ಧಾರವಾಡ | ಬರಪೀಡಿತ ಪ್ರದೇಶ ಘೋಷಣೆಗೆ ಎಐಕೆಕೆಎಂಎಸ್ ಆಗ್ರಹ

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ) ಕೂಲಿ ಕಾರ್ಮಿಕರಿಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಬೇಕು, ರಾಜ್ಯಾದ್ಯಂತ ಮುಂಗಾರು ವಿಫಲವಾಗಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಅವಳಿ ಜಿಲ್ಲೆ ಹುಬ್ಬಳ್ಳಿ-ಧಾರವಾಡವನ್ನು ಬರ ಪೀಡಿತವೆಂದು ಘೋಷಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ದೀಪಾ ಧಾರವಾಡ ಮಾತನಾಡಿ, “ಕರ್ನಾಟಕ ರಾಜ್ಯದಲ್ಲಿ ಈ ವರ್ಷ ಮುಂಗಾರು ತಡವಾಗಿ ಪ್ರವೇಶ ಮಾಡಿತು. ತಡವಾದರೂ ಕೂಡ ಬಹುತೇಕ ಜಿಲ್ಲೆಗಳಲ್ಲಿ ಬಿತ್ತನೆ ಮಾಡಲಾಯಿತು. ಮಳೆಯಿಲ್ಲದೆ ಬೆಳೆ ನಷ್ಟವಾಗಿದೆ. ಕೆಲವೆಡೆ ಮತ್ತೊಮ್ಮೆ ಬಿತ್ತನೆ ಮಾಡಿಯೂ ಕೂಡ ರೈತರು ಮಳೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಮುಂಗಾರುಮಳೆ ಕ್ಷೀಣವಾಗುತ್ತಿದ್ದು, ಬಿತ್ತಿದ ಬೆಳೆಯು ಒಣಗುತ್ತಿದೆ. ಸಾಲ ಮಾಡಿ ಬಿತ್ತನೆಗೆ ಖರ್ಚು ಮಾಡಿದ ಹಣ ವಾಪಸ್ ಬರುವಂತೆ ಕಾಣುತ್ತಿಲ್ಲ. ಈ ಪರಿಸ್ಥಿತಿಯನ್ನು ಮನಗಂಡ ರೈತರು ಕಂಗಾಲಾಗುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕೃಷಿ ಚಟುವಟಿಕೆ ಸಾಲ ಮಾಡದೆ ನಡೆಯುವುದೇ ಇಲ್ಲ. ಬೀಜ, ಗೊಬ್ಬರ ಇನ್ನಿತರೆ ಎಲ್ಲ ಒಳಸುರಿವುಗಳ ಬೆಲೆ ಗಗನಕ್ಕೇರಿದೆ. ಇದನ್ನೆಲ್ಲ ಸರಿದೂಗಿಸಲು ರೈತರು ಹೆಚ್ಚಿನ ಸಾಲಕ್ಕೆ ಮೊರೆ ಹೋಗಿದ್ದಾರೆ. ಇನ್ನೊಂದೆಡೆ ಮುಂಗಾರು ಮಳೆ ವೈಫಲ್ಯದಿಂದ 2022-23ನೇ ಸಾಲಿನಲ್ಲಿ 76 ರೈತರು ಆತ್ಮಹತ್ಯೆಗೆ ಶರಣಾಗಿದ್ದು, ಕೃಷಿ ಬಿಕ್ಕಟ್ಟಿಗೆ ಹಿಡಿದ ಕನ್ನಡಿಯಾಗಿದೆ. ಇಷ್ಟೆಲ್ಲ ಆದರೂ ಸರ್ಕಾರ ಎಚ್ಚೆತ್ತುಕೊಳ್ಳದೆ, ಬರಗಾಲವೆಂದು ಘೋಷಿಸದೆ ರೈತರನ್ನು ಸಂಕಷ್ಟಕ್ಕೆ ದೂಡಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಕಾರ್ಯದರ್ಶಿ ಶರಣು ಗೋನವಾರ ಮಾತನಾಡಿ, “ದೇಶದ ಬೆನ್ನೆಲುಬು ಆಗಿರುವ ರೈತನ ಬೆನ್ನೆಲುಬೇ ಮುರಿಯುತ್ತಿದೆ. ದೇಶದ ಪ್ರಗತಿ ರೈತನ ಬದುಕಿನ ಮೇಲೆ ನಿಂತಿದೆ. ಹಾಗಾಗಿ ಸರ್ಕಾರ ಯುದ್ದೋಪಾದಿಯಲ್ಲಿ ಕಾರ್ಯ ಪ್ರವೃತ್ತರಾಗಬೇಕು. ದೇಶದ ರೈತರು ಸರ್ಕಾರದ ಸಹಾಯಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ ಕೃಷಿ ಕಾರ್ಮಿಕರು, ಮನರೇಗಾ ಕೂಲಿ ಕಾರ್ಮಿಕರು ಜೀವನ ನಡೆಸುವುದು ದುಸ್ತರವಾಗಿದೆ. ಮನರೇಗಾ ಕೂಲಿ ಕಾರ್ಮಿಕರಿಗೆ ದುಡಿದ ಹಣ ಕೈ ಸೇರುತ್ತಿಲ್ಲ. ನಿತ್ಯವೂ ಕೂಲಿ ಮೇಲೆ ಜೀವನ ಮಾಡುವ ಕೋಟ್ಯಾಂತರ ಮನರೇಗಾ ಕೂಲಿ ಕಾರ್ಮಿಕರ ಬದುಕು ಹೇಳತೀರದು. ಕೆಲವೆಡೆ 2 ತಿಂಗಳ ಹಣ ಬಾಕಿ ಇದೆ. ಸಮರ್ಪಕವಾಗಿ ಕೆಲಸವನ್ನೂ ನೀಡುತ್ತಿಲ್ಲ. ಇಂತಹ ಬರ ಪರಿಸ್ಥಿತಿಯಲ್ಲಿ 50 ಮಾನವ ದಿನಗಳ ಕೆಲಸವನ್ನು ಹೆಚ್ಚುವರಿಯಾಗಿ ನೀಡಬೇಕೆಂದು ಹೋರಾಟ ಮಾಡುತ್ತಿದ್ದರೂ ಸರ್ಕಾರ ಹೆಚ್ಚುವರಿ 50 ದಿನಗಳ ಕೆಲಸ ನೀಡಿಲ್ಲ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಸಿಐಟಿಯು ಒತ್ತಾಯ

