ಧಾರವಾಡ | ಮುಂಗಾರು ಹಂಗಾಮಿನ ಕೃಷಿ ಪ್ರಶಸ್ತಿ ಆಯ್ಕೆಗೆ ಅರ್ಜಿ ಆಹ್ವಾನ

Date:

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆಯಿಂದ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ, ತಾಲೂಕು ಮಟ್ಟದಲ್ಲಿ ನಿಗದಿಪಡಿಸಿದ ಹಲವು ಬೆಳೆಗಳ ಬೆಳೆಸ್ಪರ್ಧೆ ಏರ್ಪಡಿಸಿದ್ದಾರೆ.

ಆಸಕ್ತಿಯುಳ್ಳ ರೈತರು, ರೈತ ಮಹಿಳೆಯರು ನಿಗದಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿಗಳೊಂದಿಗೆ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯಕ್ಕೆ ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ, ಪ್ರವೇಶ ಶುಲ್ಕ ಭರಣಾ ಮಾಡುವುದು, ಬೆಳೆ ಕಟಾವು ಮಾಡುವ ವಿಧಾನ, ಸ್ಪರ್ಧಾತ್ಮಕ ಇಳುವರಿಯ ಮಾಹಿತಿ ಇತ್ಯಾದಿಗಳ ಬಗ್ಗೆ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.

ಬೆಳೆಸ್ಪರ್ಧೆಯಲ್ಲಿ ಭಾಗವಹಿಸಲು ಸಾಮಾನ್ಯ ವರ್ಗದ ರೈತರಿಗೆ ₹100 ಶುಲ್ಕ ಇದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ರೈತರಿಗೆ ₹25 ಶುಲ್ಕವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಮಟ್ಟದ ಬೆಳೆಸ್ಪರ್ಧೆಗೆ ಮುಂಗಾರು ಹಂಗಾಮಿಗೆ ಭತ್ತ(ನೀರಾವರಿ), ಭತ್ತ(ಮಳೆ ಆಶ್ರಿತ), ರಾಗಿ (ಮಳೆ ಆಶ್ರಿತ), ಶೇಂಗಾ (ಮಳೆ ಆಶ್ರಿತ), ತೊಗರಿ (ಮಳೆ ಆಶ್ರಿತ), ಸೋಯಾ ಅವರೆ (ಮಳೆ ಆಶ್ರಿತ), ಮುಸುಕಿನ ಜೋಳ (ಮಳೆ ಆಶ್ರಿತ), ನವಣೆ (ಮಳೆ ಆಶ್ರಿತ), ಸಜ್ಜೆ (ಮಳೆ ಆಶ್ರಿತ) ಬೆಳೆ ನಿಗದಿಪಡಿಸಲಾಗಿದೆ.

ಜಿಲ್ಲಾ ಮಟ್ಟದ ಬೆಳೆ ಸ್ಪರ್ಧೆಗೆ ಮುಂಗಾರು ಹಂಗಾಮಿಗೆ ಸೋಯಾ ಅವರೆ (ಮಳೆ ಆಶ್ರಿತ) ನಿಗದಿಪಡಿಸಲಾಗಿದೆ. ತಾಲೂಕು ಮಟ್ಟದ ಬೆಳೆಸ್ಪರ್ಧೆಗೆ ಸಂಬಂದಿಸಿದಂತೆ, ಧಾರವಾಡ ತಾಲೂಕಿಗೆ ಸೋಯಾ ಅವರೆ(ಮಳೆಆಶ್ರಿತ), ಹುಬ್ಬಳ್ಳಿ ನಗರ ತಾಲೂಕಿಗೆ ಸೋಯಾ ಅವರೆ (ಮಳೆಆಶ್ರಿತ), ಹುಬ್ಬಳ್ಳಿ ತಾಲೂಕಿಗೆ ಮುಸುಕಿನಜೋಳ (ಮಳೆಆಶ್ರಿತ), ಕಲಘಟಗಿ ತಾಲೂಕಿಗೆ ಮುಸುಕಿನಜೋಳ (ಮಳೆಆಶ್ರಿತ), ಅಳ್ನಾವರ ತಾಲೂಕಿಗೆ ಮುಸುಕಿನಜೋಳ (ಮಳೆಆಶ್ರಿತ), ನವಲಗುಂದ ತಾಲೂಕಿಗೆ ಮುಸುಕಿನಜೋಳ (ಮಳೆಆಶ್ರಿತ), ಅಣ್ಣಿಗೇರಿ ತಾಲೂಕಿಗೆ ಮುಸುಕಿನಜೋಳ(ಮಳೆಆಶ್ರಿತ) ಹಾಗೂ ಕುಂದಗೋಳ ತಾಲೂಕಿಗೆ ಶೇಂಗಾ (ಮಳೆಆಶ್ರಿತ) ಬೆಳೆಗಳನ್ನು ನಿಗದಿಪಡಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೆಆರ್‌ಐಡಿಎಲ್ ಕಾರ್ಯ ನಿರ್ವಾಹಕ ಹುದ್ದೆ ನೇಮಕಾತಿಗೆ ಆಗ್ರಹ

2023-24 ನೇ ಸಾಲಿನಲ್ಲಿಯೂ ಸಹ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಹಾಗೂ ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಕೃಷಿ ಪ್ರಶಸ್ತಿಯನ್ನು ನೀಡಲು ಸರ್ಕಾರವು ಅನುಮೋದನೆ ನೀಡಿದ ಪ್ರಯುಕ್ತ ಅರ್ಜಿಗಳನ್ನು ಸಲ್ಲಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...