ಧಾರವಾಡ | ಅಂಗನವಾಡಿಗೆ ಡಿಸಿ, ಸಿಇಓ ದಿಢೀರ್ ಭೇಟಿ; ಇಲಾಖೆ ಯೋಜನೆಗಳ ಪರಿಶೀಲನೆ

Date:

ಧಾರವಾಡ ಮದಿಹಾಳ ನಗರದ ಸಿದ್ಧಾರೂಢ ಕಾಲೋನಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ನ.12ರ ಮಧ್ಯಾಹ್ನ ದಿಡೀರ್ ಭೇಟಿ ನೀಡಿ, ಮಕ್ಕಳ ಹಾಜರಾತಿ, ದಾಖಲಾತಿ ಪರಿಶೀಲಿಸಿದರು.

ಅಂಗನವಾಡಿಯಲ್ಲಿ ಒಟ್ಟು 37 ಜನ ಮಕ್ಕಳು ಹಾಜರಿದ್ದರು. ಹಾಗೂ ಅಂಗನವಾಡಿ ಶಿಕ್ಷಕಿಯರು ಮಕ್ಕಳಿಗೆ ಹಾಡು ಹಾಡಿಸಿ, ಹಾಡಿನೊಂದಿಗೆ ನೃತ್ಯವನ್ನು ಮಾಡಿಸಿದರು. ಅದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಯವರು ಸಹ ಮಕ್ಕಳೊಂದಿಗೆ ಹಾಡು ಹಾಡಿ ಆನಂದಿಸಿದರು. ಅದೇ ರೀತಿ ನೆಲದ ಮೇಲೆ ಕುಳಿತು ಪ್ರತಿ ಮಗುವಿನೊಂದಿಗೆ ಮಾತನಾಡಿ ಅವರ ಶಾಲೆ, ಮನೆ, ಆಟಗಳು ಮತ್ತು ಊಟದ ಬಗ್ಗೆ ವಿಚಾರಿಸಿದರು. ಮಕ್ಕಳ ಹಾಸ್ಯ, ನಗು, ಕುತೂಹಲ ಮತ್ತು ಪ್ರಾಮಾಣಿಕತೆ ಕಂಡು ಜಿಲ್ಲಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಕ್ಕಳಿಗೆ ಚಾಕ್ಲೇಟ್ ನೀಡಿ ಸಿಹಿ ತಿನಿಸಿ ಅವರ ದಿನವನ್ನು ಇನ್ನಷ್ಟು ಮಧುರಗೊಳಿಸಿದರು. ಅಲ್ಲದೆ, ಮಕ್ಕಳ ಆಹಾರ ಮತ್ತು ಆರೋಗ್ಯದ ಕಡೆ ಗಮನ ಹರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚಿಸಿದರು. ಅಂಗನವಾಡಿ ಕೇಂದ್ರದ ಕಾರ್ಯವೈಖರಿ, ಪೌಷ್ಠಿಕ ಆಹಾರ ವಿತರಣೆಯ ವಿಧಾನ, ಮಕ್ಕಳ  ಹಾಜರಾತಿ, ದಾಖಲೆಗಳು ಹಾಗೂ ಸ್ವಚ್ಛತೆ ಕುರಿತಂತೆ ಡಿಸಿ ಮತ್ತು ಸಿಇಓ ಅವರು ಸಮಗ್ರ ಪರಿಶೀಲನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಡಾ.ಎಚ್.ಎಚ್.ಕುಕನೂರ ಅವರು ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಒಟ್ಟು 1,622 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತವೆ. ಅವುಗಳಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ 0 ದಿಂದ 6 ವರ್ಷದ ಮಕ್ಕಳು ಸೇರಿ ಒಟ್ಟು 1,22,298 ಫಲಾನುಭವಿಗಳು ದಾಖಲಾಗಿದ್ದಾರೆ.

ಐಸಿಡಿಎಸ್ ಯೋಜನೆಯಲ್ಲಿ ಪೋಷಷ ಪ್ರ್ಯಾಕರ್ ಎಂಬ ಆ್ಯಪ್ ಮೂಲಕ ಫಲಾನುಭವಿಗಳನ್ನು ದಾಖಲು ಮಾಡಿಕೊಂಡು ಇಲಾಖೆಯ ಸೇವೆಗಳನ್ನು ಒದಗಿಸಲಾಗುತ್ತಿದೆ. ಅದಕ್ಕೆ ಫೇಸ್ ರಿಕಾಗ್ನೈಜೆಷನ್ ಸಿಸ್ಟಮ್ ಅವಶ್ಯವಿದ್ದು ಧಾರವಾಡ ಜಿಲ್ಲೆಯ ಒಟ್ಟು 1,22,298 ಫಲಾನುಭವಿಗಳ ಪೈಕಿ 1,19,841 ಫಲಾನುಭವಿಗಳನ್ನು ಫೇಸ್ ರಿಕಾಗ್ನೈಜೆಷನ್ ಸಿಸ್ಟಮ್‍ನಲ್ಲಿ ದಾಖಲಿಸಿ, ವಿವರ  ಅಳವಡಿಸಲಾಗಿದೆ. ಇನ್ನುಳಿದ 2,449 ಬಾಕಿ ಉಳಿದಿರುವ ಫಲಾನುಭವಿಗಳ ಪೈಕಿ, ಕೆಲವು ಆಧಾರ್ ಕಾರ್ಡ್ ಸಮಸ್ಯೆ, ಜನನ ಪ್ರಮಾಣ ಪತ್ರ ಇಲ್ಲದಿರುವುದು, ಆಧಾರ ತಿದ್ದುಪಡಿ ಕಾರಣಗಳಿಂದ ಬಾಕಿ ಉಳಿದಿವೆ ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ, ನೀಡಿದರು.

