ಧಾರವಾಡ | ಬಸವ ಸಂಸ್ಕೃತಿ ಅಭಿಯಾನ ಯಾರ ವಿರುದ್ಧವೂ ಅಲ್ಲ: ಬಸವಪರ ಸಂಘಟನೆಗಳ ಸ್ಪಷ್ಟನೆ

Date:

ಯಾರೇ ವಿರೋಧಿಸಿದರೂ ಬಸವ ಸಂಸ್ಜೃತಿ ಉತ್ಸವ ನಡೆಯುತ್ತದೆ. ವಿಶ್ವಗುರು ಬಸವಣ್ಣನವರ ಸಲುವಾಗಿ ಈ ಅಭಿಯಾನ ನಡೆಯುತ್ತಿದೆಯೇ ಹೊರತು ಯಾವುದೇ ರಾಜಕಾರಣಿ ಅಥವಾ ಸ್ವಾಮಿಗಳ ಸಲುವಾಗಿ ಅಲ್ಲ ಅಥವಾ ಯಾರ ವಿರುದ್ಧವೂ ಅಲ್ಲ ಎಂದು ಧಾರವಾಡದಲ್ಲಿ ಬಸವಪರ ಸಂಘಟನೆಗಳು ಸ್ಪಷ್ಟಪಡಿಸಿವೆ.

ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರ್ಕಾರ ಘೋಷಿಸಿ ಒಂದು ವರ್ಷ ಪೂರೈಸಿದ ಸಂಭ್ರಮದಲ್ಲಿ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ ನಡೆಯುತ್ತಿದ್ದು, ಧಾರವಾಡದಲ್ಲಿಯೂ ಇದೇ ಸೆಪ್ಟೆಂಬರ್ 12ರಂದು ಈ ಕಾರ್ಯಕ್ರಮ ನಡೆಯುತ್ತಿದೆ. ಈ ಕುರಿತು ಮುರುಘಾಮಠದಲ್ಲಿ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಶುವಾನಂದ ಶೆಟ್ಟೆಣ್ಣವರ ಮಾತನಾಡಿ, ” ಬಸವಣ್ಣನ ಸಲುವಾಗಿ ಎಲ್ಲರೂ ಒಂದಾಗಿ ದುಡಿಯೋಣ. ಸೇವೆಯ ಫಲ‌ ಸಿಕ್ಕೇ ಸಿಗುತ್ತದೆ” ಎಂದರು.

ಬಸವಂತಪ್ಪ ತೋಟದ ಮಾತನಾಡಿ, “ಹೊಸ ಉತ್ಸಾಹ ಮೂಡಲಿ. ಎಲ್ಲರೂ ಭಾಗವಹಿಸೋಣ. ಬಸವಣ್ಣ ಒಬ್ಬರಿಗೆ ಮಾತ್ರ ಸೀಮಿತವಲ್ಲ. ಎಲ್ಲರಿಗೂ ಬೇಕಾದವರು. ಶರಣರ ವೇಶಭೂಷಣವನ್ನು ಮಕ್ಕಳು ಧರಿಸುವುದಿದ್ದರೆ; ಹೆಸರು ನೊಂದಾಯಿಸಿಕೊಳ್ಳಬೇಕು. ಪ್ರಸಾದ ವ್ಯವಸ್ಥೆ ಇದ್ದಾಗ; ಯಾರೂ ಪ್ರಸಾದ ಕೆಡಿಸದಿರಿ. ಎಲ್ಲರೂ ವೈಯಕ್ತಿಕ ರಾಜಕೀಯ, ದ್ವೇಷ ಎಲ್ಲವನ್ನೂ ಮರೆತು, ಒಗ್ಗಟ್ಟಾಗಿ ಈ ಅಭಿಯಾನವನ್ನು ಯಶಸ್ವಿಯಾಗುವಂತೆ ಕಾರ್ಯನಿರ್ವಹಿಸಬೇಕು. ಯಾವುದೇ ರಾಜಕಾರಣಿಗಳು ಬರಲಿ, ಬರದಿರಲಿ, ಸ್ವಾಮೀಜಿಗಳು ಬರಲಿ ಬರದಿರಲಿ ಯಾರ ಬಗ್ಗೆಯೂ ತಲೆಕೆಡಿಸಿಕೊಳ್ಳುವುದು ಬೇಡ. ಎಲ್ಲರೂ ಲಿಂಗಾಯತ ಧರ್ಮದ ಬದ್ದತೆಯಿಂದ ಪಾಲ್ಗೊಳ್ಳಲು ಅನುವು ಮಾಡಿಕೊಡಿ” ಎಂದು ಕರೆ ಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಧಾರವಾಡ | ಗಣೇಶ ವಿಸರ್ಜನೆ ವೇಳೆ ಡಿಜೆ ವಿಚಾರಕ್ಕೆ ಗುಂಪು ಜಗಳ

