ಧಾರವಾಡ | ಶರಣರಿಗೆ ಜಾತಿ, ಶ್ರೀಮಂತಿಕೆ, ಬಡತನ ಮುಖ್ಯ ಆಗುವುದಿಲ್ಲ: ಮಲ್ಲಿಕಾರ್ಜುನ ಸ್ವಾಮೀಜಿ

Date:

ಶರಣರಿಗೆ ಜಾತಿ, ಶ್ರೀಮಂತಿಕೆ, ಬಡತನ ಮುಖ್ಯ ಆಗುವುದಿಲ್ಲ, ಮನುಷ್ಯ ಜಾತಿ ಒಂದೇ ಎಂದು ಬದುಕುತ್ತಾರೆ. ಶರಣರು ಸಮಾಜದ ಸಮಾನತೆ ಹಾಗೂ ಸಹೋದರತ್ವದ ಬಾಳನ್ನು ಜೀವಿಸಿದ ಮಹಾನ್ ವ್ಯಕ್ತಿಗಳಾಗಿದ್ದಾರೆ. ಅಪ್ಪಣ್ಣವರ ಸಂದೇಶಗಳನ್ನು ಬಸವಣ್ಣವರು ಚಾಚು ತಪ್ಪದೇ ಪಾಲಿಸುತ್ತಿದ್ದರು ಎಂದು ಮುರುಘಾಮಠದ ಡಾ. ಮಲ್ಲಿಕಾರ್ಜುನ ಸ್ವಾಮಿಗಳು ಅಭಿಪ್ರಾಯಪಟ್ಟರು.

ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿದ್ದ ಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನೂರಾರು ವರ್ಷ ಕಳೆದರೂ ಹಡಪದ ಅಪ್ಪಣ್ಣನವರ ವ್ಯಕ್ತಿತ್ವ, ಆದರ್ಶ ಮತ್ತು ಸಮಾಜಕ್ಕೆ ಕೊಟ್ಟ ವಚನ ಸಾಹಿತ್ಯದಿಂದಾಗಿ ಅವರನ್ನೂ ಇಂದಿಗೂ ಸ್ಮರಿಸುವುದು ಅಗತ್ಯವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಜ್ಯೋತಿ ವಿನಯ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಹಡಪದ ಸಮಾಜವು ಸಣ್ಣ ಸಮುದಾಯವಾಗಿದ್ದರೂ, ದೊಡ್ಡ ಸಂಘಟನೆಯಾಗಿ ಸಮಾಜದಲ್ಲಿ ಬೆಳೆದಿರುವುದು ಸಂತಸದ ಸಂಗತಿ. ಶರಣ ಪರಂಪರೆಯ ಅಗ್ರಗಣ್ಯ ಶರಣ ಹಡಪದ ಅಪ್ಪಣ್ಣ ಕಾಯಕ ಯೋಗಿಯಾಗಿ ಅನೇಕ ಅನುಭವದ ವಚನಗಳನ್ನು ಬರೆದಿದ್ದಾರೆ. ಸಮಾಜದಲ್ಲಿ ವಿವಿಧ ಸಮುದಾಯಗಳ ಜನರು ಇರುವದರಿಂದ ಯಾವುದೇ ರೀತಿಯ ಧರ್ಮ, ಜಾತಿ, ಮತ, ಪಂಥಗಳ ಭೇದವಿಲ್ಲದೇ ಎಲ್ಲರೂ ಸಮಾನರಾಗಿ, ಸಾಮರಸ್ಯದಿಂದ ಬಾಳಬೇಕು” ಎಂದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ ಡಿ ಮಾತನಾಡಿ, “12ನೇ ಶತಮಾನವೆಂದರೆ ಎಲ್ಲ ವಚನಕಾರರು ನೆನಪಾಗುತ್ತಾರೆ. ಯಾವುದೇ ಜಾತಿ, ಧರ್ಮ, ಮತ, ಪಂಥ ಎನ್ನದೆ ಸರ್ವಧರ್ಮ ಸರ್ವಪಾಲು ಎಂದು ಶರಣರೆಲ್ಲ ಜೀವನ ನಡೆಸಿದವರು. ಅವರ ವಚನಗಳು ನಮ್ಮ ಜೀವನಕ್ಕೆ ಧೇಯ್ಯ ವಾಕ್ಯಗಳಾಗಿವೆ” ಎಂದರು.

“ಶರಣರು ಜನಸಾಮಾನ್ಯರ ಜೀವನ ಮಟ್ಟವನ್ನು ಉನ್ನತಗೊಳಿಸುವ ನಿಟ್ಟಿನಲ್ಲಿ ಸೇವಾ ಕಾರ್ಯಗಳನ್ನು ನಡೆಸಿದವರು. ಜನರಲ್ಲಿ ಶ್ರದ್ಧೆ, ನೀತಿ ಮತ್ತು ಶುದ್ಧ ಜೀವನವನ್ನು ಪ್ರಚೋದಿಸಿದರು. ಕರ್ಮ ಮತ್ತು ಭಕ್ತಿಯ ಸಂಯೋಜನೆಯ ಮೂಲಕ ಸಮುದಾಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಹರಡಿಸಿದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಜು 14 ರಂದು ಸೌಹಾರ್ದ ಸಂಚಾರ, ಮಸೀದಿಯಿಂದ ಚರ್ಚ್ ವರೆಗೆ ಕಾಲ್ನಡಿಗೆ ಜಾಥಾ

ಕಾರ್ಯಕ್ರಮದಲ್ಲಿ ಧಾರವಾಡ ಕೆ ಇ ಬೋರ್ಡ್ ಪ್ರೌಢ ಶಾಲಾ ಶಿಕ್ಷಕ ಸಂಗಮೇಶ ಹಡಪದ ಶಿವಶರಣ ಅವರು ಹಡಪದ ಅಪ್ಪಣ್ಣನವರ ಜೀವನ ಹಾಗೂ ಸಾಮಾಜಕ್ಕೆ ‌ನೀಡಿದ ಅವರ ಕೊಡುಗೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ರವಿ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...