ಧಾರವಾಡ‌ | ಕಾರ್ಮಿಕರ ಒಡೆದಾಳುವ ಪಿತೂರಿಗಳನ್ನು ಸೋಲಿಸಬೇಕಿದೆ: ಡಿ. ನಾಗಲಕ್ಷ್ಮೀ

Date:

139ನೇ ಅಂತರಾಷ್ಟ್ರೀಯ ಕಾರ್ಮಿಕ ದಿನದ ಅಂಗವಾಗಿ ಎಐಯುಟಿಯುಸಿ ಸಂಘಟನೆ ವತಿಯಿಂದ ಧಾರವಾಡದ ಕಲಾಭವನದಿಂದ ಬಸ್ ನಿಲ್ದಾಣ ವೃತ್, ಜುಬ್ಲಿ ವೃತ್ತದ ವರೆಗೆ ಕಾರ್ಮಿಕರ ಮೆರವಣಿಗೆ ನಡೆಯಿತು.

ಈ ಸಂಧರ್ಭದಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಡಿ ನಾಗಲಕ್ಷ್ಮಿ ಮಾತನಾಡಿ, 1 ಮೇ 1886ರಲ್ಲಿ ಅಮೇರಿಕಾದ ಹೇ ಮಾರುಕಟ್ಟೆಯಲ್ಲಿ, 8 ತಾಸು ದುಡಿಮೆಗಾಗಿ ಕಾರ್ಮಿಕರು ಪ್ರಾರಂಭಿಸಿದ ಹೋರಾಟ, ಇಡೀ ಜಗತ್ತಿನಾದ್ಯಂತ ಬಂಡವಾಳಶಾಹಿ ಮಾಲೀಕರ ಎದೆಯಲ್ಲಿ ನಡುಕ ಹುಟ್ಟಿಸಿತು. ಹೋರಾಟದಲ್ಲಿ ಅದೆಷ್ಟೋ ಕಾರ್ಮಿಕ ಮುಖಂಡರನ್ನು ಹಾಗೂ ಕಾರ್ಮಿಕರ ಕಗ್ಗೋಲೆಯಾಗಿ ರಸ್ತೆಗಳಲ್ಲಿ ಕಾರ್ಮಿಕರ ರಕ್ತ ಹರಿದು, ಬಿಳಿ ಧ್ವಜವು ಕೆಂಪು ಧ್ವಜವಾಯಿತು. ಅಂದಿನಿಂದ ಕೆಂಪು ಧ್ವಜವು ಕಾರ್ಮಿಕ ಹೋರಾಟದ ಸಂಕೇತವಾಗಿದೆ. ಈ ಐತಿಹಾಸಿಕ ಹೋರಾಟದ ಪರಿಣಾಮವಾಗಿ 8 ತಾಸು ದುಡಿಮೆ ಹಾಗೂ ಇನ್ನಿತರ ನ್ಯಾಯಸಮ್ಮತ ಹಕ್ಕುಗಳು ದೊರೆತವು.

ಆದರೆ ಇಂದು ಕನಿಷ್ಟ 10-14 ತಾಸುಗಳ ಕೆಲಸ ಸಾಮಾನ್ಯವಾಗಿದೆ. ಆಳುವ ಎಲ್ಲಾ ಸರ್ಕಾರಗಳು ಕಾರ್ಪೋರೆಟ್ ಮಾಲೀಕರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದು, ಕಷ್ಟಾರ್ಜಿತ 29 ಕಾರ್ಮಿಕ ಪರವಾದ ಕಾನೂನುಗಳನ್ನು ನೆಲಸಮ ಮಾಡಿದೆ. ಸ್ಕೀಂ ಅಡಿಯಲ್ಲಿ ಆಶಾ, ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರನ್ನು ಕನಿಷ್ಟ ಪಕ್ಷ ಕಾರ್ಮಿಕರೆಂದು ಪರಿಗಣಿಸಲೂ ಸಿದ್ಧವಿಲ್ಲ. ನಮ್ಮ ಒಗ್ಗಟ್ಟನ್ನು ಮತ್ತಷ್ಟು ಗಟ್ಟಿಯಾಗಿಸುತ್ತಾ, ಜಾತಿ, ಧರ್ಮ, ಭಾಷೆ, ಜನಾಂಗದ ಹೆಸರಲ್ಲಿ ಕಾರ್ಮಿಕರನ್ನು ಒಡೆದಾಳುವ ಪಿತೂರಿಗಳನ್ನು ಸೋಲಿಸಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘಟನೆಯ ಜಿಲ್ಲಾಧ್ಯಕ್ಷ ಗಂಗಾಧರ್ ಬಡಿಗೇರ್ ವಹಿಸಿದ್ದರು. ಉಪಾಧ್ಯಕ್ಷ ಭವನ ಬಳ್ಳಾರಿ ಕಾರ್ಯಕ್ರಮ ನಡೆಸಿಕೊಟ್ಟರು. ಎಐಯುಟಿಯುಸಿ ಮುಖಂಡ ಯೋಗಪ್ಪ ಜೋತೆಪ್ಪನವರ, ಶೈನಾಜ ಹುಡೇದಮನಿ, ಅಲ್ಲಾಭಕ್ಷ ಕಿತ್ತೂರ, ಜ್ಯೋತಿ ವಾಯಚಾಳ, ಲಲಿತಾ ಹೊಸಮನಿ, ಮಾರುತಿ ವಿಟ್ಟೋಜಿ, ನವೀದ ಲಕಮಾಪುರ, ಜಯರಾಮ್, ಗಂಗಮ್ಮ ನಾಗನಾಯಕ, ಮಂಜುಳಾ ಕಲ್ಲೇದ, ಬೀಬಿ ಆಯಿಷಾ, ರೇಣುಕಾ ಪುರದಣ್ಣವರ ಇದ್ದರು.

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಬಸವಣ್ಣನವರ ಹಾಡಿಗೆ ಹೆಜ್ಜೆ ಹಾಕಿದ ಮಹಿಳೆಯರು

ಕಾರ್ಯಕ್ರಮದಲ್ಲಿ ಆಶಾ, ಬಿಸಿಯೂಟ, ಹಾಸ್ಟೆಲ್ ಗುತ್ತಿಗೆ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿಧ ಸೆಕ್ಟರ್‌ಗಳ ಕಾರ್ಮಿಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...