ಧಾರವಾಡ | ಬುದ್ಧನ ಮಾರ್ಗವೊಂದೇ ಶಾಶ್ವತ ಶಾಂತಿಯ ದಾರಿ: ಉಪನ್ಯಾಸಕಿ ಪುಟ್ಟಮಣಿ

Date:

ದ್ವೇಷದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಪ್ರೀತಿ, ಸೌಹಾರ್ದತೆಯಿಂದ ಬದುಕುವುದೊಂದೇ ಶಾಂತಿಯ ಮಾರ್ಗ ಎನ್ನುವ ಬುದ್ಧನ ತತ್ವವನ್ನು ಅಳವಡಿಸಿಕೊಳ್ಳುವುದು ಇಂದಿಗೆ ತೀರಾ ಅಗತ್ಯ ಎಂದು ಉಪನ್ಯಾಸಕಿ ಡಾ. ಪುಟ್ಟಮಣಿ ದೇವಿದಾಸ ಹೇಳಿದರು.

ಧಾರವಾಡ ನಗರದ ಆಲೂರು ವೆಂಕಟರಾವ್ ಸಭಾ‌ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಬುದ್ಧರು ನಮಗೆ ಸತ್ ಸಂಗತಿಗಳನ್ನು ಬೋಧನೆ ಮಾಡಿದ್ದಾರೆ. ಅದನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡರೆ ಬುದ್ಧ ಜಯಂತಿ ಮಾಡುವುದಕ್ಕೂ ಅರ್ಥವಿರುತ್ತದೆ. ಭಗವಾನ್ ಎಂದರೆ ದೇವರಲ್ಲ. ಬುದ್ಧ ದೇವರು, ಧರ್ಮದಲ್ಲಿ ನಂಬಿಕೆ ಇಟ್ಟಿರಲಿಲ್ಲ. ಬುದ್ಧ ಧಮ್ಮದಲ್ಲಿ ಸ್ವರ್ಗ ನರಕಗಳ ಕಲ್ಪನೆಯಿಲ್ಲ. ಅಂತಹ ವಿಷಯ ಬಂದಾಗ ಗೊತ್ತಿಲ್ಲ ಎಂದು ಉತ್ತರಿಸಿದ್ದರು. ಅವರು ಅಹಿಂಸೆ, ಸತ್ಯತೆಯನ್ನು ಬೋಧಿಸಿದವರು. ಇತ್ತೀಚೆಗೆ ಅಧರ್ಮ, ಹಿಂಸೆಯು ತಾಂಡವವಾಡುತ್ತಿದೆ. ನಮ್ಮ ಜೀವನದಿಂದ ಶಾಂತಿ ಮತ್ತು ಅಹಿಂಸೆಯು ದೂರ ಹೋಗುತ್ತಿದೆ. ಆತ್ಮ ಜಾಗೃತಿ ಮತ್ತು ಸ್ವಯಂ ಜಾಗೃತಿಯಲ್ಲಿ ಮನಸ್ಸಿಗೆ ಶಾಂತಿ ಸತ್ಯತೆ ದೊರೆಯುತ್ತದೆ. ಜಗತ್ತಿಗೆ ಶಾಂತಿ, ಅಹಿಂಸೆಯ ಸಂದೇಶವನ್ನು ಸಾರೋಣ, ಇಡೀ ವಿಶ್ವವನ್ನೇ ಬೆಳಗೋಣ. ಕೋಪ, ತಾಪ, ಮೋಹ, ರಾಗ, ದ್ವೇಷ ಎಲ್ಲವನ್ನೂ ಬಿಟ್ಟು ಒಳ್ಳೆಯ ವಿಚಾರಗಳನ್ನು ಮಾಡಿ, ಅದರಿಂದ ಜೀವನ ಸುಂದರವಾಗಿಸಿಕೊಳ್ಳಬೇಕು” ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ ಡಿ ಮಾತನಾಡಿ, “ನಮ್ಮ ಜೀವನದಲ್ಲಿ ಬುದ್ಧರ ಏಕಾಗ್ರತೆ, ತತ್ವ, ಬೋಧನೆಗಳನ್ನು ಬೆಳೆಸಿಕೊಂಡರೆ, ಜೀವನ ಸರಳ ರೀತಿಯಲ್ಲಿ ಸುಂದರವಾಗಿರುತ್ತದೆ. ನಮಗೆ ಬುದ್ಧರ ಬೋಧನೆಗಳು ಅತ್ಯವಶ್ಯಕ ಇವೆ. ಅವರು ತೋರಿಸಿಕೊಟ್ಟ ಮಾರ್ಗದಲ್ಲಿ ಮುಂದೆ ನಡೆಯೋಣ. ಏಕಾಗ್ರತೆ ಎಂಬುದು ಮನುಷ್ಯನಿಗೆ ಬಹಳ ಮುಖ್ಯವಾದ ಸಂಗತಿ. ಮನೆಯಲ್ಲಿ ತಾಯಂದಿರು ಮಕ್ಕಳಿಗೆ ಬುದ್ಧರು ಬೋಧಿಸಿರುವ ತಾಳ್ಮೆ, ಏಕಾಗ್ರತೆ ಶಾಂತಿಯನ್ನು ತಿಳಿಸಿ, ಬೆಳೆಸುವ ಪ್ರಯತ್ನ ಮಾಡಬೇಕು ಮತ್ತು ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಿಗೆ ಭಗವಾನ ಬುದ್ಧರ ಬೋಧನೆಗಳನ್ನು ಹೇಳುವ ಮೂಲಕ ಅವರಲ್ಲಿ ನೈತಿಕ ಜಾಗೃತಿಯ ಬಗ್ಗೆ ಅರಿವು ಮೂಡಿಸಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಧಾರವಾಡ | ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ; 10 ಮಂದಿ ವಿರುದ್ಧ ದೂರು

ಕಾರ್ಯಕ್ರಮದಲ್ಲಿ ಪಬ್ಬಜ್ಜೊರವಿತಿಪಾಲಿಮುನಿಯೊ, ಬಂತೇಜಿ ಧಮ್ಮ ವೀರ, ಈಶ್ವರೀಯ ವಿಶ್ವವಿದ್ಯಾಲಯದ ನಂದಿನಿ ಬಿ ಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಅನಿಲ್ ಮೇತ್ರಿ ಹಾಗೂ ವೃಂದ, ಆರತಿ ದೇವಶಿಖಾಮಣಿ, ಹಿಪ್ಪರಗಿ ಸಿದ್ದರಾಮ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...