ಧಾರವಾಡ | ದಲಿತ ಯುವಕನ ಕೈ ಕತ್ತರಿಸಿದವರನ್ನು ಕೂಡಲೇ ಗಡಿಪಾರು ಮಾಡಲು ದಸಂಸ ಆಗ್ರಹ

Date:

ಕನಕಪುರ ತಾಲೂಕಿನ ದಲಿತ ಯುವಕ ಅನೀಶ್ ಮೇಲೆ ನಡೆದ ದೌರ್ಜನ್ಯಕ್ಕೆ ಸೂಕ್ತ ನ್ಯಾಯ ಒದಗಿಸಿ ಆರೋಪಿಗಳಿಗೆ ಗಡಿಪಾರು ಶಿಕ್ಷೆ ಒದಗಿಸಬೇಕು ಎಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯು ಶುಕ್ರವಾರ ಸಂಶಿ ಗ್ರಾಮದ ಉಪ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.

ನಂತರ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಸಂಘಟನೆಯ ಉಪಾಧ್ಯಕ್ಷ ಶಿವಪ್ಪ ಮುಡ್ಸಿಬಣ, “ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಳಗಾಳು ಗ್ರಾಮದಲ್ಲಿ ಪರಿಶಿಷ್ಠರ ಎನ್.ಕೆ. ಕಾಲೋನಿಗೆ ನುಗ್ಗಿ ಅನೀಶ್ ಎಂಬ ದಲಿತ ಯುವಕನ ಕೈ ಕತ್ತರಿಸಿ ದೈಹಿಕ ದೌರ್ಜನ್ಯ ಎಸಗಿದ್ದಾರೆ. ಒಕ್ಕಲಿಗ ಸಮಾಜದ ಹರ್ಷ ಅಲಿಯಾಸ್ ಕೈಮ ಕರುಣೇಶ, ರಾಹುಲ್, ಶಿವ, ಸುಬ್ಬ, ದರ್ಶನ ಇವರನ್ನು ಕೂಡಲೇ ಗಡಿಪಾರು ಮಾಡದಿದ್ದಲ್ಲಿ ದಲಿತ ಸಂಘರ್ಷಣಾ ಸಮಿತಿಯಿಂದ ಹೋರಾಟ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ದಲಿತರ ಮೇಲಿನ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ನಿರಂತರವಾಗಿ ಮೇಲ್ವರ್ಗದವರಿಂದ ದಲಿತ ತುಳಿತಕ್ಕೆ ಒಳಗಾಗುತ್ತಲೇ ಇದ್ದಾರೆ. ಇನ್ನಾದರೂ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ಮಾಡಿದ ಸಮಾಜದವರು ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ದಲಿತ ಯುವಕನಿಗೆ ಸೂಕ್ತ ಪರಿಹಾರ ನೀಡಬೇಕು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ತುಮಕೂರು | ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ‘ಡಿ’ ಗ್ರೂಪ್ ನೌಕರರೇ ಹಾಸ್ಟೆಲ್ ವಾರ್ಡನ್‌ಗಳು!

ಮನವಿ ಸಲ್ಲಿಸುವ ಸಂದರ್ಭದಲ್ಲಿ ಉಪಾಧ್ಯಕ್ಷ ಶಿವಪ್ಪ ಮುಡ್ಸಿಬಣ, ಪರಮೇಶ ರವಡೂರ, ಕುಮಾರ್ ಬೆಳವಡಿ, ಶ್ರೀಧರ ಕೋಟಿ, ಮಲ್ಲಿಕಾರ್ಜುನ ಕೋಟಿ, ಮೈಲಾರಿ ಕೋಟಿ, ಮಹಾಂತೇಶ ಕಲ್ಲಾರಿ, ಈರಣ್ಣ ಕಾಳಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...