ಧಾರವಾಡ ಜಿಲ್ಲೆಯ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆಯು 2025-26 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. 2025-26 ನೇ ಸಾಲಿನಲ್ಲಿ ಕೃಷಿ ಪ್ರಶಸ್ತಿಯಡಿ ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ನಲ್ಲಿ ಸಿಟಿಜನ್ ಲಾಗಿನ್ ಅಥವಾ ಆರ್ಎಸ್ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ಸೇವಾಕೇಂದ್ರ, ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಸದರಿ ಕೆ-ಕಿಸಾನ್ ಪೋರ್ಟಲ್ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್ಐಡಿ ಯನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು.
ಆಸಕ್ತ ರೈತರು, ರೈತ ಮಹಿಳೆಯರು ನವೆಂಬರ್ 29, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಬೆಳೆ ಕಟಾವು ಮಾಡುವ ವಿಧಾನ, ಸ್ಪರ್ಧಾತ್ಮಕ ಇಳುವರಿಯ ಮಾಹಿತಿ ಇತ್ಯಾದಿಗಳ ಬಗ್ಗೆ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
ರಾಜ್ಯ ಮಟ್ಟದ ಬೆಳೆ ಸ್ಪರ್ಧೆಗೆ ಹಿಂಗಾರು ಹಂಗಾಮಿಗೆ ಜೋಳ (ಮಳೆ ಆಶ್ರಿತ) ಮತ್ತು ಕಡಲೆ (ಮಳೆ ಆಶ್ರಿತ) ಬೆಳೆಗಳನ್ನು ನಿಗದಿಪಡಿಸಲಾಗಿದೆ. ಜಿಲ್ಲಾ ಮಟ್ಟದ ಬೆಳೆ ಸ್ಪರ್ಧೆಗೆ ಹಿಂಗಾರು ಹಂಗಾಮಿಗೆ ಕಡಲೆ (ಮಳೆ ಆಶ್ರಿತ) ನಿಗದಿಪಡಿಸಲಾಗಿದೆ. ತಾಲ್ಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಸಂಬಂಧಿಸಿದಂತೆ ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿ ನಗರ, ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ತಾಲ್ಲೂಕುಗಳಿಗೆ ಕಡಲೆ (ಮಳೆಆಶ್ರಿತ) ಬೆಳೆ ಮತ್ತು ಕಲಘಟಗಿ ತಾಲೂಕಿಗೆ ಜೋಳ (ಮಳೆ ಆಶ್ರಿತ) ಬೆಳೆ ನಿಗದಿಪಡಿಸಲಾಗಿದೆ.
ಇದನ್ನೂ ಓದಿ ಧಾರವಾಡ | ರಾಜ್ಯಮಟ್ಟದ ಮಿನಿ ಓಲಂಪಿಕ್ಸ್; 26 ಪದಕ ಪಡೆದ ಜಿಲ್ಲಾ ಕ್ರೀಡಾಪಟುಗಳು
ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





