ಧಾರವಾಡ | ಪರಿಸರ ಸ್ವಚ್ಛತೆಯ ಜೊತೆಗೆ ಮನ್ನಸ್ಸು ಸ್ವಚ್ಛವಾಗಬೇಕು: ಬಶೀರ್ ಅಹ್ಮದ್ ಜಾಹಗೀರದಾರ

Date:

ಎನ್ಎಸ್ಎಸ್ ಶಿಬಿರಾರ್ಥಿಗಳು ಪರಿಸರದ ಸ್ವಚ್ಛತೆ ಜೊತೆಗೆ ಮನಸ್ಸನ್ನು ಸ್ವಚ್ಛವಾಗಿಟ್ಟುಕೊಳ್ಳುವ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು, ಇಂತಹ ಶಿಬಿರಗಳಲ್ಲಿ ಭಾಗವಹಿಸುವದರಿಂದ ಉತ್ತಮ ನಾಗರಿಕರಾಗಲು ಸಹಕಾರಿಯಾಗುತ್ತದೆ, ಗ್ರಾಮೀಣ ಪ್ರದೇಶದ ಸೊಗಡನ್ನು ಅರಿಯಲು ಶ್ರದ್ಧೆ, ಶಿಸ್ತು ಅಳವಡಿಸಿಕೊಳ್ಳಬೇಕು ಎಂದು ತಾಲೂಕಿನ ಹಾರೋಬೆಳವಡಿ ಗ್ರಾಮದಲ್ಲಿ ಧಾರವಾಡದ ಅಂಜುಮನ್ ಕಲಾ, ವಿಜ್ಞಾನ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಶೀರ ಅಹಮ್ಮದ್ ಜಾಹಗೀರದಾರ ಮಾತನಾಡಿದರು.

ಮುಖ್ಯ ಅತಿಥಿಗಳಾದ ಖೈರುದ್ದಿನ್ ಶೇಖ್ ಮಾತನಾಡಿ, ಸ್ವಯಂಸೇವಕರು ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ಬೆಳೆಯಬೇಕು. ನೈತಿಕ ಗುಣಗಳು, ಪರಸ್ಪರ ಸಹಕಾರ ಮತ್ತು ಜವಾಬ್ದಾರಿಯ ಮನೋಭಾವ ಅಳವಡಿಸಿಕೊಳ್ಳುವುದೇ ರಾಷ್ಟ್ರ ನಿರ್ಮಾಣಕ್ಕೆ ಆಧಾರವೆಂದು ತಿಳಿಸಿದರು.

ಗ್ರಾಮ ಪಂಚಾಯತಿ ಕಾರ್ಯದರ್ಶಿ ವಿ. ಬಿ. ಹಂದೂರ ಮಾತನಾಡಿ, ಗ್ರಾಮದ ಪರಿಸರ ಸುಧಾರಣೆಗೆ ಈ ಶಿಬಿರದಲ್ಲಿ ನಾವು ಪಾಲ್ಗೊಂಡು ನಡೆಸಿದ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತವಾಗಿವೆ. ಇಂತಹ ಕಾರ್ಯಗಳಿಗೆ ಗ್ರಾಮ ಪಂಚಾಯತಿಯಿಂದ ಸದಾ ಸಹಕಾರ ದೊರೆಯುತ್ತದೆ ಎಂದರು. ಅತಿಥಿಗಳಾಗಿ ಆಗಮಿಸಿದ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯರಾದ ಸುರೇಖಾ ದೇಸಾಯಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಮಯಪ್ರಜ್ಞೆ, ಶಿಸ್ತು, ನಾಯಕತ್ವದ ಗುಣಗಳನ್ನು ದೃಢಸಂಕಲ್ಪದಿಂದ ಅಳವಡಿಸಿಕೊಂಡು ಸಮಾಜಕ್ಕೆ ಸೇವೆ ಸಲ್ಲಿಸುವ ಮನೋಭಾವ ಬೆಳೆಸಿಕೊಳ್ಳಲಿ. ನಮ್ಮ ಶಾಲೆಯನ್ನು ಶಿಬಿರಕ್ಕಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಜುಮನೆ ಇಸ್ಲಾಂ ಸಂಸ್ಥೆಯ ಆಡಳಿತ ಮಂಡಳಿ ಇನ್ನೊರ್ವ ಸದಸ್ಯ ರಿಯಾಜ ಅಹಮ್ಮದ್ ನನ್ನೆಸಾಬನವರ, ಗ್ರಾಮ ಪಂಚಾಯತ ಅಧ್ಯಕ್ಷೆ ಕಾಳವ್ವ ಬಡಿಗೇರ, ಸದಸ್ಯೆ ಈರಮ್ಮ ಉದಮೀಶಿ, ಆರೋಗ್ಯ ಇಲಾಖೆಯ ಫರ್ವಿನಬಾನು ತಾಳಿಕೋಟಿ, ಶಾಲಾ ಸುಧಾರಣಾ ಸಮಿತಿಯ ಉಪಾಧ್ಯಕ್ಷ ನಯನದೇವ ದೊಡ್ಡಮನಿ, ಚಂದ್ರಯ್ಯಾ ಶಿದ್ಗಿರಿಮಠ, ಗ್ರಾಮದ ಮುಖಂಡ ಯಲ್ಲಪ್ಪ ಉದಮೀಶಿ, ಪ್ರಾಚಾರ್ಯ ಡಾ. ಎನ್ ಬಿ ನಾಲತವಾಡ ವೇದಿಕೆ ಮೇಲಿದ್ದರು.

ಇದನ್ನೂ ಓದಿ ಧಾರವಾಡ | ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಬಹುತ್ವವನ್ನು ಎತ್ತಿ ಹಿಡಿದ ಲೇಖಕ: ದಾಮೋದರ ಮೌಜೋ

ಪ್ರೊ. ಉಲ್ಲಾಸ ದೊಡ್ಡಮನಿ ನಿರೂಪಿಸಿದರು. ರಾಸೇಯೋ ಕಾರ್ಯಕ್ರಮಾಧಿಕಾರಿ ಡಾ. ಸಯ್ಯದ್ ತಾಜುನ್ನಿಸ್ಸಾ ಸ್ವಾಗತಿಸಿದರು. ಇನ್ನೊರ್ವ ಅಧಿಕಾರಿ ಪ್ರೊ. ನಾಗರಾಜ ಕನಕನಿ ವಂದಿಸಿದರು. ಕಾರ್ಯಕ್ರಮದಲ್ಲಿ ಸಹಾಯಕ ಎನ್‌ಎಸ್ಎಸ್ ಅಧಿಕಾರಿ ಪ್ರೊ. ಶೃತಿ ಯಾವಗಲಮಠ, ಪ್ರೊ. ಶಮೀನಾ ನದಾಫ್, ಪ್ರೊ. ಶಿರಿನ್ ಶಿರಗುಪ್ಪಿ, ಪ್ರೊ. ಚಾಂದಸುಲ್ತಾನ್ ಮುಲ್ಲಾ, ಪ್ರೊ. ಶಬೀನಾ ಬೀಡಿ, ಪ್ರೊ.ಆಸ್ಮಾ ನದಾಫ್, ಶಾಲಾ ವಿದ್ಯಾರ್ಥಿಗಳು, ಶಿಬಿರಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...