ಧಾರವಾಡ | ಬುದ್ಧ ಜಯಂತಿ ವೇಳೆ ಗದ್ದಲ; ಅಂಬೇಡ್ಕರ್ ಭಾವಚಿತ್ರ ಹಾಕದ್ದಕ್ಕೆ ಪರಮೇಶ ಕಾಳೆ ಆಕ್ರೋಶ

Date:

ಬುದ್ಧ ಜಯಂತಿ ವೇಳೆ ಅಂಬೇಡ್ಕರ್ ಭಾವಚಿತ್ರ ಹಾಕದಿದ್ದಕ್ಕೆ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತ ಪರಮೇಶ ಕಾಳೆ ಮತ್ತು ಧಾರವಾಡದ ಬುದ್ಧಿಷ್ಠ ಪಾಲಿ ಎಜ್ಯುಕೇಶನ್ ಮತ್ತು ರಿಸರ್ಚ್‌ ಟ್ರಸ್ಟ್‌ನ ಅಧ್ಯಕ್ಷ ಪಬ್ಬಜ್ಜೊರವಿತಿಪಾಲಿಮುನಿಯೊ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು.

ಧಾರವಾಡ ಪಟ್ಟಣದ ಆಲೂರು ವೆಂಕಟರಾವ್ ಸಭಾಭವನದಲ್ಲಿ ನಡೆದ ಬುದ್ಧ ಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ ಪರಮೇಶ ಕಾಳೆ ಮಧ್ಯ ಪ್ರವೇಶಿಸಿ ಅಂಬೇಡ್ಕರ್ ಭಾವಚಿತ್ರ ಏಕೆ ಅಳವಡಿಸಿಲ್ಲ ಎಂದು ಪ್ರಶ್ನಿಸಿದಾಗ; ವೇದಿಕೆ ಮೇಲಿದ್ದ ಅಪರ ಜಿಲ್ಲಾಧಿಕಾರಿ ಗೀತಾ ಸಿ ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕುಮಾರ್ ಬೆಕ್ಕೇರಿ ಮತ್ತು ಇನ್ನಿತರರು ಇದು ಬುದ್ಧ ಜಯಂತಿ ಮತ್ತು ಸರ್ಕಾರದ ಸುತ್ತೋಲೆ ಪ್ರಕಾರ ಈ ಕಾರ್ಯಕ್ರಮ ನಡೆಯುತ್ತಿದೆ ಎಂದು ಉತ್ತರಿಸಿದರು.

ಪರಮೇಶ ಕಾಳೆ ಸುಮ್ಮನಿರದೆ ಪಬ್ಬಜ್ಜೊರವಿತಿಪಾಲಿಮುನಿಯೊ ಅವರ ಸಹೋದರರ ಬಳಿ ಬಂದು ಮಾತಿನ ಚಕಮಕಿ ಶುರುಮಾಡಿಕೊಂಡಾಗ; ವೇದಿಕೆ ಮೇಲಿದ್ದ ಪಬ್ಬಜ್ಜೊರವಿತಿಪಾಲಿಮುನಿಯೊ ಕೆಳಗಿಳಿದು ಬಂದು ಪರಮೇಶ ಅವರ ಕೊರಳಪಟ್ಟಿ ಹಿಡಿದ ಪರಿಣಾಮ ಕೋಪಗೊಂಡ ಪರಮೇಶ ತನ್ನ ಬೆಂಬಲಿಗರೊಂದಿಗೆ ಸಭಾಭವನದ ಮುಂದೆ ನಿಂತು ಪ್ರತಿಭಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಪರಮೇಶ ಕಾಳೆ ಮಾತನಾಡುತ್ತಾ, “ಅದ್ಹೇಗೆ ನನ್ನ ಕೊರಳಪಟ್ಟಿ ಹಿಡಿದರು? ಎಂದು ಪ್ರಶ್ನಿಸುತ್ತಾ! ಬುದ್ಧ ಜಯಂತಿ ವೇಳೆ ಅಂಬೇಡ್ಕರ್ ಭಾವಚಿತ್ರ ಏಕೆ ಹಾಕುವುದಿಲ್ಲ? ಬುದ್ಧ ನಮಗೆ ಪರಿಚಯ ಆಗಿದ್ದೆ ಅಂಬೇಡ್ಕರ್ ಅವರಿಂದ. ಅದನ್ನು ಕೇಳಿದ್ದಕ್ಕೆ ನನ್ನ ಕೊರಳಪಟ್ಟಿ ಹಿಡಿಯುತ್ತಾರೆ. ಇದರಿಂದ ನನಗೆ ಅವಮಾನವಾಗಿದೆ ಎಂದು ಅವಾಚ್ಯ ಶಬ್ಧಗಳಿಂದ ಬೈಯತೊಡಗುತ್ತಾರೆ” ಎಂದರು.

ನಾಲ್ಕೈದು ಮಂದಿ ಪೊಲೀಸರ ಕಣ್ಣಮುಂದೆಯೇ ಈ ಎಲ್ಲ ಘಟನೆ ನಡೆಯಿತು. ಈ ಸಂದರ್ಭದಲ್ಲಿ ಪೊಲೀಸರು ಮೂಖ ಪ್ರೇಕ್ಷಕರಾಗಿದ್ದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕಾರ್ಮಿಕ ಸಂಹಿತೆ, ನೀತಿಗಳ ವಿರುದ್ಧ ಬಲಿಷ್ಠ ಹೋರಾಟದ ಅಗತ್ಯವಿದೆ: ಸುನಂದಾ ಎಚ್ ಎಸ್

“ಹಳೆ ವೈಷಮ್ಯ ಕೂಡಾ ಈ ರೀತಿ ಜಗಳವಾಗಲು ಕಾರಣವೆಂದು ಅಲ್ಲಿದ್ದವರು ಮಾತನಾಡುತ್ತಿದ್ದರು. ನಂತರ ಅಲ್ಲಿದ್ದ ಬುದ್ಧ-ಅಂಬೇಡ್ಕರ್ ಅನುಯಾಯಿಗಳೆಲ್ಲ ಸೇರಿ ಸಮಾಧಾನಪಡಿಸಿ, ರಾಜೀ ಸಂದಾನ ಮಾಡಿಸಿದರು. ನಾವೆಲ್ಲರೂ ಒಂದೇ ಆಗಿದ್ದು, ಅಂಬೇಡ್ಕರ್ ಮತ್ತು ಬುದ್ಧನ ವಿಚಾರದಲ್ಲಿ ಜಗಳವಾಡಬಾರದು. ಸರ್ವರೂ ಒಗ್ಗಟ್ಟಿನಿಂದ ನಡೆದಾಗ ಮಾತ್ರ ದೇಶ ಗಟ್ಟಿಯಾಗಿ ಕಟ್ಟಲು ಸಾಧ್ಯ” ಎಂದು ಹೊಸಮನಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...