸಲಾರದು ಎಂದರು.

ನಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸುವ ಮೂಲಕ ತಾವು ಈ ಘಟನೆಗೆ ಸಂಭಂದಿಸಿದ ಸರ್ಕಾರವಾಗಲಿ, ಈ ಕಾರ್ಯಕ್ರಮದಲ್ಲಿ ಭಾಗಿಯಾದ ಯಾರೆ ಅಧಿಕಾರಿ ಆಗಲಿ, ಜನಪ್ರತಿನಿಧಿಯಾಗಲಿ ಕೊಡಲೆ ಸೂಕ್ತ ಕ್ರಮ ಕೖಗೊಂಡು, ರಾಜ್ಯದ ಜನರಿಗೆ ನ್ಯಾಯ ಒದಗಿಸಲು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ಗುತ್ತಿಗೆದಾರ ಮೋಹನ್ ಚವ್ಹಾಣ್ ಅಪಹರಣ ಪ್ರಕರಣ; 10 ಜನರ ಬಂಧನ

ಈ ಸಂಧರ್ಭದಲ್ಲಿ ಮಾಜಿ ಶಾಸಕಿ ಸೀಮಾ ಮಸೂತಿ, ಜಿಲ್ಲಾದ್ಯಕ್ಷ ತಿಪ್ಪಣ ಮಜ್ಜಗಿ, ಇನ್ನಿತರರು ಉಪಸ್ಥಿತರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...