ಧಾರವಾಡ | ಮಹಾನಗರ ಪಾಲಿಕೆ ಇಂಜಿನಿಯರ್‌ ಸಾವು; ಶವವಿಟ್ಟು ಧರಣಿ

Date:

  • ಎಲ್ ಆ್ಯಂಡ್ ಟಿ ಕಂಪನಿ ಒತ್ತಡ ಸಹಿಸಲಾಗದೆ ಸಾವನ್ನಪ್ಪಿದ ಆರೋಪ
  • ಜನಜಾಗೃತಿ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ಪ್ರತಿಭಟನೆ

ಕಳೆದ ಕೆಲವು ವರ್ಷಗಳಿಂದ ಎಲ್ ಆ್ಯಂಡ್ ಟಿ ಕಂಪನಿ ನೀರು ಸರಬರಾಜು ನೋಡಿಕೊಳ್ಳುತ್ತಿದ್ದ ಇಂಜಿನಿಯರ್‌ರೊಬ್ಬರು ಕಂಪನಿಯ ಕೆಲಸದ ಒತ್ತಡದಿಂದ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ಕಂಪನಿಯೇ ಹೊಣೆ ಎಂದು ಆರೋಪಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಎದುರು ಇಂಜಿನಿಯರ್‌ ಮೃತದೇಹವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ.

ಪಾಲಿಕೆಯು ನಗರದ ಹಲವು ಭಾಗಗಳಿಗೆ ನೀರು ಸರಬರಾಜು ಮಾಡಲು ಎಲ್ ಆ್ಯಂಡ್ ಟಿ ಕಂಪನಿಗೆ ಗುತ್ತಿಗೆ ನೀಡಿದೆ. ಕಂಪನಿಯಲ್ಲಿ ಕಳೆದ 2 ವರ್ಷಗಳಿಂದ ಅರುಣ ಯಂಡಿಗೇರಿ ಎಂಬುವವರ ಇಂಜಿನಿಯರ್‌ ಆಗಿ ಸೇವೆ ಸಲ್ಲಿಸುತ್ತಿದ್ದರು. ಗುರುವಾರ ಕೆಲಸಕ್ಕೆ ತೆರಳಿದ್ದಾಗ ಅವರಿಗೆ ಹೃದಯಾಘಾತವಾಗಿತ್ತು.

ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಸುದ್ದಿ ತಿಳಿದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ, ನಾಗರಾಜ ಕಿರಣಗಿ ಸ್ಥಳಕ್ಕೆ ತೆರಳಿದ್ದಾರೆ. ಅವರ ಸಾವಿಗೆ ಕಂಪನಿಯೇ ಕಾರಣವೆಂದು ಆರೋಪಿಸಿ ಪಾಲಿಕೆ ಮುಂಭಾಗ ಇಂಜಿನಿಯರ್‌ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಇಂಜಿನಿಯರ್ ಸಾವಿನ ಹೊಣೆಯನ್ನು ಎಲ್ ಆಂಡ್ ಟಿ ಕಂಪನಿ, ಮಹಾನಗರ ಪಾಲಿಕೆ ಹಾಗೂ ಕೆ.ಯು.ಐ.ಡಿ.ಎಫ್.ಸಿ ಹೊರಬೇಕು ಎಂದು ಘೋಷಣೆ ಕೂಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆ ನೇತೃತ್ವ ವಹಿಸಿದ್ದ ಬಸವರಾಜ ಕೊರವರ ಮಾತನಾಡಿ, “ಎಲ್ ಆಂಡ್ ಟಿ‌ ಕಂಪನಿಯ ಕೆಲಸದ ಒತ್ತಡಕ್ಕೆ ಈಗಾಗಲೇ 3 ಜನ ಬಲಿಯಾಗಿದ್ದಾರೆ. ಆದರೆ, ಯಾವ ಉದ್ಯೋಗಿಗಳಿಗೂ ಈವರೆಗೂ ನೇಮಕಾತಿ ಪತ್ರ, ಪಿಎಫ್ ಹಾಗೂ ಇ.ಎಸ್.ಐ ಸೌಲಭ್ಯ ನೀಡಿಲ್ಲ. ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಇಂಜಿನಿಯರ್ ಅರುಣ್ ಹೃದಯಾಘಾತದಿಂದ ಸಾವನ್ನಪ್ಪಿದರೂ ಯಾರೊಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಆತನ ಸಾವಿಗೆ ನಾವುಗಳ್ಯಾರು ಹೊಣೆಗಾರರಲ್ಲ ಎಂದು ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ” ಎಂದು ಕಿಡಿ ಕಾರಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಮೇಯರ್ ಹಾಗೂ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡ ಬಸವರಾಜ್, “ನಾಳೆ ನಮಗೆ ಇದು ಸಂಬಂಧಿಸಿಲ್ಲ ಎಂದು ಕೈ ಎತ್ತಬೇಡಿ. ಈಗಾಗಲೇ 82 ನೌಕರರ ‌ಮರುನೇಮಕ ವಿಚಾರದಲ್ಲಿ ಅನ್ಯಾಯ ಎಸಗಲಾಗಿದೆ” ಎಂದು ತರಾಟೆಗೆ ತೆಗೆದುಕೊಂಡರು.

