ಧಾರವಾಡ | ಠೇವಣಿ ಹಣ ಮರಳಿಸದ ಕೋ-ಆಪರೇಟಿವ ಸೊಸೈಟಿಗೆ ದಂಡ ವಿಧಿಸಿ, ಪರಿಹಾರಕ್ಕೆ ಆದೇಶ

Date:

ಒಂದೇ ಕುಟುಂಬದ ಠೇವಣಿ ಹಣವನ್ನು ವಾಪಸ್ ಕೊಡದ ಕಿತ್ತೂರುರಾಣಿ ಚೆನ್ನಮ್ಮ ಕೋ-ಆಪರೇಟಿವ ಸೊಸೈಟಿಗೆ ಜಿಲ್ಲಾ ಗ್ರಾಹಕರ ಆಯೋಗಯು ದಂಡ ವಿಧಿಸಿ, ಠೇವಣಿದಾರರಿಗೆ ಪರಿಹಾರ ನೀಡಲು ಆದೇಶ ಹೊರಡಿಸಿದೆ.

ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಕಿತ್ತೂರುರಾಣಿ ಚೆನ್ನಮ್ಮ ಕೋ-ಆಪರೇಟಿವ ಸೊಸೈಟಿಯಲ್ಲಿ 2023-24 ರ ಸಾಲಿನಲ್ಲಿ ನಗರದ ಸೆಂಟ್ರಲ್‍ ಎಕ್ಸೈಸ್ ಕಾಲೋನಿಯ ನಿವಾಸಿಗಳಾದ ಅಶೋಕ ಮತ್ತು ರೇಖಾ ಅನ್ವೇಕರ್ ಹಾಗೂ ಸುಮಾ ಮತ್ತು ಅವರ ಮಗಳು ನಿಸ್ಮಿತಾ ವಿಠ್ಠಲಕರ ಎಂಬುವವರು ತಲಾ ರೂ:13 ಲಕ್ಷ, ರೂ:5,50,000, ರೂ:14,50,000 ಹಾಗೂ ರೂ:3,50,000 ಮೊತ್ತದಲ್ಲಿ ಇಟ್ಟಿದ್ದ ಠೇವಣಿಗಳ ಅವಧಿ ಮುಕ್ತಾಯವಾಗಿದ್ದವು. ಕೆಲವೊಂದು ಮುಂದಿನ ವರ್ಷದಲ್ಲಿ ಮುಕ್ತಾಯವಾಗುತ್ತಿದ್ದವು.

ದೂರುದಾರರು ಸೊಸೈಟಿಯ ವ್ಯವಹಾರಿಕ ತೊಂದರೆಗಳನ್ನು ಅರಿತು ತಮ್ಮ ಎಲ್ಲ ಠೇವಣಿ ಹಣ ಮರಳಿಸುವಂತೆ ಕೋಆಪರೇಟಿವ್ ಸೊಸೈಟಿಗೆ ಸಾಕಷ್ಟು ಸಲ ಕೇಳಿಕೊಂಡಿದ್ದರೂ ಠೇವಣಿ ಹಣವನ್ನು ಕೊಡದೆ ತಮಗೆ ಮೋಸ ಮಾಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆ ಎಂದು ಹೇಳಿ ಸೊಸೈಟಿಯವರ ಮೇಲೆ ಕ್ರಮಕೈಗೊಂಡು ತಮ್ಮ ಠೇವಣಿ ಹಣ ಮರುಪಾವತಿಸುವಂತೆ ಮತ್ತು ತಮಗಾದ ತೊಂದರೆ ಮತ್ತು ಮಾನಸಿಕ ಹಿಂಸೆಗೆ ಪರಿಹಾರ ಕೊಡಿಸಬೇಕೆಂದು ಜಿಲ್ಲಾ ಗ್ರಾಹಕರ ಆಯೋಗಕ್ಕೆ ಜುಲೈ 9ರಂದು ದೂರುಗಳನ್ನು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರುದಾರರು ಠೇವಣಿ ರೂಪದಲ್ಲಿ ಇಟ್ಟಂತಹ ಹಣವನ್ನು ಎದುರುದಾರರು ತಮ್ಮ ಸೊಸೈಟಿಯ ಅಭಿವೃದ್ಧಿಗಾಗಿ ಉಪಯೋಗಿಸಿಕೊಂಡಿರುವುದು ಕಂಡುಬರುತ್ತದೆ. ಅಲ್ಲದೆ ದೂರುದಾರರಿಗೆ ಹಣದ ಅವಶ್ಯಕತೆ ಇದ್ದು ಅದನ್ನು ಎದುರುದಾರರು ಮರಳಿಸದೆ ಇರುವುದು ಗ್ರಾಹಕರ ರಕ್ಷಣಾ ಕಾಯ್ದೆಯಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದು ಆಯೋಗ ತೀರ್ಪು ನೀಡಿದೆ.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಸೌಹಾರ್ದತೆಗೆ ಸಾಕ್ಷಿಯಾದ ಈದ್ ಮಿಲಾದ್; ಹಬ್ಬದಲ್ಲಿ ವಿವಿಧ ಧರ್ಮಿಯರು ಭಾಗಿ

ಠೇವಣಿ ಇಟ್ಟ ದಿನಾಂಕಗಳಿಂದ ಬಡ್ಡಿಯೊಂದಿಗೆ ಲೆಕ್ಕ ಹಾಕಿ ದೂರುದಾರರಿಗೆ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಹಿಂದಿರುಗಿಸಬೇಕು. ಜೊತೆಗೆ ಸೇವಾ ನ್ಯೂನ್ಯತೆಯಿಂದ ದೂರುದಾರರಿಗೆ ಆಗಿರುವ ಅನಾನುಕೂಲ, ತೊಂದರೆ ಹಾಗೂ ಮಾನಸಿಕ ಹಿಂಸೆಗೆ ತಲಾ ರೂ.50,000 ಪರಿಹಾರ ಹಾಗೂ ತಲಾ ರೂ.10,000 ಪ್ರಕರಣದ ಖರ್ಚು ವೆಚ್ಚ ನೀಡಲು ಎದುರುದಾರರಿಗೆ ಆಯೋಗವು ತೀರ್ಪಿನಲ್ಲಿ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...