ಧಾರವಾಡ | ಮಕ್ಕಳಲ್ಲಿ ಮೊಬೈಲ್‍ಗಿಂತ ಮುಖ್ಯವಾಗಿ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕಿದೆ: ಸಂಜು ಧುಮುಕನಾಳ

Date:

ಮಕ್ಕಳಲ್ಲಿ ಮೊಬೈಲ್‍ಗಿಂತ ಮುಖ್ಯವಾಗಿ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕಿದೆ. ಮೊಬೈಲ್‍ನಿಂದ ಉಂಟಾಗುವ ಕೆಟ್ಟ ಪರಿಣಾಮಗಳನ್ನು ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದು ಕರ್ನಾಟಕ ಸಂಗ್ರಾಮ ಸೇನೆ ರಾಜ್ಯಾಧ್ಯಕ್ಷ ಸಂಜು ಧುಮುಕನಾಳ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕುಂಕೂರು ಗ್ರಾಮದಲ್ಲಿ ಕರ್ನಾಟಕ ಸಂಗ್ರಾಮ ಸೇನೆ, ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಪ್ರಯುಕ್ತದ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೊಬೈಲ್‌ನಿಂದ ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳು ಕಡಿಮೆಯಾಗುತ್ತಿವೆ. ನಮ್ಮ ಕೆಲಸ ಕಡಿಮೆ ಆಗಿದ್ದಾವೆ. ಚಿಂತನೆ ಹೆಚ್ಚಾಗಿವೆ. ನಮ್ಮ ಬದುಕಿನ ಜೊತೆಗೆ ಆಟ ಮತ್ತು ನಮ್ಮ ಸಂಸ್ಕೃತಿ ಉಳಿಸುವಲ್ಲಿ ಕಾರ್ಯ ಮಾಡಬೇಕು. ಜನಪದ ಸಂಸ್ಕೃತಿಯನ್ನು ಪುನಃ ಜಾರಿಗೆ ತರಬೇಕಿದೆ. ಮಕ್ಕಳಿಗೆ ಮೊಬೈಲ್‍ಗಿಂತ ಮುಖ್ಯವಾಗಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಪಾಲಕರು ಬೆಳೆಸಬೇಕಿದೆ ಎಂದರು.

ಕುಂದಗೋಳ ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲೋಕೇಶ ಸರಾವರಿ ಮಾತನಾಡಿ, ಶಿಕ್ಷಕರೆಂದರೆ ಮೊದಲಿನಂತಿಲ್ಲ. ಮೊದಲು ಶಿಕ್ಷಕರೆಂದರೆ ಅಪಾರ ಗೌರವ ಕೊಡುತ್ತಿದ್ದರು. ಆದರೆ; ಇತ್ತೀಚಿನ ದಿನಗಳಲ್ಲಿ ಶಿಕ್ಷಕ ಎಂದರೆ ನಮ್ ಫ್ರೇಂಡ್ ಎನ್ನುತ್ತಾರೆ. ಇನ್ನು ಶಿಕ್ಷಕವೃತ್ತು ಅಂದುಕೊಂಡಷ್ಟು ಸುಲಭವಿಲ್ಲ. ಎಲ್ಲವನ್ನೂ ನಿಭಾಯಿಸಿಕೊಂಡು ಸಾಗುತ್ತಾರೆ. ವಿದ್ಯಾರ್ಥಿಗಳು ಶಿಕ್ಷಕರಿಗೆ ಮೊದಲು ಗೌರವಿಸುವುದನ್ನು ಕಲಿಯಬೇಕು. ಗುರುವಿಗ ಬಹಳ ಮಹತ್ವವಿದೆ. ಅದು ಇತ್ತೀಚೆಗೆ ಕಡಿಮೆಯಾಗುತ್ತಿದೆ ಎನಿಸುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ಧಿ ಓದಿದ್ದೀರಾ? ಧಾರವಾಡ | ಕಳ್ಳರನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು; ವಿಡಿಯೋ ವೈರಲ್!

ಗ್ರಾಮಸ್ಥರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯೆ ಭವಾನಿ ಮೊಗೆರ್, ಸೀಮಾ, ಸುನಿತಾ, ಸುಮಂಗಲ, ಮಂಜುನಾಥ್, ಪಕ್ಕಿರೇಶ್ ಶಿಕ್ಷಕರಿಗೆ ಕರ್ನಾಟಕ ಸಂಗ್ರಾಮ ಸೇನೆಯ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ ಮಂಜುನಾಥ್ ದೊಡ್ಡಮನಿ, ಮಹಿಳಾ ಜಿಲ್ಲಾಧ್ಯಕ್ಷೆ ರತ್ನ ಗಿಡ್ಡಿವೀರಣ್ಣರ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಮಹಾದೇವಿ ವಿವೇಕಿ, ತಾಲೂಕ ಅಧ್ಯಕ್ಷ ಹಸನ್ ಸಾಬ್, ಉಪಾಧ್ಯಕ್ಷ ಪರಮೇಶ್ ವಾಲಿಕಾರ್, ಗೌರವ ಅಧ್ಯಕ್ಷ ಗೋವಿಂದ್ ರಾವ್ ದೇಶ್ಪಾಂಡೆ, ಕಾರ್ಯದರ್ಶಿ ಮಲ್ಲಿಕಾರ್ಜುನ್ ವೀರಪ್ಪನವರ, ಸದಸ್ಯರಾದ ರಮೇಶ್ ಕುಂಬಾರ, ವಿರೂಪಾಕ್ಷ ಹೂಗಾರ, ರಾಘವೇಂದ್ರ ಇಚ್ಚಂಗಿ, ಫಕ್ರುಸಾಬ್ ನದಾಫ್, ಮಹೇಶ್ ಗೌಡರ ಹಾಗೂ ಗ್ರಾಮದ ಸಮಸ್ತ ಹಿರಿಯರು, ಯುವಕರು, ವಿದ್ಯಾರ್ಥಿಗಳು, ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...