ಉಪಾಧ್ಯಕ್ಷ ನಾಗರಾಜ ಕಿರಣಗಿ ಮಾತನಾಡಿ, “ಬಾಳಿ ಬದುಕಬೇಕಾಗಿದ್ದ ಯುವ ಇಂಜಿನಿಯರ್ ಅರುಣ ಅವರ ಕುಟುಂಬಕ್ಕೆ ಕನಿಷ್ಟ 10 ಲಕ್ಷ ಪರಿಹಾರ ನೀಡಬೇಕು, ಆತನ ಸಾವಿಗೆ ಎಲ್ ಆಂಡ್ ಟಿ, ಮಹಾನಗರ ಪಾಲಿಕೆ ಹಾಗೂ ಕೆ.ಯು.ಐ.ಡಿ.ಎಫ್.ಸಿ ಸಮಾನ ಹೊಣೆ” ಎಂದು ದೂರಿದರು.

ಪ್ರತಿಭಟನಕಾರರ ಮನವೋಲಿಸಿದ ಮೇಯರ್ ಈರೇಶ ಅಂಚಟಗೇರಿ ಮತ್ತು ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಅವರು ಕಂಪನಿ ವತಿಯಿಂದ ಮೃತನ ಕುಟುಂಬಕ್ಕೆ 2.5 ಲಕ್ಷ ರೂ. ಪರಿಹಾರ ಹಾಗೂ ಪತ್ನಿಗೆ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆದು ಮೃತನ ಶವವನ್ನು ಮುಂದಿನ ಕ್ರಿಯೆಗೆ ಕೊಂಡೊಯ್ದರು.

ಪ್ರತಿಭಟನೆ ವೇಳೆ ಕರ್ನಾಟಕ ಥಿಂಕರ್ಸ್ ಪೋರಮ್ ಅಧ್ಯಕ್ಷ ಪಿ.ಎಚ್. ನೀರಲಕೇರಿ, ಮಹಾನಗರ ಪಾಲಿಕೆ ಸದಸ್ಯ ದೀಪಾ ಸಂತೋಷ ನೀರಲಕಟ್ಟಿ, ಶಂಭು ಸಾಲಮನಿ, ಇಮ್ರಾನ್ ಯಲಿಗಾರ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ನೀರು ಸರಬರಾಜು ನೌಕರರು ಪಾಲ್ಗೊಂಡು ಹೋರಾಟಕ್ಕೆ ತಮ್ಮ ಬೆಂಬಲ ನೀಡಿ ಆಕ್ರೋಶ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...