ಸರ್ಕಾರದ ಅಭಿವೃದ್ಧಿ ಕೆಲಸಗಳ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕೆಛೇರಿ ಎದುರು ಸರ್ಕಾರಿ ಕಛೇರಿ ಶುದ್ಧೀಕರಣವೆಂದು ಮುಲ್ಲಾ ಮೋಕ್ಷ ಹೋಮ ಪೂಜೆ ಮಾಡಿಸುವ ಮೂಲಕ ಸೂಕ್ತ ಕ್ರಮಕ್ಕೆ ಒತ್ತಾಯಿಸಿದರು.
ಈ ವೇಳೆ ಶಾಸಕ ಅರವಿಂದ್ ಬೆಲ್ಲದ ಮಾತನಾಡಿ, ಹುಬ್ಬಳ್ಳಿಯಲ್ಲಿ ನಡೆದ ಸರ್ಕಾರದ ಅಭಿವೃದ್ಧಿ ಕೆಲಸಗಳ ಭೂಮಿ ಪೂಜೆ ಕಾರ್ಯಕ್ರಮವನ್ನು ಕಾಂಗ್ರೆಸ್ ಸರಕಾರವು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಕಾರ್ಯಕ್ರಮದ ವೇದಿಕೆಯಲ್ಲಿ ಕುರಾನ್ ಪಠಣ ಮಾಡಿ, ಮುಸ್ಲಿಂ ಸಮುದಾಯದ ಓಲೈಕೆಗಾಗಿ ಅಧಿಕಾರ ದುರುಪಯೋಗ ಮಾಡಿದ ಹಾಗೂ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾದ ಜಿಲ್ಲಾ ಪಂಚಾಯತ ಸಿ.ಇ.ಓ, ಹಾಗೂ ಪಾಲಿಕೆ ಆಯುಕ್ತರು ಶಿಷ್ಟಾಚಾರ ಉಲ್ಲಂಘಿಸಿ ಕಾಂಗ್ರೆಸ್ ಏಜೆಂಟರಂತೆ ಕೆಲಸ ಮಾಡಿದ್ದಾರೆ. ಒಂದು ಸಮೂದಾಯಕ್ಕೆ ಸಿಮೀತವಾಗುವ ರೀತಿಯಲ್ಲಿ ರಾಜ್ಯ ಸರ್ಕಾರ ಆಡಳಿತ ನಡೆಸುತ್ತಿದ್ದನ್ನು ಬಿಜೆಪಿಯು ಸಹಿಸಲಾರದು ಎಂದರು.
ನಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸುವ ಮೂಲಕ ತಾವು ಈ ಘಟನೆಗೆ ಸಂಭಂದಿಸಿದ ಸರ್ಕಾರವಾಗಲಿ, ಈ ಕಾರ್ಯಕ್ರಮದಲ್ಲಿ ಭಾಗಿಯಾದ ಯಾರೆ ಅಧಿಕಾರಿ ಆಗಲಿ, ಜನಪ್ರತಿನಿಧಿಯಾಗಲಿ ಕೊಡಲೆ ಸೂಕ್ತ ಕ್ರಮ ಕೖಗೊಂಡು, ರಾಜ್ಯದ ಜನರಿಗೆ ನ್ಯಾಯ ಒದಗಿಸಲು ಒತ್ತಾಯಿಸಿದರು.
ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ಗುತ್ತಿಗೆದಾರ ಮೋಹನ್ ಚವ್ಹಾಣ್ ಅಪಹರಣ ಪ್ರಕರಣ; 10 ಜನರ ಬಂಧನ
ಈ ಸಂಧರ್ಭದಲ್ಲಿ ಮಾಜಿ ಶಾಸಕಿ ಸೀಮಾ ಮಸೂತಿ, ಜಿಲ್ಲಾದ್ಯಕ್ಷ ತಿಪ್ಪಣ ಮಜ್ಜಗಿ, ಇನ್ನಿತರರು ಉಪಸ್ಥಿತರಿದರು.





