ಜಿ ರಾಮ್ ಜಿ ಮಸೂದೆಯನ್ನು ತಿರಸ್ಕರಿಸಿ ಮನರೇಗಾ ಉಳಿಸಿ ಎಂಬ ಘೋಷವಾಕ್ಯದಲ್ಲಿ ಕಾರ್ಮಿಕರು ಮತ್ತು ಯಾವುದೆ ಕಾರ್ಮಿಕ ಗುಂಪುಗಳ ಜೊತೆ ಸಮಾಲೋಚನೆ ನಡೆಸದೆ ರಚಿಸಿದ ವಿಬಿ ಜಿ ರಾಮ್ ಜಿ ಮಸೂದೆಯು ಮನರೇಗಾ 2025 ಅನ್ನು ಪೂರ್ಣ ಪ್ರಮಾಣದಲ್ಲಿ ಕಿತ್ತೊಗೆಯುವ ಹುನ್ನಾರವಾಗಿದೆ. ಉದ್ಯೋಗ ಖಾತ್ರಿಯನ್ನು ಕೇಂದ್ರ ಸರಕಾರದ ಬಿಗಿ ಮುಷ್ಟಿಯಿಂದ ಕೇಂದ್ರಿಕೃತ, ವಿವೇಚನಾಯುಕ್ತ, ಬಜೆಟ್ ನ್ನು ನಿಯಂತ್ರಿಸುವ ಯೋಜನೆಯನ್ನಾಗಿ ಬದಲಾಯಿಸಲು ಹೊರಟಿದೆ. ಇದು ಬಡವರ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನವಾಗಿದೆ. ಮತ್ತು ಮನರೇಗಾ ಅನ್ನು ಮುಚ್ಚಿಹಾಕಿದರೆ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಸಂಚಾಲಕಿ ನಿಂಗಮ್ಮ ಸವಣೂರು ಹೇಳಿದರು.
ಈ ಕುರಿತು ಧಾರವಾಡದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿದ್ದರು. ನಂತರ ಈದಿನ.ಕಾಮ್ ಜತೆಗೆ ಮಾತನಾಡಿದ ಅವರು, ಜಿ ರಾಮ್ ಜಿ ಮಸೂದೆಯ ಪ್ರಕಾರ ಪ್ರತಿ ವರ್ಷ ರಾಜ್ಯವಾರು “ಬಜೆಟ್ ಹಂಚಿಕೆಯನ್ನು ಕೇಂದ್ರ ಸರಕಾರ ನಿರ್ಧರಿಸುತ್ತದೆ ಹಾಗೂ ಯಾವುದೆ ಹೆಚ್ಚುವರಿ ವೆಚ್ಚವನ್ನು ರಾಜ್ಯ ಸರಕಾರಗಳೇ ಭರಿಸಬೇಕು. ಎನ್ನಲಾಗಿದೆ. ಪ್ರತಿ ರಾಜ್ಯದಲ್ಲಿ ಒದಗಿಸಲಾಗುವ ಮಾನವ ದಿನಗಳ ಸಂಖ್ಯೆಯ ಮೇಲೆ ಮಿತಿಯನ್ನು ಹೇರುತ್ತದೆ. ಈಗಿರುವ ಬಜಟ್ನಲ್ಲಿ ಕೇಂದ್ರ ಸರಕಾರವು ಪ್ರತಿ ಕುಟುಂಬಕ್ಕೆ ವರ್ಷಕ್ಕೆ 50 ದಿನಗಳ ಕೆಲಸವನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಬಜೆಟ್ನ್ನು ಕೇಂದ್ರ ಸರಕಾರವೆ ಮಿತಿಗೊಳಿಸುತ್ತ ಹಣವನ್ನ ಸಂಗ್ರಹಿಸಲು ರಾಜ್ಯಗಳ ಮೇಲೆ ಇನ್ನಷ್ಟು ಹಣದ ಹೊರ ಹಾಕುವ ಮೂಲಕ ಬಿಜೆಪಿ ಸರಕಾರ 125 ದಿನಗಳ ಉದ್ಯೋಗದ ಹುಸಿ ಭರವಸೆ ನೀಡುತ್ತಿದೆ.
ಬಂಡವಾಳಶಾಹಿಗಳನ್ನು ಮಾತ್ರವೇ ಬದುಕಿಸುವ ಮತ್ತು ಕ್ರಮೇಣವಾಗಿ ಬಡ ಕೂಲಿ ಕಾರ್ಮಿಕರು ಪ್ಯಾಕ್ಟರಿಗಳಿಗೆ ಕೆಲಸ ಕೇಳಿಕೊಂಡು ಹೋಗುವ ವಾತಾವರಣ ಸೃಷ್ಟಿಸಲು ಉದ್ಯೋಗ ಖಾತ್ರಿ ಯೋಜನೆಯನ್ನು ಸಂಪೂರ್ಣವಾಗಿ ಇಲ್ಲವಾಗಿಸುವ ಹುನ್ನಾರವಾಗಿದೆ. ಮತ್ತು ಈ ಮೂಲಕ ಮಹಾತ್ಮಾ ಗಾಂಧೀಜಿ ಹೆಸರನ್ನೂ ಕೂಡ ತೆಗೆದುಹಾಕಲಾಗಿದೆ. ಈ ಮೂಲಕ ಬಡ ಕೂಲಿ ಕಾರ್ಮಿಕರನ್ನು ನಾಶ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಹಾಗೂ ಉದ್ಯೋಗ ಸೃಷ್ಟಿ ಮಾಡುವ ಪ್ರಧಾನಿಯವರು ಉದ್ಯೋಗವನ್ನು ಕಿತ್ತುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ ಧಾರವಾಡ | ಮನರೇಗಾ ಯೋಜನೆಗೆ ಮರಣ ಶಾಸನವಾದ ‘ಜಿ ರಾಮ ಜಿ ಮಸೂದೆ’ಯ ಪ್ರತಿ ಸುಟ್ಟು ಪ್ರತಿಭಟನೆ
ವರ್ಷದಲ್ಲಿ ಎರಡು ತಿಂಗಳು ಕೆಲಸ ನಿರಾಕರಿಸುವುದರಿಂದ ಮಹಿಳೆಯರು, ಭೂಹಿನರು ಮತ್ತು ಇತರೆ ಅಂಚಿನಲ್ಲಿರುವ ಸಮುದಾಯಗಳ ಉದ್ಯೋಗದ ಹಕ್ಕಿನಿಂದ ವಂಚಿತರಾಗುತ್ತಾರೆ. ಕಾಮಗಾರಿಗಳನ್ನು ಕೇಂದ್ರ ಸರಕಾರ ತಾನೆ ನಿರ್ಧರಿಸುವ ಮೂಲಕ ಗ್ರಾಮ ಸಭೆಗಳನ್ನು ದರ್ಬಲಗೊಳಿಸಿದೆ. ಕಾರ್ಮಿಕರ ಹಕ್ಕುಗಳನ್ನು ನಿರಾಕರಿಸುವ ಹಾಗೂ ಗ್ರಾಮ ಪಂಚಾಯತಗಳನ್ನು ದುರ್ಬಲ ಪಡಿಸುವ ಮೂಲಕ ಸಾಮಾಜಿಕ ನ್ಯಾಯವನ್ನೆ ಅಣಕಿಸುವ ಈ ಮಸೂದೆಯನ್ನು ನಾವು ತಿರಸ್ಕರಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.





