ಧಾರವಾಡ | ರಂಗ ಲೋಕವನ್ನು ಸದಾ ಜೀವಂತವಾಗಿರಿಸಲು ಬದ್ಧ: ರಾಜು ತಾಳಿಕೋಟಿ

Date:

ಉತ್ತರ ಕರ್ನಾಟಕದಾದ್ಯಂತ ನಾಟಕ ಚಟುವಟಿಕೆಗಳನ್ನು ನಿರಂತರ ನಡೆಸಿ ರಂಗ ಲೋಕವನ್ನು ಜೀವಂತವಾಗಿರಿಸಲು ಬದ್ಧವಾಗಿದ್ದೇನೆ ಎಂದು ಧಾರವಾಡ ರಂಗಾಯಣ ನಿರ್ದೇಶಕ ರಾಜು ತಾಳಿಕೋಟೆ  ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ಮಕ್ಕಳ ಮತ್ತು ಆಧುನಿಕ ಕನ್ನಡ ರಂಗಭೂಮಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ಸಾಂಸ್ಕೃತಿಕ  ಚಳುವಳಿಗೆ ಧಾರವಾಡದ ಪರಿಸರ ಫಲವತ್ತಾದ ನೆಲ ಎಂಬುದು ನನ್ನ ಮನವರಿಕೆಗೆ ಬಂದಿದೆ. ನಿರಂತರ ರಂಗಕ್ರಿಯೆಗಳನ್ನು ನಡೆಸಿ, ನಾಟಕೋತ್ಸವ ಮುಂದುವರೆಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ನಾಟಕ ಅಕಾಡೆಮಿ ಸದಸ್ಯೆ ಗಾಯತ್ರಿ ಹಡಪದ ಮಾತನಾಡಿ, ಮರಾಠಿ ನಾಟಕಗಳ ವಿಪರೀತ ಹಾವಳಿಯ  ವಿರುದ್ಧ ಸಿಡಿದೆದ್ದು ಶೂನ್ಯ ಸ್ಥಿತಿಯಲ್ಲಿದ್ದ ಕನ್ನಡ ರಂಗಭೂಮಿಗೆ ಅಪಾರವಾಗಿ ಶ್ರಮಿಸಿದ ಸಕ್ರಿ ಬಾಳಾಚಾರ್ಯ ಕಷ್ಟಪಟ್ಟ ಪರಿ ಅಮೋಘ ಮತ್ತು ಅವಿಸ್ಮರಣೀಯ ಎಂದರು. ದತ್ತಿದಾನಿಗಳಲ್ಲೊಬ್ಬರಾದ ಹಿರಿಯ ಸಾಹಿತಿ ಡಾ.ಶಶಿಧರ ನರೇಂದ್ರ ಮಾತನಾಡಿ, ಸಾಹಿತ್ಯ, ಸಂಗೀತ, ನೃತ್ಯ, ಚಿತ್ರಕಲೆಗಳ ಸಂಗಮ ಎಂದೇ ಪ್ರಸಿದ್ಧಿಯಾದ  ಧಾರವಾಡ ಎಲ್ಲ ಲಲಿತಕಲೆಗಳ ಸಮಾಗಮವಾದ ರಂಗಭೂಮಿಯ ನಿಜವಾದ ತವರೂರು ಸಹ ಹೌದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕ. ಸಾ. ಪ. ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಮಾತನಾಡಿ, ರಾಜ್ಯೋತ್ಸವದ ತಿಂಗಳಿನಲ್ಲಿ ಅರ್ಥಗರ್ಭಿತ ಮತ್ತು ಸೃಜನಾತ್ಮಕ ಕಾರ್ಯಕ್ರಮಗಳನ್ನು ಸಂಘಟಿಸಿ ಎಲ್ಲರೊಳಗೆ ಕನ್ನಡಜ್ಯೋತಿ ಬೆಳಗುವ ಉದ್ದೇಶವನ್ನು ಕ.ಸಾ.ಪ ಹೊಂದಿದೆ ಎಂದರು.

ಮಕ್ಕಳಲ್ಲಿ ಉತ್ತಮ ಸಂಸ್ಕೃತಿ ಬೆಳೆಸಿ ಅವರನ್ನು ಸರಿದಾರಿಯಲ್ಲಿ ಮುನ್ನಡೆಸುವ ಹೊಣೆ ಪಾಲಕರದ್ದು. ಸಂಪದ್ಭರಿತ ದೇಶದ ನಾಳಿನ ನಾಗರಿಕರೆಂಬ ಅದಮ್ಯ ವಿಶ್ವಾಸ ಹೊಂದಿದ್ದ ಪಂ.ಜವಾಹರಲಾಲ ನೆಹರೂ ತಮ್ಮ ಜನ್ಮದಿನ ಮಕ್ಕಳ ದಿನವನ್ನಾಗಿಸುವ ನಿರ್ಧಾರವನ್ನು ಅಂದೇ ತೆಗೆದುಕೊಂಡಿದ್ದರೆಂದು ಸನ್ಮಾನ ಸ್ವೀಕರಿಸಿದ ಕಾಂಗ್ರೆಸ್ ಹಿರಿಯ ಧುರೀಣ ರಾಬರ್ಟ್ ದದ್ದಾಪುರಿ ಹೇಳಿದರು.

‘ರಂಗಸಾಮ್ರಾಟ ಅಭಿನಯ ಶಾಲೆ’ ಮಕ್ಕಳು ಸಿಕಂದರ ದಂಡಿನ ನಿರ್ದೇಶನದ ಕಾವ್ಯಾಭಿನಯ ರೂಪಕ ಪ್ರದರ್ಶಿಸಿದರು. “ಮೊಬೈಲ್ ಮಲ್ಲ” ಎಂದು ಖ್ಯಾತಿಯ ಮಲ್ಲಪ್ಪ ಹೊಂಗಲ ಹಾಸ್ಯದ ಹೊನಲು, ಇಮಾಮಸಾಬ ವಲ್ಲೆಪ್ಪನವರ ಭಾವೈಕ್ಯತಾ ಗೀತೆಗಳನ್ನು ಪ್ರದರ್ಶಿಸಿದರು.

ಪ್ರೊ. ಕೆ. ಎಸ್. ಕೌಜಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಜಿನದತ್ತ ಹಡಗಲಿ ಕಾರ್ಯಕ್ರಮ ನಿರ್ವಹಿಸಿದರು. ಪ್ರಮೀಳಾ ಜಕ್ಕಣ್ಣವರ ಪ್ರಾರ್ಥನಾ ಗೀತೆ ಹಾಡಿದರು. ಡಾ. ಎಸ್. ಎಸ್. ದೊಡಮನಿ ಉಪಸ್ಥಿತರಿದ್ದರು. ತಾಲೂಕಾ ಕಸಾಪ ಅಧ್ಯಕ್ಷ ಮಹಾಂತೇಶ ನರೇಗಲ್ಲ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...