ಧಾರವಾಡ | ಬಾಬು ಜಗಜೀವನ ರಾಂ, ನಿರಂತರ ದೇಶದ ಅಭಿವೃದ್ಧಿಪರ ಇದ್ದವರು: ಶಾಸಕ ಎನ್.ಎಚ್.ಕೋನರಡ್ಡಿ

Date:

ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರು ಈ ರಾಷ್ಟ್ರ ಕಂಡ ಧೀಮಂತ ನಾಯಕ ಮತ್ತು ರಾಷ್ಟ್ರ ಭಕ್ತ ರಾಜಕಾರಣಿ, ರೈತನಾಯಕರಾಗಿದ್ದರು. ಯುದ್ಧ, ಆಹಾರ ಉತ್ಪಾದನೆಯಲ್ಲಿ ಅವರು ಕೈಗೊಂಡ ದಿಟ್ಟ ನಿರ್ಧಾರಗಳು ಬಲಿಷ್ಠ ಭಾರತವಾಗಲು ಸಾಧ್ಯವಾಯಿತು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು.

ಏ.5ರಂದು ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಜರುಗಿದ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ 118 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ಅವರು, ನಾನೊಬ್ಬ ರೈತನಾಗಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಂ ಅವರನ್ನು ಹೆಮ್ಮೆಯಿಂದ ಸ್ಮರಿಸುತ್ತೇನೆ. ಗೋಧಿ ಬೆಳೆ ವಿಸ್ತರಿಸಿ, ವಿತರಿಸುವ ಮೂಲಕ ಭಾರತ ದೇಶವು ಆಹಾರ ಉತ್ಪನ್ನಗಳ ಉತ್ಪಾದನೆಯಲ್ಲಿ ಸ್ವಾವಲಂಬಿ ರಾಷ್ಟ್ರವಾಗಲೂ ಸಹಾಯ ಮಾಡಿದರು. ಬಲಿಷ್ಠ ಭಾರತ ನಿರ್ಮಾಣವಾಗಲು ಅವರ ಕೊಡುಗೆ ಅಪಾರವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎನ್ನುವಂತೆ ಡಾ. ಬಾಬು ಜಗಜೀವನ ರಾಂ ಅವರ ಬಾಲ್ಯದ ಜೀವನ ಗಮನಿಸಿದಾಗ ಅವರ ಸಮರ್ಥತೆ, ಸಮಾನತೆಯ ಚಿಂತನೆ, ಸಾತ್ವಿಕ ಪ್ರತಿಭಟನೆ ಎದ್ದು ಕಾಣುತ್ತದೆ. ಬಾಲ್ಯದಿಂದಲೇ ಅವರಲ್ಲಿ ನಾಯಕತ್ವದ ಗುಣಗಳು ಬೆಳೆದಿದ್ದವು. ಹೀಗಾಗಿ ಅವರು ಭಾರತದ ರಾಜಕಾರಣದಲ್ಲಿ ಅಜಾತಶತ್ರು ಆಗಿದ್ದರು. ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ಧ್ವನಿ ಎತ್ತಿದ್ದರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ್ ಎಂ. ಬ್ಯಾಕೋಡ ಮಾತನಾಡಿ, ಮಹಾತ್ಮರ, ರಾಷ್ಟ್ರೀಯ ನಾಯಕರ ಜಯಂತಿ ದಿನದಂದು ನಾವು ಅವರಿಂದ ಏನು ಕಲಿಯುತ್ತೇವೆ, ಏನು ತಿಳಿಯುತ್ತೇವೆ, ಅದನ್ನು ಹೇಗೆ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತೇವೆ ಎಂಬುದು ಅತಿ ಮುಖ್ಯವಾಗಿದೆ. ಡಾ. ಬಾಬು ಜಗಜೀವನ ರಾಂ ಅವರು ಸರಳ, ಸಜ್ಜನರಾಗಿ, ಸಮಾನತೆಗಾಗಿ ಹೋರಾಟ ಮಾಡಿದವರು. ನಾವು ಯಾರಿಗಿಂತ ಕಡಿಮೆ ಇಲ್ಲ. ನಮ್ಮಲ್ಲಿ ಅಗತ್ಯ ಶಕ್ತಿ, ಜ್ಞಾನವಿದ್ದರೆ ಯಾವುದೇ ಹಂತಕ್ಕಾದರೂ ಹೋಗಿ ತಲುಪಬಹುದು. ಯುದ್ಧದ ಸಮಯದಲ್ಲಿ ರಕ್ಷಣಾ ಸಚಿವರಾಗಿ ಅವರು ತೆಗೆದುಕೊಂಡ ನಿರ್ಧಾರಗಳು ಅವರಿಂದ ನಾವು ಕಲಿಯಬೇಕು ಎಂದರು.

ಇದನ್ನು ಓದಿದ್ದೀರಾ? ಧಾರವಾಡ | 505ಕ್ಕೂ ಹಚ್ಚು ಡ್ರಕ್ಸ್ ಬಳಕೆದಾರರಿಗೆ ವೈದ್ಯಕೀಯ ಪರೀಕ್ಷೆ

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಚಿಗರಹಳ್ಳಿಯ ಜಗದ್ಗುರು ಮರುಳಶಂಕರ ದೇವರಗುರು ಪೀಠದ ಸಿದ್ದ ಬಸವ ಕಬೀರ ಸ್ವಾಮಿಗಳು ಮಾತನಾಡಿ, ಸಮಾಜದಲ್ಲಿ ಮಡಿವಂತಿಕೆ ಒಡೆದು ಹಾಕಿದವರು ದಾರ್ಶನಿಕರಾಗುತ್ತಾರೆ. ಜಾತಿ ವ್ಯವಸ್ಥೆ ನಾಶವಾಗಬೇಕು. ಸಮಾನತೆ, ಸಹಬಾಳ್ವೆಗೆ ಶಿಕ್ಷಣ, ಸಂವಿಧಾನ ಅವಕಾಶ ನೀಡಿವೆ. ಮೂಡನಂಬಿಕೆಗಳನ್ನು ನಂಬದೆ, ವಾಸ್ತವತೆ ಅರಿತು ಬದುಕಬೇಕು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...