ಧಾರವಾಡ | ಕೃಷಿ ಇಲಾಖೆಯಿಂದ ರೈತರಿಗೆ ಹಿಂಗಾರು ಬಿತ್ತನೆ ಬೀಜ ವಿತರಣೆ

Date:

2025-26 ನೇ ಸಾಲಿನಲ್ಲಿ, ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ವಿತರಿಸಲು ಒಟ್ಟು 14 ರೈತ ಸಂಪರ್ಕ ಕೇಂದ್ರಗಳು ಹಾಗೂ 13 ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 27 ಬೀಜ ವಿತರಣಾ ಕೇಂದ್ರಗಳನ್ನು ಗುರುತಿಸಲಾಗಿರುತ್ತದೆ ಎಂದು ಕೃಷಿ ಇಲಾಖೆಯಿಂದ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ವಿತರಿಸುವ ವಿವಿಧ ಬೀಜಗಳನ್ನು ರೈತರಿಗೆ ವಿತರಿಸಿದ ಕಾರ್ಮಿಕ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಮಾತನಾಡಿದರು.

ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು ಹಿಂಗಾರು ಬಿತ್ತನೆ ಪ್ರಾರಂಭವಾಗಿದೆ. ಕೃಷಿ ಇಲಾಖೆಯು ಹಿಂಗಾರು ಹಂಗಾಮಿಗೆ ಕಡಲೆ, ಗೋಧಿ, ಜೋಳ, ಮೆಕ್ಕೆಜೋಳ, ಶೇಂಗಾ ಹಾಗೂ ವಿವಿಧ ಬೆಳೆಗಳ ಬೀಜಗಳನ್ನು ರಿಯಾಯಿತಿ ದರದಲ್ಲಿ ರೈತರಿಗೆ ಮಾರಾಟ ಮಾಡಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಧಾರವಾಡ ಜಿಲ್ಲೆಯ ಬೀಜ ವಿತರಣಾ ಕೇಂದ್ರದ ವಿವರ:
ರೈತ ಸಂಪರ್ಕ ಕೇಂದ್ರಗಳಾದ ಧಾರವಾಡ ತಾಲೂಕಿನಲ್ಲಿ ಅಳ್ಳಾವರ, ಧಾರವಾಡ, ಅಮ್ಮಿನಭಾವಿ, ಹೆಚ್ಚುವರಿ ಬೀಜ ವಿತರಣಾ ಕೇಂದ್ರ ನರೇಂದ್ರ, ಹೆಬ್ಬಳ್ಳಿ, ಉ.ಬೆಟಗೇರಿ. ಕಲಘಟಗಿ ತಾಲೂಕಿನಲ್ಲಿ ಕಲಘಟಗಿ, ತಬಕದಹೊನ್ನಳ್ಳಿ, ದುಮ್ಮವಾಡ. ಹುಬ್ಬಳ್ಳಿ ತಾಲೂಕಿನಲ್ಲಿ ಚಬ್ಬಿ ಶಿರಗುಪ್ಪಿ, ಹುಬ್ಬಳ್ಳಿ. ಹೆಚ್ಚುವರಿ ಬೀಜ ವಿತರಣಾ ಕೇಂದ್ರ ನೂಲ್ವಿ, ಕುಸುಗಲ್ಲ, ಕೋಳಿವಾಡ, ಬಿಡನಾಳ. ಕುಂದಗೋಳ ತಾಲೂಕಿನಲ್ಲಿ ಕುಂದಗೋಳ, ಸಂಶಿ. ಹೆಚ್ಚುವರಿ ಬೀಜ ವಿತರಣಾ ಕೇಂದ್ರ ಯಲಿವಾಳ, ಶಿರೂರು, ನವಲಗುಂದ ತಾಲೂಕಿನಲ್ಲಿ ಅಣ್ಣಿಗೇರಿ, ಮೊರಬ್ಬ ಯರಗುಪಿ, ಹೆಚ್ಚುವರಿ ಬೀಜ ವಿತರಣಾ ಕೇಂದ್ರ ಶಲವಡಿ, ನವಲಗುಂದಗಳಲ್ಲಿ ರೈತರಿಗೆ ಬೀಜ ವಿತರಣೆ ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರು ಕಡಲೆ, ಗೋಧಿ, ಜೋಳ, ಮೆಕ್ಕೆಜೋಳ, ಶೇಂಗಾ ಹಾಗೂ ವಿವಿಧ ಬೆಳೆಗಳನ್ನು ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡುತ್ತಾರೆ. ಹಾಗಾಗಿ ಇಲಾಖೆ ವತಿಯಿಂದ ಸಹಾಯಧನದಡಿ ಬೀಜ ವಿತರಣೆ ಮಾಡಲು ಕಡಲೆ 28,799 ಕ್ವಿಂಟಲ್, ಗೋಧಿ 385 ಕ್ವಿಂಟಲ್, ಜೋಳ 300 ಕ್ವಿಂಟಲ್, ನೆಲಗಡಲೆ 276 ಕ್ವಿಂಟಲ್ ಹಾಗೂ ಇನ್ನಿತರೆ ಬೀಜಗಳನ್ನು ಒಳಗೊಂಡಂತೆ ಒಟ್ಟು 29,906 ಕ್ವಿಂಟಲ್ ಬಿತ್ತನೆ ಬೀಜ ವಿತರಣೆ ಗುರಿಯನ್ನು ಹೊಂದಲಾಗಿದೆ. ಈಗಾಗಲೇ ವಿವಿಧ ಇನ್ನಿತರೆ ಬೀಜ ಉತ್ಪಾದನಾ ಸಂಸ್ಥೆಗಳ ಬೀಜಗಳನ್ನು ಎಲ್ಲ ಬೀಜ ವಿತರಣಾ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದ್ದು ವಿತರಣೆ ಪ್ರಾರಂಭವಾಗಿದೆ ಎಂದು ಹೇಳಿದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಸ್ವಸಹಾಯ ಗುಂಪುಗಳ ಮಹಿಳೆಯರೇ ನಿರ್ವಹಿಸುವ ಅಕ್ಕ-ಕಫೆ ಉದ್ಘಾಟನೆ

ಈ ಸಂದರ್ಭಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ, ಪ್ರಭಾರ ಜಿಲ್ಲಾಧಿಕಾರಿ ಜಿ.ಪಂ.ಸಿಇಓ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕೃಷಿ ಇಲಾಖೆ ಜಂಟಿ ನಿದೇರ್ಶಕ ಮಂಜುನಾಥ ಅಂತರವಳ್ಳಿ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳು, ರೈತ ಮುಖಂಡರು, ರೈತರು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...