ಕಾರ್ಯನಿರ್ವಾಹಕ ಅಧಿಕಾರಿ ಮನವಿ ಸ್ವೀಕರಿ ಮಾತನಾಡಿ, “ಕೂಡಲೇ ಪಿಡಿಒಗಳ ಸಭೆ ಕರೆದು, ಮನರೇಗಾ ಕೂಲಿ ಕಾರ್ಮಿಕರ ಸಮಸ್ಯೆಗಳಾದ ನಿರಂತರ ಕೆಲಸ ನೀಡದಿರುವುದು, ಕೆಲಸ ನೀಡುವಲ್ಲಿ ವಿಳಂಬ ಮತ್ತು ಹೊಸ ಜಾಬ್ ಕಾರ್ಡ್‌ ನೀಡುವ ಸಮಸ್ಯೆಗಳು ಹಾಗೂ ಇನ್ನಿತರ ಯಾವುದೇ ಸಮಸ್ಯೆಗಳಿದ್ದರು ಬಗೆಹರಿಸಲಾಗುವುದು” ಎಂದು ಭರವಸೆ ನೀಡಿದ್ದರು.

ಜಿಲ್ಲಾ ಉಪಾಧ್ಯಕ್ಷ ಹನುಮೇಶ ಹುಡೇದ, ಮಾರುತಿ ಪೂಜಾರ, ಮುತ್ತು ಇಂಚಲ, ಜಗದೀಶ ಪೂಜಾರ, ಬಸಪ್ಪ ದರೋಜಿ, ಮಂಜು ಬೆಣ್ಣಿ, ಫಕೀರಪ್ಪ ಬಾಗೋಡಿ, ರಸೂಲ ಜಮಾದಾರ್, ನಾರಯಣ ಮೇಗಾಣಿ, ಈರಪ್ಪ ಅಂಗಡಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...