ಅಂಗನವಾಡಿ ಕೇಂದ್ರಕ್ಕೆ ಆಗಮಿಸುತ್ತಿದ್ದ, ಗೊಲ್ಲ, ದುರ್ಗಮುರಗಿ ಹಾಗೂ ಇತರ ಅಲೆಮಾರಿ ಸಮಯದಾಯಗಳ ಗರ್ಭಿಣಿಯರು ಹಾಗೂ ಬಾಣಂತಿಯರನ್ನು ಮಾತನಾಡಿಸಿದ ಜಿಲ್ಲಾಧಿಕಾರಿಗಳು, ಅವರ ಮಕ್ಕಳ ಹಾಗೂ ಮಹಿಳಾ ಪಲಾನುಭವಿಗಳ ಫೇಸ್ ರಿಕಾಗ್ನೈಜೆಷನ್ ಸಿಸ್ಟಮ್ ಮಾಡುವ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು. ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಡಿಸಿ, ಸಿಇಓ ಬಿಸಿಯೂಟ ಸೇವನೆ: ಸರ್ಕಾರದ ಪೌಷ್ಠಿಕ ಯೋಜನೆಗಳ ಪ್ರಾಯೋಗಿಕ ಅನುಷ್ಠಾನವನ್ನು ಗಮನಿಸಿದರು. ಅಂಗನವಾಡಿ ಮಕ್ಕಳೊಂದಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು ಸಿಇಓ ಭುವನೇಶ ಪಾಟೀಲ ಅವರು ಮಧ್ಯಾಹ್ನದ ಬಿಸಿಯೂಟದಲ್ಲಿ ಅನ್ನ, ಸಾರು, ಮೊಟ್ಟೆ ಹಾಗೂ ಬಾಳೆಹಣ್ಣುನ್ನು ಸೇವಿಸಿದರು. ಮಕ್ಕಳಿಗೆ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಕೊಡುವ ಆಹಾರ ಸರಕಾರದ ನಿಯಮಾನುಸಾರ ಇರಬೇಕು. ಆಹಾರದ ತೂಕ ಮತ್ತು ಪೌಷ್ಟಿಕಾಂಶದಲ್ಲಿ ವ್ಯತ್ಯಾಸ ಆಗಬಾರದು. ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳನ್ನು, ಗರ್ಭಿಣಿಯರನ್ನು ತಾಯಿಯಂತೆ ಮಾತೃಹೃದಯದಿಂದ ಕಾಣಬೇಕು. ಸರಕಾರದ ಸೌಲಭ್ಯಗಳು ದುರಪಯೋಗ ಆಗದಂತೆ, ವ್ಯರ್ಥವಾಗದಂತೆ ಮುನ್ನೆಚ್ಚರಿಕೆವಹಿಸಿ, ಕೇಂದ್ರ ತಮ್ಮ ಸ್ವಂತ ಮನೆ ಎಂದು ಭಾವಿಸಿ, ಮುನ್ನಡೆಸಬೇಕು ಎಂದು ಅಂಗನವಾಡಿ ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುನೇಶ್ ಪಾಟೀಲ ಸಹ ಮಕ್ಕಳು ಹಾಗೂ ಸಿಬ್ಬಂದಿಯೊಂದಿಗೆ ಸಂಭಾಷಣೆ ನಡೆಸಿ, ಅಂಗನವಾಡಿಯ ಕೆಲಸದ ವಿಧಾನ ಹಾಗೂ ಮಕ್ಕಳ ಪೋಷಣೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರು. ಅಂಗನವಾಡಿಗೆ ದಾಖಲಾಗುವ ಪ್ರತಿ ಮಗುವೂ ಪೂರ್ಣ ಪೌಷ್ಠಿಕ ಆಹಾರ ಪಡೆದುಕೊಳ್ಳಬೇಕು ಮತ್ತು ಪ್ರತಿದಿನದ ಮಕ್ಕಳ ಹಾಜರಾತಿ ಖಚಿತವಾಗಿರಬೇಕು ಎಂದು ಕಾರ್ಯಕರ್ತೆಯರಿಗೆ ಸೂಚನೆ ನೀಡಿದರು.

ಇದನ್ನೂ ಓದಿ ಧಾರವಾಡ | ಅವಳಿನಗರ ಬೈಪಾಸ್ ರಸ್ತೆ ಕಾಮಗಾರಿ ಶೀಘ್ರ ಮುಗಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಡೆಸುತ್ತಿರುವ ಅಂಗನವಾಡಿ ಕೇಂದ್ರಗಳು ಮಕ್ಕಳ ಸಮಗ್ರ ಬೆಳವಣಿಗೆಯ ಮೊದಲ ಹಂತ. ಇಲ್ಲಿ ಮಕ್ಕಳಿಗೆ ನೀಡುವ ಆರೈಕೆ, ಶಿಕ್ಷಣ ಮತ್ತು ಪೌಷ್ಠಿಕ ಆಹಾರವೇ ಅವರ ಭವಿಷ್ಯದ ಬುನಾದಿ. ಪ್ರತಿ ಅಂಗನವಾಡಿ ಕೇಂದ್ರವು ಮಾದರಿಯಾಗಬೆಕು.  ಕೇಂದ್ರದ ಸಿಬ್ಬಂದಿಗಳು, ಮಕ್ಕಳ ಜೊತೆ ತಾಳ್ಮೆಯಿಂದ ವರ್ತಿಸಬೇಕು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...