ಧಾರವಾಡ | ಬಸವರಾಜ ಬೊಮ್ಮಾಯಿ ವಕ್ಫ್ ಆಸ್ತಿ ಕಾಪಾಡುವುದಾಗಿ ಹೇಳಿದ್ದರು: ಸಿಎಂ ಸಿದ್ಧರಾಮಯ್ಯ

Date:

ಬಿಜೆಪಿ ಅವಧಿಯಲ್ಲೂ ವಕ್ಫ್ ವಿಚಾರಕ್ಕೆ ನೋಟಿಸ್ ನೀಡಿದ್ದರು. ಆ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು, ಈಗ ವಿರುದ್ಧವಾಗಿ ಮಾತನಾಡುತ್ತ ಉಳ್ಟಾ ಹೊಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ವಿಚಾರಣೆ ಇಲ್ಲದೆಯೇ ಯಾವುದಾದರೂ ಪಹಣಿ ದಾಖಲೆ ಬದಲಾವಣೆಯಾಗಿದ್ದರೆ ಅದನ್ನು ರದ್ದು ಮಾಡಬೇಕು ಮತ್ತು ಯಾವುದೇ ಕಾರಣಕ್ಕೂ ರೈತರನ್ನು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಯಾರೇ ಆಗಿರಲಿ ಒಕ್ಕಲೆಬ್ಬಿಸಬಾರದು. ವಕ್ಫ್ ಆಸ್ತಿ ವಿಚಾರ ನಮಗೆ ಗೊತ್ತಾದ ತಕ್ಷಣವೇ ನೋಟಿಸ್ ಹಿಂಪಡೆಯಲಾಗಿದೆ. ಬಿಜೆಪಿ ಅವಧಿಯಲ್ಲಿಯು 216 ಪ್ರಕರಣಗಳಲ್ಲಿ ನೋಟಿಸ್ ಕೊಟ್ಟಿದ್ದರು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಹೆಚ್.ಡಿ ಕುಮಾಸ್ವಾಮಿ ಇದ್ದಾಗ ಏಕೆ ನೋಟೀಸು ಕೊಟ್ಟಿದ್ದಾರೆ? ಬಿಜೆಪಿಯ ಈ ಡಬ್ಬಲ್ ಗೇಮ್ ವಿಚಾರವನ್ನು ಜನರಿಗೆ ನಾವು ತಲುಪಿಸುತ್ತೇವೆ ಎಂದರು.

15ನೇ ಹಣಕಾಸು ಆಯೋಗದವರು ₹5,495 ಕೋಟಿ ರೂಪಾಯಿಗಳನ್ನು ವಿಶೇಷ ಅನುದಾನ ನೀಡಬೇಕೆಂದು, ಪೇರಿಫೆರಲ್ ರಿಂಗ್ ರೋಡ್ ಹಾಗೂ ಕೆರೆಗಳ ಅಭಿವೃದ್ಧಿಗೆ ತಲಾ 3000 ಕೋಟಿ ರೂಪಾಯಿ ನೀಡಲು ಶಿಫಾರಸ್ಸು ಮಾಡಿದ್ದರು. ಒಟ್ಟು ₹11,495 ಕೋಟಿಗಳನ್ನು ಕೊಡಬೇಕಿತ್ತು, ಕೊಟ್ಟಿಲ್ಲ. ಪ್ರಹ್ಲಾದ ಜೋಶಿಯವರು ಇದನ್ನು ಕೇಂದ್ರದಿಂದ ಕೇಳಬೇಕಲ್ಲವೇ? ₹11,495 ಕೋಟಿ ಕೊಟ್ಟಿದ್ದಾರೆಯೇ? ಎಂದು ಪ್ರಶ್ನಿಸಿ, ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟುಬಿಡುವೆ. ಈ ಸವಾಲು ಸ್ವೀಕರಿಸಿ ಪ್ರಹ್ಲಾದ್ ಜೋಶಿ ರಾಜಕೀಯ ಬಿಡುತ್ತಾರೆಯೇ? ಎಂದು ಸವಾಲೆಸೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 4.50 ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತವನ್ನು ವರ್ಷಕ್ಕೆ ಕೇಂದ್ರಕ್ಕೆ ತೆರಿಗೆ ನೀಡುತ್ತಿದ್ದೇವೆ. ಅದರಲ್ಲಿ ನಮಗೆ ವಾಪಸ್ಸು ಬರುವುದು ₹55 ರಿಂದ ₹60 ಸಾವಿರ ಕೋಟಿ ಮಾತ್ರ. ಈ ಬಗ್ಗೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ.

ಬಿಜೆಪಿಯ ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಈ ಬಗ್ಗೆ ಮಾತನಾಡಿದ್ದಾರೆಯೇ? ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದರೆ ಅದು ರಾಜಕೀಯ ಅನ್ನುತ್ತಾರೆ. 5 ವರ್ಷಕ್ಕೊಮ್ಮೆ ಸಂವಿಧಾನದ ಪ್ರಕಾರ ಹಣಕಾಸಿನ ಆಯೋಗ ರಚನೆಯಾಗುತ್ತದೆ. ಅವರ ಶಿಫಾರಸ್ಸಿನ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೋಗಬೇಕಾದ ತೆರಿಗೆ ಬಗ್ಗೆ ನಿರ್ಧಾರವಾಗುತ್ತದೆ.

ಈ ವರದಿ ಓದಿದ್ದೀರಾ? ಧಾರವಾಡ | ಸರ್ದಾರ ವಲ್ಲಭಭಾಯಿ ಪಟೇಲ್ ದೇಶಕ್ಕೆ ಮಾದರಿ: ಡಾ. ಎನ್ ಎಮ್ ಮಕಾಂದರ್

3 ಲಕ್ಷದ 71 ಸಾವಿರ ಕೋಟಿ ರೂಪಾಯಿಗಳಲ್ಲಿ 52 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚ ಮಾಡುತ್ತಿದ್ದೇವೆ. ಸುಮಾರು 60 ಸಾವಿರ ಕೋಟಿ ಅಭಿವೃದ್ಧಿಗೆ ವೆಚ್ಚ ಮಾಡುತ್ತಿದ್ದೇವೆ. ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ರಸ್ತೆ, ಸೇತುವೆ, ನಿರ್ಮಾಣಕ್ಕಾಗಿ ವೆಚ್ಚವಾಗುತ್ತಿದೆ. ಇವೆಲ್ಲ ಅಭಿವೃದ್ದಿಯಲ್ಲವೇ? ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...