ಧಾರವಾಡ | ಐದಾರು ವರ್ಷಗಳ ನಂತರ ಒದಗಿ ಬಂದಿತು ಹರಿಜನಕೇರಿಗೆ ವಿದ್ಯುತ್ ಕಂಬಗಳ ಭಾಗ್ಯ

Date:

ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಾವರಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅರಳಿಹೊಂಡ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಳೆಂಟು ಕುಟುಂಬಗಳು ಕಳೆದ ಐದಾರು ವರ್ಷಗಳಿಂದ ಉಳ್ಳವರ ದೌರ್ಜನ್ಯಕ್ಕೆ ಬಲಿಯಾಗಿ ಬಲಹೀನರಾಗಿ ಬದುಕುತ್ತಿದ್ದು, ಇದೀಗ ಹರಿಜನ‌ಕೇರಿಗೆ ಬರಬೇಕಿದ್ದ ವಿದ್ಯುತ್ ಕಂಬಗಳ ತಡೆಗೂ ಸ್ಥಳಿಯರು ಮುಂದಾಗಿದ್ದರು. ಆ ಹಿನ್ನಲೆಯಲ್ಲಿ ಮಾರ್ಚ್ 24ರಂದು ಗ್ರಾಮೀಣ ಅಭಿವೃದ್ಧಿ ಅಧಿಕಾರಿ, ಹೆಸ್ಕಾಂ ಅಧಿಕಾರಿ ಹಾಗೂ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಭೆಯನ್ನು ಕರೆಯಲಾಗಿತ್ತು.

ಸಭೆಯಲ್ಲಿ ಪರಿಶಿಷ್ಠ ಸಮುದಾಯದವರು ಮಾತನಾಡಿ, ತಮಗೆ ಉಳ್ಳವರಿಂದ ಆಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿದರು. ಸರ್ಕಾರಿ ಗಾಂವಠಾಣ ಜಾಗೆಯನ್ನು ಕ್ರಮೇಣ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ನಾವು ಧ್ವನಿಯೆತ್ತಲು ಹಣವಿದ್ದವರಲ್ಲ ಹಾಗೂ ಹೆಚ್ಚು ಜನಸಂಖ್ಯೆಯೂ ಇಲ್ಲ ತುಳಿತಕ್ಕೆ ಒಳಗಾದ ಸಮುದಾಯದವರು ನಾವು ಎಂದರು. ಇನ್ನು ವಿದ್ಯುತ್ ಕಂಬಗಳನ್ನು ಹಾಕಲು ತಕರಾರು ಮಾಡಿದ್ದ, ನಾಲ್ಕೈದು ಗೌಡರ ಮನೆತನದವರು ತಾವು ಜಾಗೆಯನ್ನು ದುಡ್ಡು ಕೊಟ್ಟು ಖರೀದಿ ಮಾಡಿಕೊಂಡಿದ್ದೇವೆ. ಇವರಿಗೇಕೆ ಪುಕ್ಕಟ್ಟೆಯಾಗಿ ಕೊಡಬೇಕು ಎಂದು ಮಾತಿನ ಚಕಮಕಿಗಳು ನಡೆದ ನಂತರ ಎಲ್ಲರೂ ಎಲ್ಲರೊಂದಿಗೆ ಸಹಕರಿಸಿರಿ ಎಂದು ಗ್ರಾಮೀಣ ಅಭಿವೃದ್ಧಿ ಅಧಿಕಾರಿಗಳು ತಿಳಿಹೇಳಿದಾಗ; ಎಸ್ ಸಿ ಓಣಿಯಲ್ಲಿ‌ ವಿದ್ಯುತ್ ಕಂಬಗಳನ್ನು ಹಾಕಲು ಅನುಮತಿಗೆ ಸಮ್ಮತಿ ನೀಡಿದರು.

ಈ ಸಂದರ್ಭದಲ್ಲಿ ಹೆಸ್ಕಾಂ ಮತ್ತು ಗ್ರಾಮ ಪಂಚಾಯತಿ ಸದಸ್ಯರುಗಳು, ಊರಿನ ಹಿರಿಯರು, ಯುವಕರು, ಮಹಿಳೆಯರು, ಸ್ಥಳಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...