ಸಂತೋಷ್ ಕತ್ತಿಶೆಟ್ಟರ್ ಮಾತನಾಡಿ, “ನಮ್ಮ ಬೆಳವಣಿಗೆಗಳನ್ನು ವಿರೋಧಿಸುವವರನ್ನು ಪ್ರತಿವಿರೋಧಿಸದೇ ನಾವೇ ದೂರಕರಿಸೋಣ. ಹುಬ್ಬಳ್ಳಿಯಲ್ಲಿ ಕೂಡಾ ಬಸವ ಸಂಸ್ಕೃತಿಯನ್ನು ಬೆಳೆಸಬೇಕಿದೆ. ಆ ಕಾರ್ಯಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ” ಎಂದರು.

ಮುರುಘಾಮಠದ ಉಪಾಧ್ಯಕ್ಷ ಹಾಗೂ ಬಸವ ಸಂಸ್ಕೃತಿ ಅಭಿಯಾನದ ಕಾರ್ಯದರ್ಶಿ ಪಟ್ಟಣಶೆಟ್ಟಿ ಮಾತನಾಡಿ, “ಯುವಕರೆಲ್ಲ ಸೇರಿ ಈ ಅಭಿಯಾನ‌ ಮಾಡುತ್ತಿರುವುದು ಸಂತೋಷದ ವಿಚಾರವಾಗಿದೆ. ನಾವು ಮಾಡುವ ಕಾರ್ಯ ಸದ್ವಿನಿಯೋಗವಾಗಲಿ. ಎಲ್ಲರನ್ನು ಅಭಿಯಾನಕ್ಕೆ ಕರೆತರುವ ಕೆಲಸವಾಗಲಿ. ನಾವು ಮಾಡುವ ಕಾರ್ಯ ಮೊದಲು ಆತ್ಮಸಾಕ್ಷಿಯಾಗಿ ನಮಗೇ ಸರಿ ಎನಿಸಬೇಕು. ಉಪದೇಶ ಮಾಡುವವರು ಮೊದಲು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಿದೆ.‌ ಯಾರು ಯಾರ ಮೇಲೆ ಸವಾರಿ ಮಾಡದೇ ಎಲ್ಲರೂ ಒಗ್ಗೂಡಿ ಕೆಲಸಮಾಡಬೇಕಿದೆ” ಎಂದರು.

ಸಭೆಯಲ್ಲಿ ಶಿವರುದ್ರಗೌಡ ಪಾಟೀಲ್, ದೇಸೂರ, ರವಿ ಬಾಗೋಡಿ, ಸಿ ಜಿ ಪಾಟೀಲ್, ಗುರುರಾಜ ಅವರಾದಿ, ಭೀಮನಗೌಡ ಪಾಟೀಲ್, ಮನೋಹರ ಜಮಖಂಡಿ, ಶಿವರುದ್ರಗೌಡ ಪಾಟೀಲ್, ವಿಶ್ವನಾಥ ನಡಕಟ್ಟಿ, ಸಂತೋಷ್, ಅರುಣ ಮೂಡಿ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...