ಧಾರವಾಡ | ಜಾನುವಾರು ಹರಾಜು ಕರೆದ ಕೃಷಿ ವಿವಿ; ಬಜರಂಗದಳದ ವಿರೋಧ

Date:

ಧಾರವಾಡ ಕೃಷಿ ವಿಶ್ವವಿದ್ಯಾಲಯ ತನ್ನ ಹೈನುಗಾರಿಕಾ ಘಟಕದಲ್ಲಿ ಹೆಚ್ಚುವರಿಯಾಗಿರುವ 56 ಜಾನುವಾರುಗಳನ್ನು ಇದೇ ನವೆಂಬರ್ 6ರಂದು ಬಹಿರಂಗ ಹರಾಜಿನ ಮೂಲಕ ಮಾರಾಟ ಮಾಡಲು ಮುಂದಾಗಿದೆ. ಆದರೆ, ಈ ಹರಾಜು ಪ್ರಕ್ರಿಯೆಗೆ ಬಜರಂಗ ದಳ ವಿರೋಧ ವ್ಯಕ್ತಪಡಿಸಿದೆ.

ರಾಜ್ಯದಲ್ಲಿಯೇ ಮೇಲ್ದರ್ಜೆಯಲ್ಲಿರುವ ಧಾರವಾಡ ಕೃಷಿ ವಿಶ್ವವಿದ್ಯಾಲಯ ಕೃಷಿ ಸಂಶೋಧನೆಯ ಜೊತೆಗೆ ಕೃಷಿ ಉಪ ಕಸುಬುಗಳಲ್ಲಿಯೂ ತೊಡಗಿಸಿಕೊಂಡಿದೆ. ಅದರಲ್ಲಿ ಹೈನುಗಾರಿಕೆ ಘಟಕ ಪ್ರಮುಖವಾಗಿದೆ. ಧಾರವಾಡಿ ಎಮ್ಮೆ ತಳಿ ಸೇರಿ ವಿವಿಧ ತಳಿಯ ರಾಸು ಹಾಗೂ ಹಲವು ಬಗೆಯ ನೂರಾರು ಜಾನುವಾರುಗಳು ಇಲ್ಲಿವೆ. ಆ ಪೈಕಿ ಹೆಚ್ಚುವರಿ ಜಾನುವಾರುಗಳ ಹರಾಜಿಗೆ ಕೃಷಿ ವಿವಿ ಮುಂದಾಗಿತ್ತು. ಈ ಸಂಬಂಧ ಜಾಹೀರಾತು ಪ್ರಕಟಣೆ ಕೂಡ ನೀಡಿತ್ತು.

ಆದರೆ, ಇಲ್ಲಿ ಜಾನುವಾರುಗಳು ಹರಾಜಿನ ಮೂಲಕ‌ ಕಸಾಯಿಖಾನೆ ಸೇರುತ್ತವೆ. ಹೀಗಾಗಿ ಈ ಹರಾಜು ಯಾವುದೇ ಕಾರಣಕ್ಕೂ ನಡೆಯಬಾರದು ಎಂದು ಬಜರಂಗದಳ ಆಕ್ಷೇಪಿಸಿದೆ. ವಿವಿಗೆ ಈ ಜಾನುವಾರುಗಳು ಹೆಚ್ಚುವರಿ ಆಗಿದ್ದು, ಪಾಲನೆ ಮಾಡುವುದಕ್ಕೆ ಆಗದೇ ಹೋದಲ್ಲಿ ಸರ್ಕಾರಿ ಗೋಶಾಲೆಗಳಿಗೆ ನೀಡಲಿ. ಈ ಕೂಡಲೇ ಹರಾಜು ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಆಗ್ರಹಿಸಿ ಕೃಷಿ ವಿವಿ ಕುಲಪತಿಗೆ ಬಜರಂಗದಳ ಮನವಿ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಕೃಷಿ ವಿವಿ ಸದ್ಯ ನಡೆಯಲಿರುವ ಹರಾಜಿನಲ್ಲಿ ರೈತರು ಮತ್ತು ಹಾಲು ಉತ್ಪಾದಕರೇ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎನ್ನುವ ನಿಯಮವನ್ನು ಹಾಕಿದೆ. ರೈತರ ಕೃಷಿ ಜಮೀನಿನ ಪಹಣಿ ಪತ್ರ ಇಲ್ಲವೇ, ಹಾಲು ಉತ್ಪಾದಕರ ಸಂಘದಲ್ಲಿ ಸದಸ್ಯರಾಗಿದ್ದಲ್ಲಿ ಸದಸ್ಯತ್ವದ ಪ್ರಮಾಣ ಪತ್ರ ನೀಡಬೇಕು ಎಂದು ಷರತ್ತು ವಿಧಿಸಲಾಗಿದೆ. ಇಷ್ಟಾದರೂ ಭಜರಂಗದಳ ಹರಾಜು ಪ್ರಕ್ರಿಯೆ ನಡೆಸದಂತೆ ಆಕ್ಷೇಪಿಸಿದೆ. ಒಂದು ವೇಳೆ ಹರಾಜು ಹಾಕಿದರೆ ನಾವು ಮುತ್ತಿಗೆ ಹಾಕಿ ತಡೆಯುತ್ತೇವೆ ಎಂದು ಬಜರಂಗದಳ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...