ಧಾರವಾಡ | ಬೆಣಚಿ, ಹೊನ್ನಾಪುರ ಪ್ರೌಢಶಾಲೆಗಳಿಗೆ ಬಿಇಒ ಭೇಟಿ; ಸುರಕ್ಷಿತ ಕೊಠಡಿಗೆ ವಿದ್ಯಾರ್ಥಿಗಳ ಸ್ಥಳಾಂತರ

Date:

ಧಾರವಾಡ ತಾಲೂಕಿನ ಹೊನ್ನಾಪುರ, ಬೆಣಚಿ ಪ್ರೌಢಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಅವರು ಕೊಠಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿಗಳನ್ನು ಉತ್ತಮ ಕೊಠಡಿಗಳಿಗೆ ಸ್ಥಳಾಂತರಗೊಳಿಸಿದರು.

ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು ಜಿಲ್ಲಾ ಪಂಚಾಯತ್ ಸಿಇಒ ನೀಡಿದ್ದ ನಿರ್ದೇಶನದಂತೆ ವಿದ್ಯಾರ್ಥಿಗಳ ಸುರಕ್ಷತೆಗೆ ಗಮನಹರಿಸದೆ ಮತ್ತು ಕಾಲಮಿತಿಯಲ್ಲಿ ಶಾಲಾ ಕೊಠಡಿಗಳ ದುರಸ್ತಿಗೊಳಿಸದ ಹಿನ್ನಲೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿಯವರೇ ಇಂದು ಬೆಳಿಗ್ಗೆ ಭೇಟಿ ನೀಡಿದರು.

ಕೊಠಡಿ ದುರಸ್ತಿ ಹಿನ್ನೆಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಗಳಿಗೆ ಬೇರೆಡೆ ಪಾಠ ಮಾಡಲಾಗುತಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ದೂರು ನೀಡಿದ್ದರು. ಬಳಿಕ ಜಿಲ್ಲಾಧಿಕಾರಿ ದಿವ್ಯ ಪ್ರಭು ನಿರ್ದೇಶನದಂತೆ ಬಿಇಒ ಅವರು ಹೊನ್ನಾಪುರ ಅನುದಾನಿತ ಪ್ರೌಢಶಾಲೆಗೆ ಭೇಟಿ ನೀಡಿ, ಅವರೇ ಮುಂದೆ ನಿಂತು ರಿಪೇರಿ ಆಗಿರುವ ಸುಸಜ್ಜಿತ ಕೊಠಡಿಗೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ, ಅಲ್ಲಿಯೇ ಮಕ್ಕಳಿಗೆ ಪಾಠ ಮಾಡುವಂತೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಧಾರವಾಡದ ಬೆಣಚಿ ಪ್ರೌಢಶಾಲೆ

“ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ಅನಾನುಕೂಲ ಮತ್ತು ಅಸುರಕ್ಷತೆ ಉಂಟಾದರೆ ಶಾಲೆಯ ಮೇಲೆ ಸೂಕ್ತ ಕ್ರಮಕ್ಕೆ ಶಿಪಾರಸು ಮಾಡಲಾಗುತ್ತದೆ. ಹಿಂದಿನಿಂದ ಸಂಸ್ಥೆಯವರು ಶಾಲೆಯನ್ನು ಉತ್ತಮವಾಗಿ ನಿರ್ವಹಿಸಿದ್ದರೂ, ಉತ್ತಮ ಗುಣಮಟ್ಟದ ಮೂಲಸೌಕರ್ಯ ಕಲ್ಪಿಸುವಲ್ಲಿ ಕೊರತೆ ಉಂಟಾಗುತ್ತಿದೆ. ಈ ಕುರಿತು ತುರ್ತು ಕ್ರಮವಹಿಸಬೇಕು” ಎಂದು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಿಗೆ ಸೂಚಿಸಿದರು.

ಬೆಣಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅನಿರೀಕ್ಷಿತ ಭೇಟಿ: ದುರಸ್ತಿ ಪೂರ್ಣಗೊಳ್ಳದ ಕೊಠಡಿಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಯ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ನಡೆಸುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬಿಇಒ ಸದಲಗಿ ಅವರು ಬೆಣಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ಬೆಳಿಗ್ಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲಿಸಿದರು.

ಧಾರವಾಡದ ಬೆಣಚಿ ಪ್ರೌಢಶಾಲೆ 2

“ಮಕ್ಕಳನ್ನು ಬೇರೆಡೆ ಸ್ಥಳಾಂತರಿಸಿ, ಮುಂದಿನ ಎರಡು ದಿನದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಬಳಕೆಗೆ ನೀಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ದೈಹಿಕ ಆರೋಗ್ಯಕ್ಕೆ ಯೋಗ ಪೂರಕ : ರೇಷ್ಮಾ ಕೌರ್

“ಕಟ್ಟಡ ಕಾಮಗಾರಿ ವಿಳಂಬ, ಅಪೂರ್ಣವಾದ ಬಗ್ಗೆ ಮೇಲಧಿಕಾರಿಗಳಿಗೆ ಮಾಹಿತಿ ನೀಡದ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯತ್‌ ಸಿಇಒ ಆದೇಶದ ಮೇರೆಗೆ ಶಾಲೆಯ ಮುಖ್ಯ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುವುದು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್‍ಡಿಎಂಸಿ ಅಧ್ಯಕ್ಷ ಸುರೇಶ ಹಾಗೂ ಬೆಣಚಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ನಾಗರಾಜ ಹಾಗೂ ಕೆಆರ್‌ಐಡಿಎಲ್ ಎಇಇ ಅನ್ನಪೂರ್ಣ ಮತ್ತು ಶಿಕ್ಷಣ ಸಂಯೋಜಕ ಬಸವರಾಜ ಛಬ್ಬಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...